ಬ್ರೇಕಿಂಗ್ ನ್ಯೂಸ್
26-09-21 09:54 pm Headline Karnataka News Network ದೇಶ - ವಿದೇಶ
ಮುಂಬೈ, ಸೆ.26: ಮಾನ್ಯಾವರ್ ಬ್ರಾಂಡ್ ಬಟ್ಟೆಗಳ ಜಾಹೀರಾತಿನಲ್ಲಿ ಹಿಂದುಗಳ ಸಾಂಪ್ರದಾಯಿಕ ಕನ್ಯಾದಾನ ವಿಧಿಯನ್ನು ಬಳಸಿಕೊಂಡಿದ್ದನ್ನು ವಿರೋಧಿಸಿ ಹಿಂದು ಸಂಘಟನೆಗಳ ಕಾರ್ಯಕರ್ತರು ಬಟ್ಟೆ ಮಳಿಗೆಯ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ವೇದಾಂತ್ ಫ್ಯಾಶನ್ಸ್ ಲಿಮಿಟೆಡ್ ಗೆ ಸೇರಿದ ಮಾನ್ಯಾವರ್ ಬ್ರಾಂಡಿನ ಬಟ್ಟೆಗಳ ಪ್ರಚಾರಕ್ಕೆ ಕನ್ಯಾದಾನ ವಿಧಿಯನ್ನು ಜಾಹೀರಾತು ರೂಪದಲ್ಲಿ ಬಳಕೆ ಮಾಡಲಾಗಿತ್ತು. ನವಿ ಮುಂಬೈನ ವಾಶಿ ಏರಿಯಾದಲ್ಲಿ ಬಟ್ಟೆ ಮಳಿಗೆಯ ಮುಂದೆ ಹಿಂದು ಸಂಘಟನೆಗಳ ಕಾರ್ಯಕರ್ತರು ಸೇರಿ ಪ್ರತಿಭಟನೆ ನಡೆಸಿದ್ದಾರೆ.

ಹಿಂದು ಜನಜಾಗೃತಿ ಸಮಿತಿ ಹೆಸರಲ್ಲಿ ಪ್ಲೇಕಾರ್ಡ್ ಹಿಡಿದು ಘೋಷಣೆ ಕೂಗಿದ ಪ್ರತಿಭಟನಾಕಾರರು ಕೂಡಲೇ ಜಾಹೀರಾತನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಈ ಸಂದರ್ಭ ಮಾತನಾಡಿದ ಡಾ.ಉದಯ್ ಧೂರಿ, ಈ ರೀತಿ ಹಿಂದುಗಳ ಮದುವೆ ಸಂದರ್ಭದಲ್ಲಿ ನಡೆಸುವ ಕನ್ಯಾದಾನ ವಿಧಿಯನ್ನು ಜಾಹೀರಾತು ಪ್ರಚಾರಕ್ಕೆ ಬಳಸಿಕೊಂಡಿದ್ದು ತಪ್ಪು. ಈ ಮೂಲಕ ಕನ್ಯಾದಾನವನ್ನು ಜನರಿಗೆ ತಪ್ಪಾಗಿ ಬಿಂಬಿಸಲಾಗಿದೆ. ಇದರಿಂದ ಹಿಂದುಗಳ ಭಾವನೆಗೆ ಘಾಸಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಬಟ್ಟೆ ಮಳಿಗೆಯ ಕಂಪನಿಯವರು ಬೇಷರತ್ ಕ್ಷಮೆ ಕೇಳಬೇಕು. ಅಲ್ಲದೆ, ಜಾಹೀರಾತನ್ನೂ ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಜನರು ಕೂಡ ಕಂಪನಿಯವರು ಕ್ಷಮೆ ಕೇಳೋ ವರೆಗೂ ಮಾನ್ಯಾವರ್ ಬಟ್ಟೆಗಳನ್ನು ಬಹಿಷ್ಕರಿಸಬೇಕು ಎಂದು ಕರೆ ನೀಡಿದ್ದಾರೆ.
A pro-Hindu outfit staged a protest outside the showroom of a clothing brand in Navi Mumbai against its advertisement featuring the marriage ritual of 'kanyadaan', claiming that it hurt religious sentiments of the community.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm