ಬ್ರೇಕಿಂಗ್ ನ್ಯೂಸ್
12-10-21 08:41 pm Headline Karnataka News Network ದೇಶ - ವಿದೇಶ
ಶ್ರೀನಗರ, ಅ.12: ಸಾಮಾನ್ಯ ನಾಗರಿಕರನ್ನು ಗುರಿಯಾಗಿಸಿ ಉಗ್ರರು ದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಜಮ್ಮು ಕಾಶ್ಮೀರದಲ್ಲಿ ಎನ್ಐಎ ಅಧಿಕಾರಿಗಳು ಉಗ್ರರ ಆಶ್ರಯ ನೀಡುತ್ತಿದ್ದಾರೆ ಎನ್ನಲಾದ ಪ್ರದೇಶಗಳಲ್ಲಿ ದಾಳಿ ನಡೆಸಿದ್ದಾರೆ. ಜಮ್ಮು ಕಾಶ್ಮೀರದ 16 ಕಡೆಗಳಲ್ಲಿ ಎನ್ಐಎ ಅಧಿಕಾರಿಗಳು ಭದ್ರತಾ ಪಡೆಯ ಯೋಧರ ಜೊತೆಗೆ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.
ಲಷ್ಕರ್ ಇ- ತೈಬಾ, ಜೈಶ್ ಇ- ಮಹ್ಮದ್, ಹಿಜ್ಬುಲ್ ಮುಜಾಹಿದೀನ್, ಅಲ್ ಬದ್ರ್, ದಿ ರೆಸಿಸ್ಟೆಂಟ್ ಫ್ರಂಟ್, ಪೀಪಲ್ ಅಗೇನ್ಸ್ಟ್ ಫ್ಯಾಸಿಸ್ಟ್ ಫೋರ್ಸ್, ಮುಜಾಹಿದೀನ್ ಗಜ್ವಾತುಲ್ ಹಿಂದ್ ಈ ರೀತಿಯ ಉಗ್ರ ಸಂಘಟನೆಗಳಿಗೆ ಬೆಂಬಲ ನೀಡುತ್ತಿರುವ ಮಂದಿಯನ್ನು ಟಾರ್ಗೆಟ್ ಮಾಡಿ ದಾಳಿ ನಡೆಸಲಾಗಿದೆ. ಮಧ್ಯ ಕಾಶ್ಮೀರದಲ್ಲಿ ಉಗ್ರರು ಅಡಗುತಾಣಗಳನ್ನು ನಿರ್ಮಿಸಿಕೊಂಡು ಭೂಗತ ಚಟುವಟಿಕೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಆಧರಿಸಿ ದಾಳಿ ನಡೆದಿದೆ.

ಜಮ್ಮು ಕಾಶ್ಮೀರದ ಪ್ರಮುಖ ನಗರ ಸೇರಿದಂತೆ ಹಲವು ಕಡೆಗಳಲ್ಲಿ ಉಗ್ರರ ಪರವಾಗಿ ಯುವಕರು ಕಾರ್ಯಾಚರಿಸುತ್ತಿರುವುದನ್ನು ಪತ್ತೆ ಮಾಡಿದ್ದು, ಅದನ್ನು ಆಧರಿಸಿ ದಾಳಿ ನಡೆಸಲಾಗಿದೆ. ಸೋಮವಾರ ಇಮ್ತಿಯಾಜ್ ಅಹ್ಮದ್ ದರ್ ಎನ್ನುವ ಒಬ್ಬ ಉಗ್ರನನ್ನು ಭದ್ರತಾ ಪಡೆ ಎನ್ಕೌಂಟರ್ ಮಾಡಿ ಸಾಯಿಸಿತ್ತು. ಇಮ್ತಿಯಾಜ್ ದರ್, ಕಾಶ್ಮೀರದಲ್ಲಿ ಹೊಸತಾಗಿ ಹುಟ್ಟಿಕೊಂಡಿರುವ ದಿ ರೆಸಿಸ್ಟೆಂಟ್ ಫ್ರಂಟ್ ಸಂಘಟನೆಯ ಸದಸ್ಯನಾಗಿದ್ದ. ರೆಸಿಸ್ಟಂಟ್ ಫ್ರಂಟ್ ಸಂಘಟನೆ, ಲಷ್ಕರ್ ಇ- ತಯ್ಬಾ ಉಗ್ರ ಸಂಘಟನೆಯ ಅಂಗಸಂಸ್ಥೆಯಾಗಿದೆ. ಇಮ್ತಿಯಾಜ್ ಕಳೆದ ವಾರ ಬಂಡಿಪೋರಾ ಜಿಲ್ಲೆಯಲ್ಲಿ ಸಾಮಾನ್ಯ ನಾಗರಿಕನನ್ನು ಗುರಿಯಾಗಿಸಿ ದಾಳಿ ನಡೆಸಿ, ಸಾಯಿಸಿದ್ದ. ಈ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಇಮ್ತಿಯಾಜ್ ಪತ್ತೆಗೆ ಕಾರ್ಯಾಚರಣೆ ನಡೆಸಿತ್ತು. ಇದೇ ವೇಳೆ, ಐವರು ಭದ್ರತಾ ಪಡೆ ಯೋಧರು ಸಾವು ಕಂಡಿದ್ದರು.
The NIA (National Investigation Agency) on Tuesday conducted raids at 16 locations across Jammu and Kashmir. According to the details, the raids were conducted at locations in Shopian, Pulwama and Srinagar, in connection with a new case linked to the Over Ground Workers (OGWs) of various Tanzeems including The Resistance Front (TRF). The NIA also raided 5 locations in Delhi-NCR in Mundra drug seizure case.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm