ಬ್ರೇಕಿಂಗ್ ನ್ಯೂಸ್
15-10-21 05:53 pm Headline Karnataka News Network ದೇಶ - ವಿದೇಶ
ಮುಂಬೈ, ಅ.15: ಬಾಲಿವುಡ್ ಡ್ರಗ್ಸ್ ನಂಟಿನ ಪ್ರಕರಣದ ತನಿಖೆ ನಡೆಸುತ್ತಿರುವ ಎನ್ ಸಿಬಿ ಝೋನಲ್ ಡೈರೆಕ್ಟರ್ ಸಮೀರ್ ವಾಂಖೇಡೆಗೆ ಹೆಚ್ಚುವರಿ ಭದ್ರತೆ ನೀಡಲಾಗಿದೆ. ಇತ್ತೀಚೆಗೆ, ಮುಂಬೈ ಹಡಗಿನಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಸೇರಿದಂತೆ ಹಲವರ ಬಂಧನದ ಬಳಿಕ ಸಮೀರ್ ವಾಂಖೇಡೆ ತನ್ನನ್ನು ಯಾರೋ ಫಾಲೋ ಮಾಡುತ್ತಿದ್ದಾರೆ. ಕೆಲವು ಪೊಲೀಸ್ ಅಧಿಕಾರಿಗಳೇ ನನ್ನ ಹಿಂದೆ ಇದ್ದಾರೆ. ನನಗೆ ಹೆಚ್ಚುವರಿ ಭದ್ರತೆ ನೀಡಬೇಕೆಂದು ಮುಂಬೈ ಪೊಲೀಸ್ ಕಮಿಷನರ್ ಮತ್ತು ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ಪತ್ರ ಬರೆದಿದ್ದರು.
ಈ ಬಗ್ಗೆ ಲಿಖಿತ ದೂರು ಆಧರಿಸಿ, ಮುಂಬೈ ಪೊಲೀಸ್ ಕಮಿಷನರ್ ಹೇಮಂತ್ ನಗ್ರಾಲೆ ತನಿಖೆಗೆ ಆದೇಶ ಮಾಡಿದ್ದಾರೆ. ಇದಲ್ಲದೆ, ಸಮೀರ್ ವಾಂಖೇಡೆಗೆ ಹೆಚ್ಚುವರಿ ಭದ್ರತೆಯನ್ನೂ ಒದಗಿಸಿದ್ದಾರೆ. ಅವರಿಗೆ ನೀಡಲಾಗಿದ್ದ ಕಚೇರಿ ವಾಹನವನ್ನೂ ಬದಲಿಸಲಾಗಿದೆ. ತನ್ನ ತಾಯಿಯನ್ನು ಸಮಾಧಿ ಮಾಡಿದ್ದ ಜಾಗಕ್ಕೆ ಇತ್ತೀಚೆಗೆ ಸಮೀರ್ ವಾಂಖೇಡೆ ತೆರಳಿದ್ದಾಗಲೂ ಯಾರೋ ಹಿಂದಿನಿಂದ ಬಂದಿದ್ದಾರೆ ಎಂದು ವಾಂಖೇಡೆ ಆರೋಪಿಸಿದ್ದರು. ಈ ಬಗ್ಗೆ ಅಲ್ಲಿನ ಸಿಸಿಟಿವಿಯಲ್ಲಿ ದಾಖಲಾಗಿದೆ ಎಂದಿದ್ದರು.
ಅದಕ್ಕೂ ಮುನ್ನ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಸಂದರ್ಭ ದಾಳಿ ನಡೆಸಿದ್ದ ವೇಳೆ ಬೇರೆ ಕೆಲವು ಪೊಲೀಸರು ಅಲ್ಲಿಗೆ ಬಂದಿದ್ದರು ಎಂದು ಸಮೀರ್ ಹೇಳಿಕೆ ನೀಡಿದ್ದರು. ನನ್ನ ರಹಸ್ಯ ಕಾರ್ಯಾಚರಣೆ ಬಗ್ಗೆ ಯಾರೋ ಗಮನಿಸುತ್ತಿದ್ದಾರೆ. ಕೆಲವರು ನನ್ನ ಹಿಂದೆ ಬಿದ್ದು ಯಾರಿಗೋ ಮಾಹಿತಿ ನೀಡುತ್ತಿದ್ದಾರೆಂದು ಅನುಮಾನ ಪಟ್ಟಿದ್ದರು. ಈ ಬಗ್ಗೆ ಡಿಜಿಪಿ ಮತ್ತು ಮುಂಬೈ ಪೊಲೀಸ್ ಕಮಿಷನರ್ ಗೆ ಪತ್ರ ಬರೆದಿದ್ದರು.
ಆರ್ಯನ್ ಖಾನ್ ಡ್ರಗ್ಸ್ ಪ್ರಕರಣದಲ್ಲಿ ಈಗಾಗ್ಲೇ 20ಕ್ಕೂ ಹೆಚ್ಚು ಮಂದಿಯನ್ನು ಎನ್ ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಅಲ್ಲದೆ, ಪ್ರಕರಣದಲ್ಲಿ ಹಲವು ಪಕ್ಷಗಳ ರಾಜಕೀಯ ನಾಯಕರು ಸಂಬಂಧ ಹೊಂದಿದ್ದಾರೆ ಎಂಬ ಆರೋಪವೂ ಕೇಳಿಬಂದಿತ್ತು.
The security cover of Narcotics Control Bureau (NCB) Zonal Director Sameer Wankhede, who is currently supervising the investigations in the high-profile Mumbai cruise drug bust case, has been increased after he alleged that two cops were monitoring his movements. As per Wankhede's new security arrangement, a number of armed bodyguards, from Mumbai Police and NCB, have been added to his security fleet. His official vehicle has also been changed due to security reasons.
18-08-25 01:25 pm
Bangalore Correspondent
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
18-08-25 01:28 pm
HK News Desk
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
18-08-25 04:07 pm
Mangalore Correspondent
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am