ಬ್ರೇಕಿಂಗ್ ನ್ಯೂಸ್
23-10-21 03:59 pm Headline Karnataka News Network ದೇಶ - ವಿದೇಶ
ಶ್ರೀನಗರ, ಅ.22: ಒಂದೆಡೆ ಸಾಮಾನ್ಯ ಜನರನ್ನು ಗುರಿಯಾಗಿಸಿ ಉಗ್ರರು ದಾಳಿ ನಡೆಸುತ್ತಿರುವ ಮಧ್ಯೆಯೇ ಕೇಂದ್ರ ಗೃಹ ಸಚಿವ ಅಮಿತ್ ಷಾ ಅಲ್ಲಿನ ವಸ್ತುಸ್ಥಿತಿಯನ್ನು ತಿಳಿದುಕೊಳ್ಳಲು ಜಮ್ಮು ಕಾಶ್ಮೀರಕ್ಕೆ ಆಗಮಿಸಿದ್ದಾರೆ. ಮೂರು ದಿನಗಳ ಭೇಟಿಗಾಗಿ ಆಗಮಿಸಿರುವ ಸಚಿವ ಅಮಿತ್ ಷಾ, ಭದ್ರತೆಯ ವಿಚಾರದಲ್ಲಿ ವಿವಿಧ ಇಲಾಖೆಗಳ ಪ್ರಮುಖರ ಜೊತೆ ಸಭೆ ನಡೆಸಿದ್ದಾರೆ.
ಜಮ್ಮು ಕಾಶ್ಮೀರದ 370ನೇ ವಿಧಿಯನ್ನು ರದ್ದುಗೊಳಿಸಿ ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಿದ ಬಳಿಕ ಮೊದಲ ಬಾರಿಗೆ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡುತ್ತಿರುವ ಗೃಹ ಸಚಿವ ಅಮಿತ್ ಷಾ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಇದರ ಜೊತೆಗೆ, ಅಲ್ಲಿನ ಭದ್ರತೆ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ. ಗುಪ್ತಚರ ವಿಭಾಗ, ಸಿಆರ್ ಪಿಎಫ್ ವಿಭಾಗ, ಗಡಿಭದ್ರತಾ ಪಡೆ ಮತ್ತು ಜಮ್ಮು ಕಾಶ್ಮೀರ ಪೊಲೀಸ್ ಮುಖ್ಯಸ್ಥರ ಜೊತೆ ಅಮಿತ್ ಷಾ ಶ್ರೀನಗರದಲ್ಲಿಯೇ ಮಧ್ಯಾಹ್ನ ಸಭೆ ನಡೆಸಿದ್ದಾರೆ.
ಇತ್ತೀಚೆಗೆ ಉಗ್ರರ ಗುಂಡೇಟಿಗೆ ಹತರಾಗಿರುವ ಮಖಾನ್ ಲಾಲ್ ಬಿಂದ್ರೂ, ಸುಪೀಂದರ್ ಕೌರ್ ಮತ್ತು 25 ವರ್ಷದ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಅರ್ಷದ್ ಅಹ್ಮದ್ ಮೀರ್ ಅವರ ಕುಟುಂಬಸ್ಥರನ್ನು ಗೃಹ ಸಚಿವರು ಭೇಟಿಯಾಗಲಿದ್ದಾರೆ. ಇದೇ ವೇಳೆ, ಶ್ರೀನಗರದಿಂದ ಶಾರ್ಜಾಗೆ ಮೊದಲ ಬಾರಿಗೆ ಆರಂಭಗೊಳ್ಳುತ್ತಿರುವ ನೇರ ವಿಮಾನ ಸಂಚಾರ ಕಾರ್ಯಕ್ಕೆ ಅಮಿತ್ ಷಾ ವಿಡಿಯೋ ಕಾನ್ಫೆರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ. ಅಮಿತ್ ಷಾ ಭೇಟಿ ಹಿನ್ನೆಲೆಯಲ್ಲಿ ಕಣಿವೆ ರಾಜ್ಯದಾದ್ಯಂತ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜನೆ ಮಾಡಲಾಗಿದೆ.
ಅ.24ರಂದು ಅಮಿತ್ ಷಾ ಜಮ್ಮುವಿಗೆ ಭೇಟಿ ನೀಡಲಿದ್ದು, ಅಲ್ಲಿನ ಭಗ್ವತಿ ನಗರದ ಬಿಜೆಪಿ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಪುಲ್ವಾಮಾ ಜಿಲ್ಲೆಯ ಸಿಆರ್ ಪಿಎಫ್ ಗ್ರೂಪ್ ಸೆಂಟರಿಗೆ ಭೇಟಿ ನೀಡಿ, ಅಲ್ಲಿ ಪುಲ್ವಾಮಾ ದಾಳಿಯಿಂದ ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸಲಿದ್ದಾರೆ. 25ರಂದು ಶ್ರೀನಗರದ ಶೇರ್ ಇ ಕಾಶ್ಮೀರಿ ಅಂತಾರಾಷ್ಟ್ರೀಯ ಕನ್ವೆನ್ಶನ್ ಸೆಂಟರಿನಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿ ವಿವಿಧ ನಾಗರಿಕ ಪ್ರತಿನಿಧಿಗಳ ನಿಯೋಗದ ಜೊತೆಗೆ ಮಾತುಕತೆ ನಡೆಸಲಿದ್ದಾರೆ.
Prolonged encounters with terrorists, the growing threat of radicalisation, the killing of civilians, and an increase in cross-border infiltration - these were the key issues discussed at a high-level meeting chaired by Home Minister Amit Shah in Jammu and Kashmir's Srinagar today.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm