ಬ್ರೇಕಿಂಗ್ ನ್ಯೂಸ್
29-09-21 05:15 pm Headline Karnataka News Network ದೇಶ - ವಿದೇಶ
ಲಕ್ನೋ, ಸೆ.29: ಬಿಟೆಕ್ ಓದುತ್ತಿದ್ದ ವಿದ್ಯಾರ್ಥಿಯನ್ನು ಮುಖಕ್ಕೆ ಏಸಿಡ್ ಎರಚಿ, ಸುಟ್ಟು ಹಾಕಿದ್ದಲ್ಲದೆ ಚೂರಿಯಿಂದ ತಿವಿದು ಭೀಕರವಾಗಿ ಕೊಂದಿರುವ ಘಟನೆ ಉತ್ತರ ಪ್ರದೇಶದ ಮೊರದಾಬಾದ್ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಇಂಜಿನಿಯರಿಂಗ್ ವಿದ್ಯಾರ್ಥಿಯ ಶವ ಇತ್ತೀಚೆಗೆ ಪತ್ತೆಯಾಗಿತ್ತು. ಮುಖ, ದೇಹ ಅರೆಸುಟ್ಟ ಸ್ಥಿತಿಯಲ್ಲಿತ್ತು. ಹೀಗಾಗಿ ಪೋಸ್ಟ್ ಮಾರ್ಟಂ ಮಾಡಿದ್ದು ಅದರ ವರದಿಯಲ್ಲಿ ಯುವಕನನ್ನು ಭೀಕರವಾಗಿ ಕೊಲೆಗೈದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ವೈದ್ಯರ ವರದಿ ಪ್ರಕಾರ, ಆತನ ದೇಹದಲ್ಲಿ 16 ಕಡೆಗಳಲ್ಲಿ ಚೂರಿಯಿಂದ ತಿವಿದ ಗಾಯಗಳಿದ್ದವು. ಅಲ್ಲದೆ, ಹೊಟ್ಟೆಯಲ್ಲಿ ಗ್ಲಾಸ್ ಚೂರು ಸಿಕ್ಕಿದ್ದು, ಬಾಟಲಿಯನ್ನು ಒಡೆದು ಹೊಟ್ಟೆಗೆ ಇರಿದಿರುವ ಬಗ್ಗೆ ಶಂಕಿಸಲಾಗಿದೆ.

23 ವರ್ಷದ ಸುಧೀರ್ ಸೈನಿ ಎನ್ನುವ ಯುವಕ ಕೊಲೆಯಾದ ವಿದ್ಯಾರ್ಥಿಯಾಗಿದ್ದು ಆತನಿಗೆ ಸಹಪಾಠಿ ವಿದ್ಯಾರ್ಥಿನಿ ಜೊತೆ ಪ್ರೀತಿ ಇತ್ತು ಎನ್ನಲಾಗಿತ್ತು. ಆಕೆಯ ಜೊತೆ ಮಾತನಾಡುವುದಕ್ಕಾಗಿ ಮೊರದಾಬಾದ್ ಜಿಲ್ಲೆಯ ಮಜೋಲಾ ಎಂಬಲ್ಲಿಗೆ ತೆರಳಿದ್ದು, ಆ ಸಂದರ್ಭದಲ್ಲಿ ಹುಡುಗಿಯ ಸಂಬಂಧಿಕರು ಸೇರಿ ಹಲ್ಲೆ ನಡೆಸಿದ್ದಾರೆ. ಆನಂತರ, ಯುವಕನ ಶವ ಮುಂಧಾ ಪಾಂಡೆ ಎನ್ನುವ ಪ್ರದೇಶದಲ್ಲಿ ಪತ್ತೆಯಾಗಿತ್ತು.
ಕೊಲೆಗೂ ಮುನ್ನ ಯುವಕನಿಗೆ ಚಿತ್ರಹಿಂಸೆ ನೀಡಿರುವ ಬಗ್ಗೆ ಪೊಲೀಸರು ಶಂಕಿಸಿದ್ದಾರೆ. ಮುಖ ಪೂರ್ತಿ ಸುಟ್ಟು ಹೋಗಿದ್ದರಿಂದ ಗುರುತು ಪತ್ತೆ ಸಾಧ್ಯವಾಗಿರಲಿಲ್ಲ. ಜೇಬಿನಲ್ಲಿದ್ದ ಐಡೆಂಟಿ ಕಾರ್ಡ್ ಆಧಾರದಲ್ಲಿ ಪತ್ತೆ ಕಾರ್ಯ ನಡೆಸಲಾಗಿತ್ತು. ಬರೇಲಿ ನಿವಾಸಿಯಾಗಿದ್ದ ಸುಧೀರ್ ಸೈನಿ, ಕಾಲೇಜಿಗೆ ತೆರಳಿದ್ದಾತ ನಾಪತ್ತೆಯಾಗಿದ್ದ. ಆನಂತರ ಹೆತ್ತವರು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ಸಂಬಂಧಿಸಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
A BTech student was allegedly killed by the family members of a woman he was in a relationship in Uttar Pradesh's Moradabad district. He was stabbed at least 16 times while his face was burnt with acid and glass pieces were found in his stomach, his post-mortem report revealed, police said.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm