ಬ್ರೇಕಿಂಗ್ ನ್ಯೂಸ್
11-09-20 10:41 am Headline Karnataka News Network ದೇಶ - ವಿದೇಶ
ವಾಷಿಂಗ್ಟನ್ ಸೆಪ್ಟೆಂಬರ್ 11: ಒಂದು ಸಾವಿರಕ್ಕೂ ಹೆಚ್ಚು ಚೀನಿ ರಾಷ್ಟ್ರೀಯರ ವೀಸಾಗಳನ್ನು ಅಮೆರಿಕ ರದ್ದು ಪಡಿಸಿದೆ. ಭದ್ರತಾ ಕಾರಣಗಳನ್ನು ಮುಂದೊಡ್ಡಿ ಈ ಕ್ರಮ ಕೈಗೊಂಡಿದೆ. ಈಗಾಗಲೇ ಹಳಸಿರುವ ಅಮೆರಿಕ-ಚೀನಾ ಬಾಂಧವ್ಯ ಇದರಿಂದ ಮತ್ತಷ್ಟು ಹದಗೆಡುವ ಸಂಭವವಿದೆ.
ಭದ್ರತಾ ಅಪಾಯವೊಡ್ಡುವ ಶಂಕೆಯಿರುವ ಚೀನಿ ವಿದ್ಯಾರ್ಥಿಗಳು ಮತ್ತು ಸಂಶೋಧಕರು ಅಮೆರಿಕ ಪ್ರವೇಶಿಸುವ ಮೇಲೆ ನಿರ್ಬಂಧ ಹೇರಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇ 29ರಂದು ಆದೇಶ ಹೊರಡಿಸಿದ್ದರು. ಅದಕ್ಕನುಗುಣವಾಗಿ ವೀಸಾ ರದ್ದು ಪಡಿಸಲಾಗಿದೆ ಎಂದು ಗೃಹ ಇಲಾಖೆಯ ವಕ್ತಾರೆ ಬುಧವಾರ ತಿಳಿಸಿದ್ದಾರೆ.
ಚೀನಾದ ಮಿಲಿಟರಿಯೊಂದಿಗೆ ಸಂಬಧವಿರುವ ಚೀನಿ ಪದವಿ ವಿದ್ಯಾರ್ಥಿಗಳು ಹಾಗೂ ಸಂಶೋಧಕರ ವೀಸಾಗಳನ್ನು ತಡೆ ಹಿಡಿಯುವುದಾಗಿ ಅಮೆರಿಕದ ಆಂತರಿಕ ಭದ್ರತಾ ಇಲಾಖೆಯ ಪ್ರಭಾರ ಮುಖ್ಯಸ್ಥ ಚಾಡ್ ವೂ ಇದಕ್ಕೂ ಮುನ್ನ ಹೇಳಿದ್ದರು. ಸೂಕ್ಷ್ಮ ಸಂಶೋಧನಾ ವಿಚಾರಗಳನ್ನು ಕದ್ದು ದುರುಪಯೋಗ ಮಾಡುವುದನ್ನು ತಡೆಯಲು ಈ ಕ್ರಮ ಎಂದವರು ವಿವರಿಸಿದ್ದರು.
ಕರೊನಾ ವೈರಸ್ ಸಂಶೋಧನೆ ಸಹಿತ ಚೀನಾ ಹಲವು ಕಾನೂನು ಬಾಹಿರ ವ್ಯಾವಹಾರಿಕ ಚಟುವಟಿಕೆ ನಡೆಸುತ್ತಿದೆ ಹಾಗೂ ಕೈಗಾರಿಕಾ ಅಂಶಗಳಿಗೆ ಬೇಹುಗಾರಿಕೆ ನಡೆಸುತ್ತಿದೆ ಎಂದು ಅಮೆರಿಕದ ಆರೋಪವನ್ನು ಪುನರುಚ್ಚರಿಸಿದ್ದಾರೆ. ಅಮೆರಿಕದ ಶೈಕ್ಷಣಿಕ ವಿಚಾರಗಳನ್ನು ಶೋಷಿಸಲು ವಿದ್ಯಾರ್ಥಿ ವೀಸಾಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದಿದ್ದರು. ಗುಲಾಮಿ ಶ್ರಮದಿಂದ ತಯಾರಾಗುವ ಉತ್ಪನ್ನಗಳು ಅಮೆರಿಕದ ಮಾರುಕಟ್ಟೆ ಪ್ರವೇಶಿಸುವುದನ್ನು ತಡೆಯುವ ಉದ್ದೇಶವೂ ಇದೆ ಎನ್ನುವ ಮೂಲಕ ಚೀನಾದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದು ಪರೋಕ್ಷವಾಗಿ ಹೇಳಿದ್ದರು. ‘ಪ್ರತಿಯೊಬ್ಬ ಮನುಷ್ಯರ ಅಂತರ್ಗತ ಮಾನವ ಘನತೆಯನ್ನು ಚೀನಾ ಗೌರವಿಸಬೇಕು’ ಎಂದೂ ತಾಕೀತು ಮಾಡಿದ್ದಾರೆ. ಚೀನಾದ ಕ್ಸಿನ್ಜಿಯಾಂಗ್ ಪ್ರದೇಶದಲ್ಲಿ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯದವರ ಮೇಲೆ ದಬ್ಬಾಳಿಕೆ ನಡೆಯುತ್ತಿರುವುದನ್ನು ಉಲ್ಲೇಖಿಸಿ ಅವರು ಈ ಟಿಪ್ಪಣಿ ಮಾಡಿದ್ದಾರೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm