ಬ್ರೇಕಿಂಗ್ ನ್ಯೂಸ್
10-09-20 03:37 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 10: ಇತ್ತೀಚೆಗೆ ಫ್ರಾನ್ಸ್ ನಿಂದ ಆಮದು ಮಾಡಿಕೊಂಡ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಫೈಟರ್ ಜೆಟ್ ರಫೇಲ್ ಗುರುವಾರ ಅಧಿಕೃತವಾಗಿ ಭಾರತೀಯ ವಾಯುಪಡೆಗೆ ಸೇರ್ಪಡೆಯಾಗಿದೆ.
ಹರಿಯಾಣದ ಅಂಬಾಲಾ ವಾಯುನೆಲೆಯಲ್ಲಿ ನಡೆದ ಸೇರ್ಪಡೆ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ ಸಿಂಗ್, ಫ್ರಾನ್ಸ್ನ ರಕ್ಷಣಾ ಸಚಿವೆ ಫ್ಲಾರೆನ್ಸ್ ಪಾರ್ಲಿ ಹಾಗೂ ಸೇನೆಯ ಹಿರಿಯ ಅಧಿಕಾರಿಗಳು ಸಾಕ್ಷಿಯಾದರು. ರಫೇಲ್ ಸೇರ್ಪಡೆಗೂ ಮುನ್ನ ಯುದ್ಧ ವಿಮಾನಗಳಿಗೆ ಸಾಂಪ್ರದಾಯಿಕ ಸರ್ವಧರ್ಮ ಪೂಜೆಯನ್ನು ನೆರವೇರಿಸಲಾಯಿತು. ಬಳಿಕ ರಫೇಲ್ ಯುದ್ಧ ವಿಮಾನಗಳ ವೈಮಾನಿಕ ಪ್ರದರ್ಶನವನ್ನು ಸಮಾರಂಭದಲ್ಲಿ ಭಾಗಿಯಾಗಿದ್ದ ಗಣ್ಯರು ಕಣ್ತುಂಬಿಕೊಂಡರು.
ರಫೇಲ್ ಯುದ್ಧ ವಿಮಾನಗಳನ್ನು ಭಾರತೀಯ ವಾಯುಪಡೆಯ 17 ಸ್ಕ್ವಾಡ್ರನ್ ಗೋಲ್ಡನ್ ಆ್ಯರೋಸ್ಗೆ ಸಚಿವ ರಾಜನಾಥ್ ಸಿಂಗ್ ಔಪಚಾರಿಕವಾಗಿ ಸೇರ್ಪಡೆಗೊಳಿಸಿದರು.
59 ಸಾವಿರ ಕೋಟಿ ವೆಚ್ಚದಲ್ಲಿ 36 ರಫೇಲ್ ಸಮರ ವಿಮಾನಗಳನ್ನು ಫ್ರಾನ್ಸ್ನಿಂದ ಭಾರತ ಖರೀದಿಸುತ್ತಿದೆ. ಈ ಪೈಕಿ ಈ ಐದು ರಫೇಲ್ ವಿಮಾನಗಳನ್ನು ಜುಲೈ 29ರಂದು ಭಾರತಕ್ಕೆ ತರಲಾಗಿತ್ತು. ಫ್ರಾನ್ಸ್ನ ಡಸ್ಸಾಲ್ಟ್ ಏವಿಯೇಷನ್ ರಫೇಲ್ ವಿಮಾನಗಳನ್ನು ನಿರ್ವಿುಸುತ್ತಿದ್ದು 2021ರ ಒಳಗೆ 36 ವಿಮಾನಗಳೂ ಭಾರತಕ್ಕೆ ಹಸ್ತಾಂತರವಾಗಲಿದೆ. ರಫೇಲ್ ಯುದ್ಧ ವಿಮಾನಗಳು ವಾಯುಪಡೆ ಸೇರಿದರೆ ಭಾರತದ ಸೇನಾಶಕ್ತಿಗೆ ಆನೆಬಲ ಸಿಗಲಿದೆ ಎನ್ನಲಾಗುತ್ತಿದೆ.
Join our WhatsApp group for latest news updates
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm