ಬ್ರೇಕಿಂಗ್ ನ್ಯೂಸ್
26-09-21 09:54 pm Headline Karnataka News Network ದೇಶ - ವಿದೇಶ
ಮುಂಬೈ, ಸೆ.26: ಮಾನ್ಯಾವರ್ ಬ್ರಾಂಡ್ ಬಟ್ಟೆಗಳ ಜಾಹೀರಾತಿನಲ್ಲಿ ಹಿಂದುಗಳ ಸಾಂಪ್ರದಾಯಿಕ ಕನ್ಯಾದಾನ ವಿಧಿಯನ್ನು ಬಳಸಿಕೊಂಡಿದ್ದನ್ನು ವಿರೋಧಿಸಿ ಹಿಂದು ಸಂಘಟನೆಗಳ ಕಾರ್ಯಕರ್ತರು ಬಟ್ಟೆ ಮಳಿಗೆಯ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ವೇದಾಂತ್ ಫ್ಯಾಶನ್ಸ್ ಲಿಮಿಟೆಡ್ ಗೆ ಸೇರಿದ ಮಾನ್ಯಾವರ್ ಬ್ರಾಂಡಿನ ಬಟ್ಟೆಗಳ ಪ್ರಚಾರಕ್ಕೆ ಕನ್ಯಾದಾನ ವಿಧಿಯನ್ನು ಜಾಹೀರಾತು ರೂಪದಲ್ಲಿ ಬಳಕೆ ಮಾಡಲಾಗಿತ್ತು. ನವಿ ಮುಂಬೈನ ವಾಶಿ ಏರಿಯಾದಲ್ಲಿ ಬಟ್ಟೆ ಮಳಿಗೆಯ ಮುಂದೆ ಹಿಂದು ಸಂಘಟನೆಗಳ ಕಾರ್ಯಕರ್ತರು ಸೇರಿ ಪ್ರತಿಭಟನೆ ನಡೆಸಿದ್ದಾರೆ.

ಹಿಂದು ಜನಜಾಗೃತಿ ಸಮಿತಿ ಹೆಸರಲ್ಲಿ ಪ್ಲೇಕಾರ್ಡ್ ಹಿಡಿದು ಘೋಷಣೆ ಕೂಗಿದ ಪ್ರತಿಭಟನಾಕಾರರು ಕೂಡಲೇ ಜಾಹೀರಾತನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಈ ಸಂದರ್ಭ ಮಾತನಾಡಿದ ಡಾ.ಉದಯ್ ಧೂರಿ, ಈ ರೀತಿ ಹಿಂದುಗಳ ಮದುವೆ ಸಂದರ್ಭದಲ್ಲಿ ನಡೆಸುವ ಕನ್ಯಾದಾನ ವಿಧಿಯನ್ನು ಜಾಹೀರಾತು ಪ್ರಚಾರಕ್ಕೆ ಬಳಸಿಕೊಂಡಿದ್ದು ತಪ್ಪು. ಈ ಮೂಲಕ ಕನ್ಯಾದಾನವನ್ನು ಜನರಿಗೆ ತಪ್ಪಾಗಿ ಬಿಂಬಿಸಲಾಗಿದೆ. ಇದರಿಂದ ಹಿಂದುಗಳ ಭಾವನೆಗೆ ಘಾಸಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಬಟ್ಟೆ ಮಳಿಗೆಯ ಕಂಪನಿಯವರು ಬೇಷರತ್ ಕ್ಷಮೆ ಕೇಳಬೇಕು. ಅಲ್ಲದೆ, ಜಾಹೀರಾತನ್ನೂ ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಜನರು ಕೂಡ ಕಂಪನಿಯವರು ಕ್ಷಮೆ ಕೇಳೋ ವರೆಗೂ ಮಾನ್ಯಾವರ್ ಬಟ್ಟೆಗಳನ್ನು ಬಹಿಷ್ಕರಿಸಬೇಕು ಎಂದು ಕರೆ ನೀಡಿದ್ದಾರೆ.
A pro-Hindu outfit staged a protest outside the showroom of a clothing brand in Navi Mumbai against its advertisement featuring the marriage ritual of 'kanyadaan', claiming that it hurt religious sentiments of the community.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm