ಬ್ರೇಕಿಂಗ್ ನ್ಯೂಸ್
10-09-20 03:37 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 10: ಇತ್ತೀಚೆಗೆ ಫ್ರಾನ್ಸ್ ನಿಂದ ಆಮದು ಮಾಡಿಕೊಂಡ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಫೈಟರ್ ಜೆಟ್ ರಫೇಲ್ ಗುರುವಾರ ಅಧಿಕೃತವಾಗಿ ಭಾರತೀಯ ವಾಯುಪಡೆಗೆ ಸೇರ್ಪಡೆಯಾಗಿದೆ.
ಹರಿಯಾಣದ ಅಂಬಾಲಾ ವಾಯುನೆಲೆಯಲ್ಲಿ ನಡೆದ ಸೇರ್ಪಡೆ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ ಸಿಂಗ್, ಫ್ರಾನ್ಸ್ನ ರಕ್ಷಣಾ ಸಚಿವೆ ಫ್ಲಾರೆನ್ಸ್ ಪಾರ್ಲಿ ಹಾಗೂ ಸೇನೆಯ ಹಿರಿಯ ಅಧಿಕಾರಿಗಳು ಸಾಕ್ಷಿಯಾದರು. ರಫೇಲ್ ಸೇರ್ಪಡೆಗೂ ಮುನ್ನ ಯುದ್ಧ ವಿಮಾನಗಳಿಗೆ ಸಾಂಪ್ರದಾಯಿಕ ಸರ್ವಧರ್ಮ ಪೂಜೆಯನ್ನು ನೆರವೇರಿಸಲಾಯಿತು. ಬಳಿಕ ರಫೇಲ್ ಯುದ್ಧ ವಿಮಾನಗಳ ವೈಮಾನಿಕ ಪ್ರದರ್ಶನವನ್ನು ಸಮಾರಂಭದಲ್ಲಿ ಭಾಗಿಯಾಗಿದ್ದ ಗಣ್ಯರು ಕಣ್ತುಂಬಿಕೊಂಡರು.
ರಫೇಲ್ ಯುದ್ಧ ವಿಮಾನಗಳನ್ನು ಭಾರತೀಯ ವಾಯುಪಡೆಯ 17 ಸ್ಕ್ವಾಡ್ರನ್ ಗೋಲ್ಡನ್ ಆ್ಯರೋಸ್ಗೆ ಸಚಿವ ರಾಜನಾಥ್ ಸಿಂಗ್ ಔಪಚಾರಿಕವಾಗಿ ಸೇರ್ಪಡೆಗೊಳಿಸಿದರು.
59 ಸಾವಿರ ಕೋಟಿ ವೆಚ್ಚದಲ್ಲಿ 36 ರಫೇಲ್ ಸಮರ ವಿಮಾನಗಳನ್ನು ಫ್ರಾನ್ಸ್ನಿಂದ ಭಾರತ ಖರೀದಿಸುತ್ತಿದೆ. ಈ ಪೈಕಿ ಈ ಐದು ರಫೇಲ್ ವಿಮಾನಗಳನ್ನು ಜುಲೈ 29ರಂದು ಭಾರತಕ್ಕೆ ತರಲಾಗಿತ್ತು. ಫ್ರಾನ್ಸ್ನ ಡಸ್ಸಾಲ್ಟ್ ಏವಿಯೇಷನ್ ರಫೇಲ್ ವಿಮಾನಗಳನ್ನು ನಿರ್ವಿುಸುತ್ತಿದ್ದು 2021ರ ಒಳಗೆ 36 ವಿಮಾನಗಳೂ ಭಾರತಕ್ಕೆ ಹಸ್ತಾಂತರವಾಗಲಿದೆ. ರಫೇಲ್ ಯುದ್ಧ ವಿಮಾನಗಳು ವಾಯುಪಡೆ ಸೇರಿದರೆ ಭಾರತದ ಸೇನಾಶಕ್ತಿಗೆ ಆನೆಬಲ ಸಿಗಲಿದೆ ಎನ್ನಲಾಗುತ್ತಿದೆ.
Join our WhatsApp group for latest news updates
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm