ಬ್ರೇಕಿಂಗ್ ನ್ಯೂಸ್
26-10-21 01:06 pm Headline Karnataka News Network ದೇಶ - ವಿದೇಶ
ಲಾಗೋಸ್, ಅ 26: ಉತ್ತರ ನೈಜೀರಿಯಾದ ಮಸೀದಿಯೊಂದರ ಮೇಲೆ ಮುಸುಕುಧಾರಿಗಳು ದಾಳಿ ನಡೆಸಿದ್ದು, 18 ಮಂದಿ ಮೃತಪಟ್ಟಿದ್ದಾರೆ.
ಮುಂಜಾನೆ ಪ್ರಾರ್ಥನಾ ಸಮಯದಲ್ಲಿ ಉತ್ತರ ನೈಜೀರಿಯಾದ ಮಸೀದಿಯೊಂದರ ಮೇಲೆ ದಾಳಿ ನಡೆಸಿರುವ ಬಂದೂಕುಧಾರಿಗಳು ರಕ್ತಪಾತ ನಡೆಸಿದ್ದಾರೆ.
ಇತ್ತೀಚೆಗೆ ನೈಜೀರಿಯಾದ ವಾಯುವ್ಯ ರಾಜ್ಯಗಳಲ್ಲಿ ಹಿಂಸಾಚಾರ ಹೆಚ್ಚಾಗುತ್ತಿದೆ. ರಾಜಧಾನಿಯಿಂದ ಸುಮಾರು 270 ಕಿಲೋ ಮೀಟರ್ ದೂರದಲ್ಲಿರುವ ಮಜಕುಕಾ ಪ್ರದೇಶದಲ್ಲಿ ಭದ್ರತಾ ವ್ಯವಸ್ಥೆ ಕಡಿಮೆಯಿದೆ. ಅಲ್ಲದೇ, ಘಟನಾ ಸ್ಥಳಕ್ಕೆ ತಲುಪಲು ಉತ್ತಮವಾದ ರಸ್ತೆ ಮಾರ್ಗವೂ ಇಲ್ಲ. ಈ ಹಿನ್ನೆಲೆ ಸಂಚು ರೂಪಿಸಿ ಬಂದೂಕುಧಾರಿಗಳು ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ದೊರೆತಿದೆ.
ಕಳೆದ ವಾರವಷ್ಟೇ ವಾಯುವ್ಯ ಸುಕೊಟೊ ರಾಜ್ಯದಲ್ಲಿ ದುಷ್ಕರ್ಮಿಗಳು ದಾಳಿ ನಡೆಸಿ, ಕನಿಷ್ಠ 40 ಕ್ಕೂ ಹೆಚ್ಚು ಜನರನ್ನು ಕೊಂದಿದ್ದರು. ಸೂಕ್ತ ಭದ್ರತಾ ವ್ಯವಸ್ಥೆ ಇಲ್ಲದಿರುವ ಪ್ರದೇಶಗಳೇ ದಾಳಿಕೋರರಿಗೆ ಅಡಗುತಾಣಗಳಾಗಿವೆ ಎಂದು ಹೇಳಲಾಗುತ್ತಿದೆ.
ಕಳೆದ ಒಂದು ವಾರದ ಹಿಂದಷ್ಟೇ ಬೈಕ್ಗಳಲ್ಲಿ ಬಂದ ಬಂಡುಕೋರರು ಗುಂಡು ಹಾರಿಸಿ ಸುಮಾರು 43 ಮಂದಿಯನ್ನು ಕೊಂದಿರುವ ಘಟನೆ ನೈಜೀರಿಯಾದ ವಾಯವ್ಯ ರಾಜ್ಯವಾದ ಸೊಕೊಟೊದಲ್ಲಿ ನಡೆದಿತ್ತು.

ಗೊರೊನ್ವೋ ಗ್ರಾಮದಲ್ಲಿ ಭಾನುವಾರ ಬಂಡುಕೋರರು ನಡೆಸಿದ ದಾಳಿಯಲ್ಲಿ ಸುಮಾರು 43 ಮಂದಿ ಮೃತಪಟ್ಟಿರುವುದು ದೃಢವಾಗಿದೆ ಎಂದು ಸೊಕೊಟೊ ಸರ್ಕಾರದ ವಕ್ತಾರ ಮೊಹಮ್ಮದ್ ಬೆಲ್ಲೋ ಹೇಳಿದ್ದಾರೆ ಎಂದು ಏಜೆನ್ಸ್ ಫ್ರಾನ್ಸ್ ಪ್ರೆಸ್ಸೆ ವರದಿ ಮಾಡಿದ್ದು, ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವುದಾಗಿ ಉಲ್ಲೇಖಿಸಿದೆ.
ಸೋಮವಾರ ಬೆಳಗ್ಗೆ ಈ ಬಗ್ಗೆ ವರದಿ ಮಾಡಿರುವ ಸ್ಥಳೀಯ ಪತ್ರಿಕೆ ಪ್ರೀಮಿಯಮ್ ಟೈಮ್ಸ್, ಗ್ರಾಮದಲ್ಲಿ ಮಾರುಕಟ್ಟೆ ನಡೆಯುತ್ತಿದ್ದ ವೇಳೆ ದಾಳಿ ನಡೆದಿದ್ದು, 30 ಮಂದಿ ಸಾವನ್ನಪ್ಪಿ, 20 ಮಂದಿ ಗಾಯಗೊಂಡಿದ್ದಾರೆ. ಸುಮಾರು 200 ಮಂದಿಯ ಗುಂಪು ಬೈಕ್ಗಳಲ್ಲಿ ಬಂದು ದಾಳಿ ನಡೆಸಿದ್ದಾರೆ ಎಂದು ಮಾಹಿತಿ ನೀಡಿದೆ.
ಇದಕ್ಕೂ ಮೊದಲು ಬೇರೊಂದು ಗ್ರಾಮದ ಮಾರುಕಟ್ಟೆಯ ಮೇಲೆ ದಾಳಿ ನಡೆಸಿದ್ದ ಬಂಡುಕೋರರು, 19 ಮಂದಿಯನ್ನು ಕೊಂದಿದ್ದರು. ಸುಮಾರು ವರ್ಷಗಳಲ್ಲಿ ಈ ರಾಷ್ಟ್ರದಲ್ಲಿ ಹಿಂಸಾಚಾರಗಳು ನಡೆಯುತ್ತಿದ್ದು, ಬೋಕೋ ಹರಾಮ್ ಮುಂತಾದ ಬಂಡುಕೋರರು ಇಲ್ಲಿ ಆಗಾಗ ದಾಳಿ ನಡೆಸುತ್ತಿರುತ್ತವೆ.
At least 18 worshippers were killed by gunmen who attacked a mosque in northern Nigeria during early morning prayers Monday
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm