ಬ್ರೇಕಿಂಗ್ ನ್ಯೂಸ್
11-09-20 11:36 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 11: ಕಾಂಗ್ರೆಸ್ ಪಕ್ಷಕ್ಕೆ ಪೂರ್ಣಾವಧಿ ಅಧ್ಯಕ್ಷರ ನೇಮಕ ವಿಚಾರದಲ್ಲಿ ಹಿರಿಯ ನಾಯಕರ ಅಸಮಾಧಾನ ಭುಗಿಲೆದ್ದಿರುವ ಹೊತ್ತಲ್ಲೇ ದಿಢೀರ್ ಆಗಿ ಎಐಸಿಸಿ ಉಸ್ತುವಾರಿಗಳ ಪುನಾರಚನೆ ಮಾಡಲಾಗಿದೆ. ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಚುನಾವಣಾ ಸಮಿತಿ ಸ್ಥಾನದಿಂದ ಹಿರಿಯ ಮುಖಂಡ ವೀರಪ್ಪ ಮೊಯ್ಲಿಯನ್ನು ಕಿತ್ತು ಹಾಕಲಾಗಿದೆ. ಮೊಯ್ಲಿ ಜಾಗಕ್ಕೆ ಕರ್ನಾಟಕದವರೇ ಆದ ಮಾಜಿ ಸಚಿವ ಕೃಷ್ಣಭೈರೇ ಗೌಡರನ್ನು ನೇಮಕ ಮಾಡಲಾಗಿದೆ. ಅಲ್ಲದೆ, ಕರ್ನಾಟಕದ ದಿನೇಶ್ ಗುಂಡೂರಾವ್, ಎಚ್.ಕೆ ಪಾಟೀಲ್ ಅವರಿಗೆ ಇತರೇ ರಾಜ್ಯಗಳ ಉಸ್ತುವಾರಿ ಹೊಣೆ ನೀಡಲಾಗಿದೆ. ದಿನೇಶ್ ಗುಂಡೂರಾವ್ ಗೆ ತಮಿಳುನಾಡು ಜೊತೆಗೆ ಪಾಂಡಿಚೇರಿ, ಗೋವಾ ರಾಜ್ಯಗಳ ಹೆಚ್ಚುವರಿ ಹೊಣೆ ವಹಿಸಲಾಗಿದೆ. ಉತ್ತರ ಕರ್ನಾಟಕದ ಹಿರಿಯ ಮುಖಂಡ ಎಚ್.ಕೆ ಪಾಟೀಲ್ ಗೆ ಮಹಾರಾಷ್ಟ್ರ ಕಾಂಗ್ರೆಸ್ ಉಸ್ತುವಾರಿ ನೀಡಲಾಗಿದೆ.

ಹಾಗೆಯೇ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಆಗಿದ್ದ ಕೆ.ಸಿ. ವೇಣುಗೋಪಾಲ್ ಸ್ಥಾನಕ್ಕೆ ರಣದೀಪ್ ಸಿಂಗ್ ಸುರ್ಜೇವಾಲಾರನ್ನು ತರಲಾಗಿದೆ. ಅಲ್ಲದೆ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮಲ್ಲಿಕಾರ್ಜುನ ಖರ್ಗೆ ಮತ್ತು ಗುಲಾಂ ನಬಿ ಆಜಾದ್ ಅವರನ್ನೂ ತೆಗೆದು ಹಾಕಲಾಗಿದೆ. ಯುವ ಘಟಕದ ರಾಷ್ಟ್ರೀಯ ಅಧ್ಯಕ್ಷ ಎ.ವಿ. ಶ್ರೀನಿವಾಸ್ ಅವರನ್ನು ಎಐಸಿಸಿ ವಿಶೇಷ ಆಹ್ವಾನಿತರಾಗಿ ನೇಮಕ ಮಾಡಲಾಗಿದೆ.
ಇತ್ತೀಚೆಗೆ ವೀರಪ್ಪ ಮೊಯ್ಲಿ , ಗುಲಾಂ ನಬಿ ಆಜಾದ್, ಕಪಿಲ್ ಸಿಬಲ್, ಶಶಿ ತರೂರ್ ಸೇರಿದಂತೆ 23 ಮಂದಿ ಹಿರಿಯ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಪೂರ್ಣಾವಧಿ ಅಧ್ಯಕ್ಷರ ಅಗತ್ಯದ ಬಗ್ಗೆ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದರು. ಪತ್ರ ಮಾಧ್ಯಮಕ್ಕೆ ಬಹಿರಂಗ ಆಗಿದ್ದು ಗಾಂಧಿ ಕುಟುಂಬ ಮತ್ತು ಎಐಸಿಸಿ ಪ್ರಮುಖರ ಅಸಮಾಧಾನಕ್ಕೆ ಕಾರಣವಾಗಿತ್ತು. ಆನಂತರ ಗುಲಾಂ ನಬಿ ಆಜಾದ್ ಮತ್ತು ವೀರಪ್ಪ ಮೊಯ್ಲಿ ತಾವು ಪತ್ರಕ್ಕೆ ಸಹಿ ಹಾಕಿದ್ದನ್ನು ಒಪ್ಪಿಕೊಂಡಿದ್ದರಲ್ಲದೆ, ಪಕ್ಷದ ಒಳಿತಿಗಾಗಿ ಪತ್ರ ಬರೆದಿದ್ದು ಸತ್ಯ ಎಂದಿದ್ದರು. ಇದೀಗ ವೀರಪ್ಪ ಮೊಯ್ಲಿಯನ್ನು ಕೇಂದ್ರ ಚುನಾವಣಾ ಸಮಿತಿಯಿಂದ ಹೊರಗಿಡಲಾಗಿದೆ. ಗುಲಾಂ ನಬಿ ಆಜಾದನ್ನು ರಾಷ್ಟ್ರೀಯ ಕಾರ್ಯದರ್ಶಿ ಹುದ್ದೆಯಿಂದ ತೆಗೆದು ಹಾಕಲಾಗಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm