ಬ್ರೇಕಿಂಗ್ ನ್ಯೂಸ್
22-09-21 10:51 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆ.22: ಕೋವಿಡ್ ಸೋಂಕಿನಿಂದ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡುವುದಾಗಿ ಕೇಂದ್ರ ಸರಕಾರ ಸುಪ್ರೀಂ ಕೋರ್ಟಿಗೆ ಅಫಿಡವಿಟ್ ಸಲ್ಲಿಸಿದೆ. ಈ ಬಗ್ಗೆ ಕೇಂದ್ರ ವಿಪತ್ತು ನಿರ್ವಹಣಾ ಪ್ರಾಧಿಕಾರವು ಕೋರ್ಟಿಗೆ ವರದಿ ನೀಡಿದ್ದು, ರಾಜ್ಯ ಸರಕಾರಗಳ ಮೂಲಕ ಸೋಂಕು ಪೀಡಿತರಾಗಿ ಮೃತಪಟ್ಟ ಪ್ರತಿ ಕುಟುಂಬಕ್ಕೂ ತಲಾ 50 ಸಾವಿರ ಪರಿಹರಾ ನೀಡುವುದಾಗಿ ಹೇಳಿದೆ.
ಅಲ್ಲದೆ, ಕೋವಿಡ್ ಸಂಬಂಧಪಟ್ಟ ಕಾರ್ಯಾಚರಣೆ, ಇನ್ನಿತರ ನೆರವು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಮೃತಪಟ್ಟ ವ್ಯಕ್ತಿಯ ಕುಟುಂಬಸ್ಥರಿಗೂ ಹೆಚ್ಚುವರಿ ಪರಿಹಾರ ನೀಡುವುದಾಗಿ ಕೋರ್ಟಿಗೆ ಹೇಳಿದೆ. ಆದರೆ, ಹೀಗೆ ಪರಿಹಾರ ಪಡೆಯುವ ಮಂದಿ ಆರೋಗ್ಯ ಇಲಾಖೆಯಿಂದ ನೀಡಿರುವ ಮಾರ್ಗಸೂಚಿ ಪ್ರಕಾರ ಕೋವಿಡ್ ಕಾರಣದಿಂದಾಗಿಯೇ ಸಾವನ್ನಪ್ಪಿದ್ದಾಗಿ ಸಾಬೀತು ಮಾಡಬೇಕಿದೆ. ಪರಿಹಾರ ಮೊತ್ತವನ್ನು ರಾಜ್ಯಗಳ ವಿಪತ್ತು ಪರಿಹಾರ ನಿಧಿಯಿಂದ ನೀಡುವುದಾಗಿ ಹೇಳಿಕೆ ನೀಡಿದೆ.

ಕೋವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬಸ್ಥರು ಸೂಕ್ತ ದಾಖಲೆ, ಕೋವಿಡ್ ಸಾವಿನ ಬಗ್ಗೆ ದಾಖಲಾತಿಗಳೊಂದಿಗೆ ಆಯಾ ಜಿಲ್ಲಾಡಳಿತಕ್ಕೆ ಅರ್ಜಿ ಸಲ್ಲಿಸಬೇಕಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳು ಒಂದು ತಿಂಗಳ ಒಳಗೆ ಪರಿಹಾರ ಮೊತ್ತವನ್ನು ಕುಟುಂಬಸ್ಥರಿಗೆ ನೀಡಬೇಕು. ಆಧಾರ್ ಲಿಂಕ್ ಆಧರಿಸಿ, ಪರಿಹಾರ ಮೊತ್ತವನ್ನು ನೇರವಾಗಿ ಜಮೆ ಮಾಡಬೇಕು ಎಂದು ಕೇಂದ್ರ ಸರಕಾರ ಅಫಿಡವಿಟ್ ನಲ್ಲಿ ಹೇಳಿದೆ.
ಕೋವಿಡ್ ಸೋಂಕಿನಿಂದ ಮೃತರಿಗೆ ಮರಣ ಪ್ರಮಾಣಪತ್ರ ಕೊಡುವುದಕ್ಕೆ ವಿಳಂಬಿಸಿದ ಬಗ್ಗೆ ಇತ್ತೀಚೆಗೆ ಸುಪ್ರೀಂ ಕೋರ್ಟ್ ಕೇಂದ್ರ ಸರಕಾರವನ್ನು ತರಾಟೆಗೆತ್ತಿಕೊಂಡಿತ್ತು.
The families of those who die of Covid will receive Rs 50,000 ex gratia from the state governments, the Centre informed the Supreme Court today. Significantly, compensation will be paid against not only for deaths that have already occurred but for future ones, too, the court was told.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm