ಬ್ರೇಕಿಂಗ್ ನ್ಯೂಸ್
05-10-21 02:41 pm Headline Karnataka News Network ದೇಶ - ವಿದೇಶ
ಲಕ್ನೋ, ಅ.5: ಉತ್ತರ ಪ್ರದೇಶದ ಲಖೀಮ್ ಪುರ್ ಖೇರಿಯಲ್ಲಿ ನಡೆದಿರುವ ಹಿಂಸಾಚಾರ ಮತ್ತು ರೈತರ ಮೇಲೆ ಜೀಪು ಹರಿಸಿದ ಘಟನೆಯನ್ನು ಖಂಡಿಸಿರುವ ಬಿಜೆಪಿ ಸಂಸದ ವರುಣ್ ಗಾಂಧಿ, ರೈತರು ಪ್ರತಿಭಟನೆ ನಡೆಸುತ್ತಿದ್ದಾಗ ಜೀಪು ಹರಿಸಿದ ವಿಡಿಯೋವನ್ನು ಟ್ವೀಟ್ ಮಾಡಿದ್ದು, ಜೀಪು ಮಾಲೀಕ ಮತ್ತು ಅದರಲ್ಲಿದ್ದ ಎಲ್ಲರನ್ನು ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.
ಈ ವಿಡಿಯೋ ನೋಡಿದರೆ, ಜೀಪಿನಲ್ಲಿದ್ದವರು ಉದ್ದೇಶಪೂರ್ವಕವಾಗಿ ರೈತರ ಮೇಲೆ ಹರಿಸಿದ್ದಾರೆ ಎನ್ನುವುದು ಕಂಡುಬರುತ್ತದೆ. ಪೊಲೀಸರು ಈ ವಿಡಿಯೋ ಆಧರಿಸಿ, ಪ್ರಕರಣ ದಾಖಲಿಸಬೇಕು. ಅಲ್ಲದೆ, ಈ ಜೀಪು ಯಾರ ಹೆಸರಲ್ಲಿದೆ, ಅವರನ್ನು ಮತ್ತು ಜೀಪಿನಲ್ಲಿ ಯಾರು ಕುಳಿತಿದ್ದರು ಅವರೆಲ್ಲರನ್ನೂ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ. ಈ ಬಗ್ಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಗೆ ಪತ್ರ ಬರೆದು ಆಗ್ರಹಿಸಿದ್ದಾರೆ. ರೈತರ ಮೇಲೆ ಜೀಪು ಹರಿಸಿದ ಆರೋಪಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು. ಅಲ್ಲದೆ, ಸಂತ್ರಸ್ತ ರೈತರಿಗೆ ತಲಾ ಒಂದು ಕೋಟಿ ಪರಿಹಾರ ನೀಡಬೇಕು. ಈ ಘಟನೆ ಬಗ್ಗೆ ಸಿಬಿಐ ತನಿಖೆ ನಡೆಯಬೇಕು ಎಂದು ವರುಣ್ ಗಾಂಧಿ ಆಗ್ರಹಿಸಿದ್ದಾರೆ.
ಮಗ ಅಲ್ಲಿದ್ದ ಬಗ್ಗೆ ಒಂದೇ ಸಾಕ್ಷ್ಯ ಇದ್ದರೂ ರಾಜಿನಾಮೆ
ಇದೇ ವೇಳೆ, ರೈತರ ಮೇಲೆ ಹರಿಸಿದ ಜೀಪು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಮಗನಿಗೆ ಸೇರಿದ್ದು ಎನ್ನಲಾಗುತ್ತಿದ್ದು, ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂಬ ಆಗ್ರಹ ಕೇಳಿಬಂದಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಜಯ್ ಮಿಶ್ರಾ, ತನ್ನ ಮಗ ಆ ಜಾಗದಲ್ಲಿದ್ದ ಎನ್ನುವುದಕ್ಕೆ ಒಂದೇ ಒಂದು ಸಾಕ್ಷ್ಯ ನೀಡಿದರೂ ನಾನು ಸಚಿವ ಸ್ಥಾನಕ್ಕೇ ರಾಜಿನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ. ರೈತರ ಪ್ರತಿಭಟನೆ ವೇಳೆ ಜೀಪು ಹರಿಸಿದ ಘಟನೆಯ ಬಳಿಕ ಲಖೀಮ್ ಪುರ್ ಖೇರಿಯಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ನಾಲ್ಕು ರೈತರು ಸೇರಿ ಎಂಟು ಮಂದಿ ಮೃತಪಟ್ಟಿದ್ದಾರೆ.
ಹಿಂಸಾಚಾರ ಭುಗಿಲೆದ್ದು ಸಚಿವನ ಮಗನ ಕಾರು ರೈತರ ಮೇಲೆ ಹರಿದಿದೆ ಎನ್ನುವ ಸುದ್ದಿ ಹಬ್ಬುತ್ತಲೇ ದೇಶಾದ್ಯಂತ ಆಕ್ರೋಶ ಕೇಳಿಬಂದಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಮಗ ಆಶಿಷ್ ಮಿಶ್ರಾ, ನಾನು ಆ ಸ್ಥಳದಲ್ಲಿ ಇರಲೇ ಇಲ್ಲ. ಬನ್ವಿರ್ ಪುರದಲ್ಲಿ ಕುಸ್ತಿ ಪಂದ್ಯ ಆಯೋಜಿಸಿದ್ದು ಇಡೀ ದಿನ ಅಲ್ಲಿಯೇ ಇದ್ದೆ. ಕುಸ್ತಿ ಪಂದ್ಯಾಟಕ್ಕೆ ಡಿಸಿಎಂ ಕೇಶವ ಪ್ರಸಾದ್ ಮೌರ್ಯ ಸೇರಿ ಬಿಜೆಪಿ ನಾಯಕರನ್ನು ಕರೆತರಲು ನನ್ನ ಮಹೀಂದಾ ಥಾರ್ ಕಾರನ್ನೂ ಕಳಿಸಿದ್ದೆ. ಕಾರಿನ ಮೇಲೂ ದಾಳಿಯಾಗಿದೆ ಎಂದು ಹೇಳಿದ್ದಾರೆ.
लखीमपुर खीरी में किसानों को गाड़ियों से जानबूझकर कुचलने का यह वीडियो किसी की भी आत्मा को झखझोर देगा।
— Varun Gandhi (@varungandhi80) October 5, 2021
पुलिस इस वीडियो का संज्ञान लेकर इन गाड़ियों के मालिकों, इनमें बैठे लोगों, और इस प्रकरण में संलिप्त अन्य व्यक्तियों को चिन्हित कर तत्काल गिरफ्तार करे।
#LakhimpurKheri@dgpup pic.twitter.com/YmDZhUZ9xq
Sharing a video on Twitter, BJP MP Varun Gandhi has urged the police to immediately arrest the owners of cars that crushed farmers to death in Lakhimpur Kheri.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm