ಬ್ರೇಕಿಂಗ್ ನ್ಯೂಸ್
11-09-20 08:56 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 11: ಪ್ರಸಿದ್ಧ ಸಾಮಾಜಿಕ ಕಾರ್ಯಕರ್ತ, ಆರ್ಯ ಸಮಾಜದ ನಾಯಕ ಸ್ವಾಮಿ ಅಗ್ನಿವೇಶ್ (80) ಶುಕ್ರವಾರ ನಿಧನರಾದರು. ಯಕೃತ್ತಿನ ಸಿರೋಸಿಸ್ನಿಂದ ಬಳಲುತ್ತಿದ್ದ ಅವರು ತೀವ್ರ ಅನಾರೋಗ್ಯಕ್ಕೆ ಒಳಗಾಗಿ ನವದೆಹಲಿಯ ಇನ್ಸ್ಟಿಟ್ಯೂಟ್ ಆಫ್ ಲಿವರ್ ಆಂಡ್ ಬಿಲಿಯರಿ ಸೈನ್ಸಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಂಗಳವಾರದಿಂದಲೂ ಅವರು ಬಹುಅಂಗಾಂಗ ವೈಫಲ್ಯದ ಕಾರಣ ವೆಂಟಿಲೇಟರ್ ಸಪೋರ್ಟ್ನಲ್ಲಿದ್ದರು.
ಚಿಕಿತ್ಸೆ ಪಡೆಯುತ್ತಿದ್ದ ಅವರ ಆರೋಗ್ಯ ಸ್ಥಿತಿ ಸೆ. 11ರಂದು ತೀವ್ರ ಹದಗೆಟ್ಟಿತ್ತು. ಸಂಜೆ 6 ಗಂಟೆಯ ವೇಳೆಗೆ ಹೃದಯಾಘಾತಕ್ಕೆ ಒಳಗಾದರು. ಅವರ ಹೃದಯ ಬಡಿತವನ್ನು ಮರುಸ್ಥಾಪಿಸುವ ಪ್ರಯತ್ನಗಳು ನಡೆದರೂ ಸಂಜೆ 6.30ರ ವೇಳೆಗೆ ಅವರು ಕೊನೆಯುಸಿರೆಳೆದರು. ತಮ್ಮ ನೆಚ್ಚಿನ ನಾಯಕ ನಿಧನದಿಂದ ಶೋಕಿಸುತ್ತಿರುವ ದೇಶದ ಜನತೆಯ ಜತೆಗೆ ಐಎಲ್ಬಿಎಸ್ ಕೂಡ ಸೇರಿಕೊಂಡಿದೆ ಎಂದು ಆಸ್ಪತ್ರೆ ಹೇಳಿಕೆ ತಿಳಿಸಿದೆ.
70ರ ದಶಕದಲ್ಲೇ ಅಗ್ನಿವೇಶ್ ಅವರು ಆರ್ಯ ಸಭಾ ಎಂಬ ರಾಜಕೀಯ ಪಕ್ಷವನ್ನು ಸ್ಥಾಪಿಸಿದ್ದರು. ಇದು ಆರ್ಯ ಸಮಾಜದ ತತ್ವಗಳನ್ನು ಆಧರಿಸಿದ್ದಾಗಿತ್ತು. ಅಲ್ಲದೆ, ಧರ್ಮಗಳ ನಡುವಿನ ವ್ಯಾಜ್ಯಗಳಿಗೆ ವಕೀಲರಾಗಿಯೂ ಇವರು ಹಾಜರಾಗುತ್ತಿದ್ದರು.
ಸ್ತ್ರೀ ಭ್ರೂಣ ಹತ್ಯೆ ಮತ್ತು ಮಹಿಳೆಯರ ವಿಮೋಚನೆಗೆ ಸಂಬಂಧಿಸಿದ ಅಭಿಯಾನಗಳು ಸೇರಿದಂತೆ ಸಾಮಾಜಿಕ ಹೋರಾಟಗಳಲ್ಲಿ ಕ್ರಿಯಾಶೀಲತೆಯಿಂದ ಭಾಗಿಯಾಗುತ್ತಿದ್ದರು. ಇದರಿಂದಾಗಿಯೇ ಹಲವಾರು ಬೆಂಬಲಿಗರು ಹಾಗೂ ಸಮಾನ ಸಂಖ್ಯೆಯ ವಿರೋಧಿಗಳನ್ನೂ ಇವರು ಸಂಪಾದಿಸಿದ್ದರು. ಇದೇ ಕಾರಣಕ್ಕೆ ಇವರ ಮೇಲೆ ಕೆಲವು ಭಾರಿ ಹಲ್ಲೆಗಳಾದದ್ದೂ ಇದೆ.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
05-03-26 02:34 pm
HK News Staffer
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm