ಬ್ರೇಕಿಂಗ್ ನ್ಯೂಸ್
30-09-21 03:42 pm Headline Karnataka News Network ದೇಶ - ವಿದೇಶ
ಚಂಡೀಗಢ, ಸೆ.30: ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಬುಧವಾರ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾದ ಬಳಿಕ ಬಿಜೆಪಿ ಸೇರಲಿದ್ದಾರೆ ಎಂಬ ವದಂತಿ ಹಬ್ಬಿತ್ತು. ಆದರೆ, ಅಮಿತ್ ಷಾ ಭೇಟಿಯ ಮರುದಿನವೇ ಅಮರಿಂದರ್ ಸಿಂಗ್ ಹೇಳಿಕೆ ನೀಡಿದ್ದು, ಬಿಜೆಪಿ ಸೇರುವುದಿಲ್ಲ. ಹಾಗೆಂದು ಕಾಂಗ್ರೆಸ್ ನಲ್ಲಿ ಮುಂದುವರಿಯೋದೂ ಇಲ್ಲ ಎಂದು ಹೇಳಿ ಅಚ್ಚರಿ ಮೂಡಿಸಿದ್ದಾರೆ.
ನಾನು ಈವಾಗಲೂ ಕಾಂಗ್ರೆಸಿನಲ್ಲೇ ಇದ್ದೇನೆ. ಹಾಗಂತ, ಕಾಂಗ್ರೆಸ್ ಪಕ್ಷದಲ್ಲಿ ಮುಂದುವರಿಯೋದಿಲ್ಲ. ಈ ರೀತಿಯ ವಾತಾವರಣದಲ್ಲಿ ನಾನು ಕಾಂಗ್ರೆಸಿನಲ್ಲಿ ಇರಲಾರೆ ಎಂದು ಅಮರಿಂದರ್ ಸಿಂಗ್ ಎನ್ ಡಿಟಿವಿಗೆ ನೀಡಿರುವ ಸಂದರ್ಶನದಲ್ಲಿ ಹೇಳಿದ್ದಾರೆ. ವಾರದ ಹಿಂದೆ ಸಿಎಂ ಸ್ಥಾನದಿಂದ ಇಳಿದಿದ್ದ ಅಮರಿಂದರ್ ಸಿಂಗ್, ಬುಧವಾರ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿದ್ದು ನಾನಾ ಊಹೋಪೋಹಗಳಿಗೆ ಕಾರಣವಾಗಿತ್ತು.


ಇದರ ಬೆನ್ನಲ್ಲೇ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಅವರನ್ನು ಅಮರಿಂದರ್ ಸಿಂಗ್ ಭೇಟಿಯಾಗಿದ್ದರು. ಅಮಿತ್ ಷಾ ಭೇಟಿಯ ಬಳಿಕ ಟ್ವೀಟ್ ಮಾಡಿದ್ದ ಅಮರಿಂದರ್ ಸಿಂಗ್, ಕೇಂದ್ರ ಸಚಿವರನ್ನು ಭೇಟಿಯಾಗಿ ಕೃಷಿ ಮಸೂದೆಯ ಕುರಿತ ಜಟಾಪಟಿಗೆ ಕೊನೆ ಹಾಡುವಂತೆ ಕೇಳಿಕೊಂಡಿದ್ದೇನೆ. ಪಂಜಾಬ್ ನಲ್ಲಿ ಈ ಮಸೂದೆಯ ಕಾರಣದಿಂದ ರೈತರು ಸಂಕಷ್ಟಕ್ಕೀಡಾಗಿರುವುದನ್ನು ಸಚಿವರ ಗಮನಕ್ಕೆ ತಂದಿದ್ದೇನೆ ಎಂದು ತಿಳಿಸಿದ್ದರು.
ಇದರ ನಡುವಲ್ಲೇ ಪಂಜಾಬ್ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿದ್ದ ನವಜೋತ್ ಸಿಂಗ್ ಸಿಧು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು, ಪಂಜಾಬ್ ಕಾಂಗ್ರೆಸ್ ನಲ್ಲಿ ಭಾರೀ ಕೋಲಾಹಲಕ್ಕೆ ಕಾರಣವಾಗಿದ್ದರು. ಇವೆಲ್ಲ ಬೆಳವಣಿಗೆಯ ಮಧ್ಯೆ ಅಮರಿಂದ್ ಸಿಂಗ್ ತಾನೂ ಕಾಂಗ್ರೆಸಿನಲ್ಲಿ ಉಳಿಯಲ್ಲ, ಬಿಜೆಪಿ ಸೇರಲ್ಲ ಎನ್ನುವ ಮೂಲಕ ಅಚ್ಚರಿಗೆ ಕಾರಣವಾಗಿದ್ದಾರೆ. ಕಾಂಗ್ರೆಸಿನಲ್ಲೇ ಮಹತ್ವದ ಸ್ಥಾನ ಸಿಕ್ಕರೆ ಉಳಿಯುತ್ತಾರೆಯೇ ಅಥವಾ ಆಪ್ ಪಕ್ಷದತ್ತ ಮುಖ ಮಾಡಿದ್ದಾರೆಯೇ ಎನ್ನುವ ಕುತೂಹಲಕ್ಕೆ ಕಾರಣವಾಗಿದೆ. ಪಂಜಾಬ್ ನಲ್ಲಿ ಮುಂದಿನ ವರ್ಷದಲ್ಲೇ ಅಸೆಂಬ್ಲಿ ಚುನಾವಣೆ ನಡೆಯಲಿದ್ದು, ಬಿಜೆಪಿ ಮತ್ತು ಆಪ್ ಪಕ್ಷಗಳು ಭಾರೀ ಕಸರತ್ತಿನಲ್ಲಿ ತೊಡಗಿವೆ.
A day after meeting Union Home Minister Amit Shah at his residence in Delhi, former Punjab CM Capt Amarinder Singh has said that he is not joining the Bharatiya Janata Party (BJP).
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm