ಬ್ರೇಕಿಂಗ್ ನ್ಯೂಸ್
11-09-20 10:41 am Headline Karnataka News Network ದೇಶ - ವಿದೇಶ
ವಾಷಿಂಗ್ಟನ್ ಸೆಪ್ಟೆಂಬರ್ 11: ಒಂದು ಸಾವಿರಕ್ಕೂ ಹೆಚ್ಚು ಚೀನಿ ರಾಷ್ಟ್ರೀಯರ ವೀಸಾಗಳನ್ನು ಅಮೆರಿಕ ರದ್ದು ಪಡಿಸಿದೆ. ಭದ್ರತಾ ಕಾರಣಗಳನ್ನು ಮುಂದೊಡ್ಡಿ ಈ ಕ್ರಮ ಕೈಗೊಂಡಿದೆ. ಈಗಾಗಲೇ ಹಳಸಿರುವ ಅಮೆರಿಕ-ಚೀನಾ ಬಾಂಧವ್ಯ ಇದರಿಂದ ಮತ್ತಷ್ಟು ಹದಗೆಡುವ ಸಂಭವವಿದೆ.
ಭದ್ರತಾ ಅಪಾಯವೊಡ್ಡುವ ಶಂಕೆಯಿರುವ ಚೀನಿ ವಿದ್ಯಾರ್ಥಿಗಳು ಮತ್ತು ಸಂಶೋಧಕರು ಅಮೆರಿಕ ಪ್ರವೇಶಿಸುವ ಮೇಲೆ ನಿರ್ಬಂಧ ಹೇರಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇ 29ರಂದು ಆದೇಶ ಹೊರಡಿಸಿದ್ದರು. ಅದಕ್ಕನುಗುಣವಾಗಿ ವೀಸಾ ರದ್ದು ಪಡಿಸಲಾಗಿದೆ ಎಂದು ಗೃಹ ಇಲಾಖೆಯ ವಕ್ತಾರೆ ಬುಧವಾರ ತಿಳಿಸಿದ್ದಾರೆ.
ಚೀನಾದ ಮಿಲಿಟರಿಯೊಂದಿಗೆ ಸಂಬಧವಿರುವ ಚೀನಿ ಪದವಿ ವಿದ್ಯಾರ್ಥಿಗಳು ಹಾಗೂ ಸಂಶೋಧಕರ ವೀಸಾಗಳನ್ನು ತಡೆ ಹಿಡಿಯುವುದಾಗಿ ಅಮೆರಿಕದ ಆಂತರಿಕ ಭದ್ರತಾ ಇಲಾಖೆಯ ಪ್ರಭಾರ ಮುಖ್ಯಸ್ಥ ಚಾಡ್ ವೂ ಇದಕ್ಕೂ ಮುನ್ನ ಹೇಳಿದ್ದರು. ಸೂಕ್ಷ್ಮ ಸಂಶೋಧನಾ ವಿಚಾರಗಳನ್ನು ಕದ್ದು ದುರುಪಯೋಗ ಮಾಡುವುದನ್ನು ತಡೆಯಲು ಈ ಕ್ರಮ ಎಂದವರು ವಿವರಿಸಿದ್ದರು.
ಕರೊನಾ ವೈರಸ್ ಸಂಶೋಧನೆ ಸಹಿತ ಚೀನಾ ಹಲವು ಕಾನೂನು ಬಾಹಿರ ವ್ಯಾವಹಾರಿಕ ಚಟುವಟಿಕೆ ನಡೆಸುತ್ತಿದೆ ಹಾಗೂ ಕೈಗಾರಿಕಾ ಅಂಶಗಳಿಗೆ ಬೇಹುಗಾರಿಕೆ ನಡೆಸುತ್ತಿದೆ ಎಂದು ಅಮೆರಿಕದ ಆರೋಪವನ್ನು ಪುನರುಚ್ಚರಿಸಿದ್ದಾರೆ. ಅಮೆರಿಕದ ಶೈಕ್ಷಣಿಕ ವಿಚಾರಗಳನ್ನು ಶೋಷಿಸಲು ವಿದ್ಯಾರ್ಥಿ ವೀಸಾಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದಿದ್ದರು. ಗುಲಾಮಿ ಶ್ರಮದಿಂದ ತಯಾರಾಗುವ ಉತ್ಪನ್ನಗಳು ಅಮೆರಿಕದ ಮಾರುಕಟ್ಟೆ ಪ್ರವೇಶಿಸುವುದನ್ನು ತಡೆಯುವ ಉದ್ದೇಶವೂ ಇದೆ ಎನ್ನುವ ಮೂಲಕ ಚೀನಾದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದು ಪರೋಕ್ಷವಾಗಿ ಹೇಳಿದ್ದರು. ‘ಪ್ರತಿಯೊಬ್ಬ ಮನುಷ್ಯರ ಅಂತರ್ಗತ ಮಾನವ ಘನತೆಯನ್ನು ಚೀನಾ ಗೌರವಿಸಬೇಕು’ ಎಂದೂ ತಾಕೀತು ಮಾಡಿದ್ದಾರೆ. ಚೀನಾದ ಕ್ಸಿನ್ಜಿಯಾಂಗ್ ಪ್ರದೇಶದಲ್ಲಿ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯದವರ ಮೇಲೆ ದಬ್ಬಾಳಿಕೆ ನಡೆಯುತ್ತಿರುವುದನ್ನು ಉಲ್ಲೇಖಿಸಿ ಅವರು ಈ ಟಿಪ್ಪಣಿ ಮಾಡಿದ್ದಾರೆ.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am