ಬ್ರೇಕಿಂಗ್ ನ್ಯೂಸ್
11-10-21 11:43 am Headline Karnataka News Network ದೇಶ - ವಿದೇಶ
ಮಾಸ್ಕೋ, ಅಕ್ಟೋಬರ್ 11: ರಷ್ಯಾದ ವಿಮಾನವೊಂದು ಪತನವಾಗಿದ್ದು ಈ ವಿಮಾನ ಅಪಘಾತದಿಂದ ಕನಿಷ್ಠ 16 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಸುಮಾರು 23 ಮಂದಿ ಈ ರಷ್ಯಾದ ವಿಮಾನದಲ್ಲಿ ಇದ್ದರು ಎಂದು ಹೇಳಲಾಗಿದೆ. ಈ ಪೈಕಿ ಕನಿಷ್ಠ 16 ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಇನ್ನು ಏಳು ಮಂದಿಗೆ ಗಾಯವಾಗಿದೆ ಎಂದು ಕೂಡಾ ವರದಿಯು ಹೇಳಿದೆ.
ರಷ್ಯಾದ ಮೆನ್ಜೆಲಿನ್ಸ್ಕ್ ನಗರದ ಟಾಟರ್ಜ್ತಾನ್ ಎಂಬಲ್ಲಿ 23 ಮಂದಿ ಪ್ರಯಾಣಿಕರು ಇದ್ದ ಲೆಟ್ ಎಲ್-410 ಟರ್ಬೋಲೆಟ್ ವಿಮಾನ ಪತನಗೊಂಡಿದೆ ಎಂದು ತಿಳಿದು ಬಂದಿದೆ. ಇಂದು ಮುಂಜಾನೆ ಸುಮಾರು 9:11 (ಮಾಸ್ಕೋ ಸಮಯ) ಕ್ಕೆ ಈ ಲೆಟ್ ಎಲ್-410 ಟರ್ಬೋಲೆಟ್ ವಿಮಾನ ಪತನಗೊಂಡಿದೆ ಎಂದು ವರದಿಯು ಮಾಹಿತಿ ನೀಡಿದೆ.

ರಷ್ಯಾದ ಲೆಟ್ ಎಲ್-410 ಟರ್ಬೋಲೆಟ್ ವಿಮಾನದಲ್ಲಿದ್ದ 23 ಮಂದಿ ಪ್ರಯಾಣಿಕರ ಪೈಕಿ 21 ಮಂದಿ ಡೈವರ್ಗಳಾಗಿದ್ದರು ಎಂದು ಹೇಳಲಾಗಿದೆ. ಈ ವಿಮಾನ ದುರಂತದಲ್ಲಿ ಏಳು ಮಂದಿಗೆ ಗಾಯವಾಗಿದೆ.
ಈ ವಿಮಾನ ಪತನಗೊಂಡ ಚಿತ್ರವನ್ನು ರಷ್ಯಾದ ತುರ್ತು ಪರಿಸ್ಥಿತಿ ಸಚಿವಾಲಯವು ಬಿಡುಗಡೆ ಮಾಡಿದ್ದು, ಬದುಕುಳಿದ ಏಳು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವಿವರಿಸಿದೆ.

"ರಷ್ಯಾದ ಮೆನ್ಜೆಲಿನ್ಸ್ಕ್ ನಗರದ ಟಾಟರ್ಜ್ತಾನ್ ಎಂಬಲ್ಲಿ ಪತನಗೊಂಡ ಈ ರಷ್ಯಾದ ವಿಮಾನವು ಸಂಪೂರ್ಣವಾಗಿ ಜಖಂ ಆಗಿದೆ. ಬದುಕುಳಿದ ಏಳು ಮಂದಿಯನ್ನು ಕೂಡಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಪೈಕಿ ಓರ್ವ ಗಾಯಾಳುವಿನ ಸ್ಥಿತಿಯು ಚಿಂತಾಜನಕವಾಗಿದೆ," ಎಂದು ರಷ್ಯಾ ಆರೋಗ್ಯ ಸಚಿವಾಲಯ ತಿಳಿಸಿದೆ.
ಇನ್ನು ಈ ಬಗ್ಗೆ ಅಲ್ಲಿನ ಸ್ಥಳೀಯ ಮಾಧ್ಯಮಗಳು ಮಾಡಿದ ವರದಿಗಳ ಪ್ರಕಾರ ಈ ವಿಡಿಯೋವು ರಷ್ಯಾದ ಸೇನೆ, ನಾಗರಿಕ ಯಾನ ಮತ್ತು ನೌಕಾಪಡೆಗೆ ಸಹಾಯ ಮಾಡಲು ಇರುವ ಒಂದು ಸ್ವಯಂ ಸೇವಕ ಸಂಸ್ಥೆಗೆ ಸೇರಿದ್ದು ಆಗಿದೆ. ಹಾಗೆಯೇ ಇದು ಕ್ರೀಡಾ ಮತ್ತು ರಕ್ಷಣಾ ಸಂಸ್ಥೆಯಾಗಿದೆ ಎಂದು ಕೂಡಾ ರಷ್ಯಾದ ಸ್ಥಳೀಯ ಮಾಧ್ಯಮಗಳು ವಿವರಿಸಿದೆ.
ಈ ವರ್ಷದ ಆರಂಭದಲ್ಲಿ ರಷ್ಯಾದಲ್ಲಿ ಎರಡು ಎಲ್-410 ವಿಮಾನಗಳು ಪತನವಾಗಿದೆ.
Sixteen people were killed after an aircraft carrying parachutists crashed in central Russia on Sunday, the emergencies ministry said. The L-410 plane carrying 22 people crashed around 9:23 a.m. local time (0623 GMT) during a flight over the republic of Tatarstan, the ministry said on its Telegram channel.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm