ಬ್ರೇಕಿಂಗ್ ನ್ಯೂಸ್
09-09-20 11:05 pm Headline Karnataka News Network ದೇಶ - ವಿದೇಶ
ಜೆರುಸಲೆಂ, ಸೆಪ್ಟೆಂಬರ್ 9: ಇಸ್ರೇಲ್ ಮತ್ತು ಯುನೈಟೆಡ್ ಅರಬ್ ಎಮಿರೈಟ್ಸ್ ನಡುವೆ ಒಪ್ಪಂದ ಏರ್ಪಡಲು ನಡೆಸಿದ ಪ್ರಯತ್ನಕ್ಕಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ನೊಬೆಲ್ ಶಾಂತಿ ಪುರಸ್ಕಾರಕ್ಕಾಗಿ ನಾಮನಿರ್ದೇಶನ ಮಾಡಲಾಗಿದೆ.
ನಾರ್ವೆ ಸಂಸತ್ನ ಸದಸ್ಯ ಮತ್ತು ನ್ಯಾಟೋ ಸಂಸದೀಯ ಸಭೆಯ ಅಧ್ಯಕ್ಷ ಕ್ರಿಸ್ಟಿಯನ್ ಟೈಬ್ರಿಂಗ್-ಜೆಡ್ಡೆ ಈ ನಾಮನಿರ್ದೇಶನ ಸಲ್ಲಿಸಿದ್ದಾರೆ ಎಂದು ಫಾಕ್ಸ್ ನ್ಯೂಸ್ ವರದಿ ಮಾಡಿದೆ.
ಮ್ ಜಾಂಗ್ ಉನ್ ಅವರಿಗಾಗಿ ಸಿಂಗಪುರದಲ್ಲಿ ಆಯೋಜಿಸಿದ್ದ ಸಮಾವೇಶದ ಸಲುವಾಗಿ ಟ್ರಂಪ್ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡುವಂತೆ ಟೈಬ್ರಿಂಗ್ 2018ರಲ್ಲಿ ಕೂಡ ನಾಮನಿರ್ದೇಶನ ಸಲ್ಲಿಸಿದ್ದರು.
ಇತರೆ ನೊಬೆಲ್ ಶಾಂತಿ ಪುರಸ್ಕಾರ ನಾಮನಿರ್ದೇಶಿತ ವ್ಯಕ್ತಿಗಳಿಗಿಂತಲೂ ಹೆಚ್ಚು ದೇಶಗಳ ಮಧ್ಯೆ ಶಾಂತಿ ಸ್ಥಾಪಿಸುವ ಪ್ರಯತ್ನದಲ್ಲಿ ಡೊನಾಲ್ಡ್ ಟ್ರಂಪ್ ಕೆಲಸ ಮಾಡುವ ಮೂಲಕ ಅರ್ಹತೆ ಗಳಿಸಿದ್ದಾರೆ ಎಂದು ಟೈಬ್ರಿಂಗ್ ಹೇಳಿದ್ದಾರೆ. ಭಾರತ-ಪಾಕಿಸ್ತಾನ ನಡುವಿನ ಕಾಶ್ಮೀರ ಗಡಿ ವಿವಾದ, ಉತ್ತರ ಮತ್ತು ದಕ್ಷಿಣ ಕೊರಿಯಾ ಸಂಘರ್ಷದಂತಹ ದೇಶಗಳ ಮಧ್ಯೆ ಇರುವ ಸಂಘರ್ಷಗಳನ್ನು ಪರಿಹರಿಸಲು ಸಂಪರ್ಕ ಮೂಡಿಸುವ ಪ್ರಯತ್ನದಲ್ಲಿ ಡೊನಾಲ್ಡ್ ಟ್ರಂಪ್ ಪ್ರಮುಖ ಪಾತ್ರವಹಿಸಿದ್ದಾರೆ ಎಂದು ಇಸ್ರೇಲ್-ಯುಎಇ ಒಪ್ಪಂದವನ್ನು ಉಲ್ಲೇಖಿಸಿ ನೊಬೆಲ್ ಸಮಿತಿಗೆ ಪತ್ರ ಬರೆದಿದ್ದಾರೆ.
ಸಮಿತಿಯು ವಾಸ್ತವಗಳನ್ನು ಗಮನಿಸಬೇಕು ಮತ್ತು ವಾಸ್ತವಗಳ ಆಧಾರದಲ್ಲಿ ಅವರನ್ನು ನಿರ್ಧರಿಸಬೇಕೇ ಹೊರತು ಅವರ ವರ್ತನೆಯ ಆಧಾರದ ಮೇಲೆ ಅಲ್ಲ. ಇತ್ತೀಚಿನ ವರ್ಷಗಳಲ್ಲಿ ಶಾಂತಿ ಪುರಸ್ಕಾರಗಳನ್ನು ಪಡೆದಿರುವ ಜನರು ಡೊನಾಲ್ಡ್ ಟ್ರಂಪ್ ಅವರಿಗಿಂತಲೂ ಕಡಿಮೆ ಕೆಲಸ ಮಾಡಿದ್ದಾರೆ ಎಂದಿರುವ ಅವರು, ತಾವು ಡೊನಾಲ್ಡ್ ಟ್ರಂಪ್ ಅಭಿಮಾನಿಯಲ್ಲ ಎಂದು ತಿಳಿಸಿದ್ದಾರೆ. ಉದಾಹರಣೆಗೆ, ಬರಾಕ್ ಒಬಾಮಾ ಯಾವ ಕೆಲಸವನ್ನೂ ಮಾಡಿರಲಿಲ್ಲ ಎಂದು 2009ರಲ್ಲಿ ಅಮೆರಿಕಾ ಅಧ್ಯಕ್ಷರಾಗಿದ್ದಾಗ ನೊಬೆಲ್ ಶಾಂತಿ ಪುರಸ್ಕಾರ ಪಡೆದಿದ್ದ ಒಬಾಮಾ ಹೆಸರು ಪ್ರಸ್ತಾಪಿಸಿದ್ದಾರೆ. ಅಂತಾರಾಷ್ಟ್ರೀಯ ರಾಜತಾಂತ್ರಿಕತೆ ಮತ್ತು ಜನರ ನಡುವೆ ಸಹಕಾರ ಬಲಪಡಿಸುವಲ್ಲಿ ಬರಾಕ್ ಒಬಾಮಾ ಅಭೂತಪೂರ್ವ ಪ್ರಯತ್ನಗಳನ್ನು ನಡೆಸಿದ್ದಾರೆ ಎಂದು ನೊಬೆಲ್ ಸಮಿತಿ ಹೇಳಿತ್ತು.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm