ಬ್ರೇಕಿಂಗ್ ನ್ಯೂಸ್
11-09-20 11:35 am Headline Karnataka News Network ದೇಶ - ವಿದೇಶ
ಮುಂಬೈ, ಸೆಪ್ಟೆಂಬರ್ 11: ತನ್ನ ಮನೆಯನ್ನು ಕೆಡವಿದ ಸಿಟ್ಟಿನಲ್ಲಿರುವ ನಟಿ ಕಂಗನಾ ರನೌತ್ ಮತ್ತೆ ಶಿವಸೇನೆಯ ವಿರುದ್ಧ ಹರಿಹಾಯ್ದಿದ್ದಾರೆ. ಉದ್ಧವ್ ಠಾಕ್ರೆ ಹೆಸರೆತ್ತದೆ ಟ್ವೀಟ್ ವಾರ್ ನಡೆಸಿರುವ ಕಂಗನಾ, ಅಧಿಕಾರಕ್ಕಾಗಿ ತಮ್ಮ ಸಿದ್ಧಾಂತವನ್ನು ಮಾರಿಕೊಂಡಿರುವ ಶಿವಸೇನೆ ಈಗ ಸೋನಿಯಾ ಸೇನೆ ಆಗಿಹೋಗಿದೆ ಎಂದು ಮೂದಲಿಸಿದ್ದಾರೆ.
ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಳ್ಳಬೇಕಿತ್ತು. ಆದರೆ ಚುನಾವಣೆಯಲ್ಲಿ ಸೋತ ಶಿವಸೇನೆ ಅಧಿಕಾರಕ್ಕಾಗಿ ನಾಚಿಕೆ ಇಲ್ಲದೆ ಹಿಂಬಾಗಿಲ ಮೂಲಕ ಮೈತ್ರಿ ಸರಕಾರ ಮಾಡಿಕೊಂಡಿದೆ. ಆಮೂಲಕ ಶಿವಸೇನೆ ಸೋನಿಯಾ ಸೇನೆ ಆಗಿ ಪರಿವರ್ತನೆ ಆಗುವಂತಾಗಿದೆ ಎಂದು ಹೇಳಿದ್ದಾರೆ. ಬಾಳಾ ಸಾಹೇಬ್ ಠಾಕ್ರೆ ಒಂದು ಸಿದ್ಧಾಂತ ಇಟ್ಟುಕೊಂಡು ಶಿವಸೇನೆಯನ್ನು ಕಟ್ಟಿ ಬೆಳೆಸಿದ್ದರು. ಆದರೆ ಇಂದಿನವರು ಆ ಸಿದ್ಧಾಂತವನ್ನೇ ಮಾರಿಕೊಂಡಿದ್ದಾರೆ. ನಾನು ಇಲ್ಲದಿರುವ ವೇಳೆಯಲ್ಲಿ ನನ್ನ ಮನೆಯನ್ನು ಕೆಡವಿದ ಗೂಂಡಾಗಳನ್ನು ಆಡಳಿತದ ಒಂದು ಅಂಗ ಎನ್ನುವುದಿಲ್ಲ. ಹಾಗೆ ಹೇಳಿ ಸಂವಿಧಾನವನ್ನು ಅಪಮಾನಿಸಲು ಬಯಸುವುದಿಲ್ಲ ಎಂದಿದ್ದಾರೆ.

"ನಿಮ್ಮ ತಂದೆಯ ಒಳ್ಳೆತನದಿಂದ ನೀವು ಸಂಪತ್ತು ಪಡೆದಿರಬಹುದು. ಆದರೆ ನೀವು ಗೌರವ ಬೇಕಿದ್ದರೆ ಅದನ್ನು ಸ್ವತಃ ಗಳಿಸಬೇಕು. ನನ್ನ ಧ್ವನಿಯನ್ನು ನೀವು ಚಿವುಟಬಹುದು. ಆದರೆ ನನ್ನ ಧ್ವನಿ ಸಾವಿರ, ಲಕ್ಷಗಳ ಸಂಖ್ಯೆಯಲ್ಲಿ ಪರಿವರ್ತನೆ ಆಗಿ ನಿಮ್ಮತ್ತ ತೂರಿ ಬರಲಿದೆ. ಹಾಗಾದಾಗ, ನೀವು ಎಷ್ಟು ಮಂದಿಯ ಧ್ವನಿಯನ್ನು ಹತ್ತಿಕ್ಕಬಹುದು. ಸತ್ಯ ಮುಚ್ಚಿಟ್ಟು ಎಷ್ಟು ದಿನ ಓಡಾಡಬಹುದು. ನಿಮ್ಮ ಆಡಳಿತ ಸರ್ವಾಧಿಕಾರಿಯ ರಾಜಪ್ರಭುತ್ವ ಅಷ್ಟೇ ವಿನಾ ಬೇರೇನೂ ಅಲ್ಲ " ಎಂದು ಕಂಗನಾ ಕಟು ಮಾತುಗಳಿಂದ ತಿವಿದಿದ್ದಾರೆ.
ಶಿವಸೇನೆ ಆಗಲೀ, ಮಹಾರಾಷ್ಟ್ರ ಸರಕಾರದಿಂದ ಆಗಲೀ ಕಂಗನಾ ಟ್ವೀಟ್ ಬಗ್ಗೆ ಉತ್ತರ ನೀಡಲು ಮುಂದಾಗಿಲ್ಲ. ಶಿವಸೇನೆಯ ಯಾರು ಕೂಡ ತುಟಿ ಬಿಚ್ಚಬಾರದು ಎಂದು ಹುಕುಂ ಜಾರಿ ಮಾಡಲಾಗಿದೆ. ಅಗತ್ಯ ಬಿದ್ದರೆ ಪಕ್ಷದ ವಕ್ತಾರ ಸಂಜಯ್ ರಾವತ್ ಮಾತಾಡುತ್ತಾರೆ ಎನ್ನುವ ಸೂಚನೆ ನೀಡಲಾಗಿದೆ. ಆದರೆ ಚಿತ್ರನಟಿಯ ತಿವಿಯುವ ಬಾಣಗಳಿಗೆ ಉತ್ತರ ನೀಡಲು ರಾವುತ್ ಕೂಡ ಮುಂದೆ ಬಂದಿಲ್ಲ.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am