ಬ್ರೇಕಿಂಗ್ ನ್ಯೂಸ್
26-10-21 05:28 pm Headline Karnataka News Network ದೇಶ - ವಿದೇಶ
ಬೀಜಿಂಗ್, ಅ.26: ಚೀನಾದಲ್ಲಿ ಮತ್ತೆ ಕೊರೊನಾ ಸೋಂಕಿನ ಆತಂಕ ಆವರಿಸಿದೆ. 40 ಲಕ್ಷ ಜನಸಂಖ್ಯೆ ಹೊಂದಿರುವ ಲ್ಯಾನ್ ಝು ಎನ್ನುವ ನಗರದಲ್ಲಿ ಲಾಕ್ಡೌನ್ ಘೋಷಣೆ ಮಾಡಲಾಗಿದ್ದು, ಅತ್ಯಂತ ಅಗತ್ಯವನ್ನು ಹೊರತುಪಡಿಸಿ ಜನರು ಮನೆಯಿಂದ ಹೊರಬಾರದಂತೆ ಕಟ್ಟಪ್ಪಣೆ ವಿಧಿಸಿದೆ.
ಕಳೆದ ಬಾರಿ 2019ರಲ್ಲಿ ಮೊದಲ ಬಾರಿಗೆ ಕೊರೊನಾ ಸೋಂಕು ಆವರಿಸಿದಾಗ, ಬೀಜಿಂಗ್ ಸೇರಿದಂತೆ ಚೀನಾದ ನಗರಗಳಲ್ಲಿ ಲಾಕ್ಡೌನ್ ಹೇರಲಾಗಿತ್ತು. ಒಂದು ವರ್ಷದ ನಂತರ ಸೋಂಕು ಕಡಿಮೆಯಾದ ಬಳಿಕ ಜನಜೀವನ ಸಹಜ ಸ್ಥಿತಿಗೆ ಬಂದಿತ್ತು. ಆದರೆ, ಇದೀಗ ಕೆಲವು ನಗರಗಳಲ್ಲಿ ಹೊಸ ಪ್ರಕರಣಗಳು ಪತ್ತೆಯಾಗುತ್ತಿದ್ದು, ಮತ್ತೆ ಲಾಕ್ಡೌನ್ ಹೇರಲು ಮುಂದಾಗಿದೆ. ಜಗತ್ತಿನ ಇತರ ರಾಷ್ಟ್ರಗಳು ಕೋವಿಡ್ ಸೋಂಕಿನ ಮಧ್ಯೆಯೇ ಜೀವಿಸಲು ಮುಂದಾಗಿದ್ದರೆ, ಚೀನಾ ತನ್ನಲ್ಲಿ ಲಾಕ್ಡೌನ್ ಹೇರಿದ್ದು ಹೊಸ ಚಿಂತೆಗೆ ಕಾರಣವಾಗಿದೆ.

ಮಂಗಳವಾರ ಚೀನಾದಲ್ಲಿ 29 ಹೊಸ ಪ್ರಕರಣಗಳು ಪತ್ತೆಯಾಗಿವೆ. ಆ ಪೈಕಿ ಆರು ಕೇಸ್ ಚೀನಾದ ಉತ್ತರ ಭಾಗದ ಗ್ಯಾನ್ಸು ಪ್ರಾಂತದ ಲ್ಯಾನ್ ಝು ನಗರ ಒಂದರಲ್ಲೇ ಪತ್ತೆಯಾಗಿದೆ. ಹೀಗಾಗಿ ಆ ನಗರವನ್ನು ಪೂರ್ತಿಯಾಗಿ ಬಂದ್ ಮಾಡಲು ಸರಕಾರ ಆದೇಶ ಮಾಡಿದೆ. ಚೀನಾದಲ್ಲಿ ಡೆಲ್ಟಾ ರೂಪಾಂತರಿ ವೈರಸ್ ಕಂಡುಬಂದಿದ್ದು ಅ.17ರ ನಂತರ 198 ಪ್ರಕರಣಗಳು ಪತ್ತೆಯಾಗಿವೆ. ಲ್ಯಾನ್ ಝು ನಗರದಲ್ಲಿ 39 ಕೇಸು ಕಂಡುಬಂದಿದೆ.

ಲ್ಯಾನ್ ಝು ನಗರದಲ್ಲಿ ಬಸ್, ಟ್ಯಾಕ್ಸಿ ಓಡಾಟವನ್ನು ಸ್ಥಗಿತಗೊಳಿಸಲಾಗಿದ್ದು ಬೀಜಿಂಗ್ ಸೇರಿದಂತೆ ಇನ್ನಿತರ ನಗರಗಳಿಗೆ ಸಂಚರಿಸುವ ರೈಲುಗಳನ್ನೂ ನಿಲ್ಲಿಸಲಾಗಿದೆ. ಅಗತ್ಯ ವಸ್ತುಗಳು ಮತ್ತು ಮೆಡಿಕಲ್ ಅಂಗಡಿಯನ್ನೂ ಸೀಮಿತಗೊಳಿಸಿದ್ದು, ಜನರು ಅಗತ್ಯ ಕಾರ್ಯಗಳಿಗೆ ಮಾತ್ರ ಹೊರಬರುವಂತೆ ಸೂಚನೆ ನೀಡಲಾಗಿದೆ. ಲ್ಯಾನ್ ಝು ನಗರದಿಂದ ಸಂಪರ್ಕಿಸುವ ವಿಮಾನಗಳನ್ನೂ ಸ್ಥಗಿತಗೊಳಿಸಲಾಗಿದೆ. ಆರೋಗ್ಯ ಇಲಾಖೆ ಸೋಂಕು ಹೆಚ್ಚುವ ಬಗ್ಗೆ ಸೂಚನೆ ನೀಡಿದ್ದು ಟೆಸ್ಟಿಂಗ್ ಪ್ರಮಾಣವನ್ನು ಹೆಚ್ಚಿಸಲು ಕ್ರಮ ಕೈಗೊಂಡಿದೆ.
China placed a city of four million people under lockdown on Tuesday, ordering them not to leave home except in emergencies, in a bid to eradicate a Covid cluster of just a few dozen confirmed cases.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm