ಬ್ರೇಕಿಂಗ್ ನ್ಯೂಸ್
01-11-21 07:34 pm Headline Karnataka News Desk ದೇಶ - ವಿದೇಶ
ಲಕ್ನೋ, ನ.1: ಸಮಾಜವಾದಿ ಪಾರ್ಟಿ ಮುಖ್ಯಸ್ಥ ಅಖಿಲೇಶ್ ಯಾದವ್ ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ಅಸೆಂಬ್ಲಿ ಚುನಾವಣೆಯಲ್ಲಿ ಸ್ಪರ್ಧೆ ಮಾಡದಿರಲು ನಿರ್ಧರಿಸಿದ್ದಾರೆ.
ಸದ್ಯ ಆಜಂಪುರ ಲೋಕಸಭಾ ಕ್ಷೇತ್ರದ ಸದಸ್ಯರಾಗಿರುವ ಅಖಿಲೇಶ್ ಯಾದವ್, ಈ ಹಿಂದೆ ಉತ್ತರ ಪ್ರದೇಶ ಮುಖ್ಯಮಂತ್ರಿಯೂ ಆಗಿದ್ದರು. ಮುಂದಿನ ಚುನಾವಣೆಯಲ್ಲಿ ಸಮಾಜವಾದಿ ಪಾರ್ಟಿಯಿಂದ ಅಖಿಲೇಶ್ ಅವರನ್ನೇ ಸಿಎಂ ಅಭ್ಯರ್ಥಿ ಎಂದು ಬಿಂಬಿಸಲಾಗುತ್ತಿದ್ದರೂ, ಅವರು ಅಸೆಂಬ್ಲಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎನ್ನಲಾಗುತ್ತಿದೆ. ಹೀಗಾಗಿ ಸಿಎಂ ಅಭ್ಯರ್ಥಿಯಾಗಿ ಬೇರೆ ಯಾರನ್ನಾದರೂ ಬಿಂಬಿಸುತ್ತಾರೆಯೇ ಎಂಬ ಬಗ್ಗೆ ಕುತೂಹಲ ಎದ್ದಿದೆ.
ಬಿಜೆಪಿ ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಾ ಚುನಾವಣಾ ಪ್ರಚಾರದಲ್ಲಿರುವ ಅಖಿಲೇಶ್ ಯಾದವ್ ಚುನಾವಣೆಗೆ ಮೊದಲೇ ಸ್ಥಳೀಯ ಪಕ್ಷಗಳ ಜೊತೆ ಮೈತ್ರಿ ಸಾಧಿಸುವ ಯತ್ನದಲ್ಲಿದ್ದಾರೆ. ಆರ್ ಎಲ್ ಡಿ ಜೊತೆಗೆ ಈಗಾಗಲೇ ಮಾತುಕತೆ ನಡೆದಿದ್ದು, ಸೀಟು ಹಂಚಿಕೆ ವಿಚಾರದಲ್ಲಿ ಚರ್ಚೆ ನಡೆಸುತ್ತಿದ್ದಾರೆ. ಇದಲ್ಲದೆ, ಸಚ್ ದೇವ್ ಭಾರತೀಯ ಸಮಾಜಪಾರ್ಟಿ ಮತ್ತು ಶಿವಪಾಲ್ ಸಿಂಗ್ ಯಾದವ್ ಅವರ ಪ್ರಗತಿಶೀಲ್ ಸಮಾಜವಾದಿ ಪಾರ್ಟಿ ಲೋಹಿಯಾ ಜೊತೆಗೂ ಮೈತ್ರಿಗೆ ಸಿದ್ಧತೆ ನಡೆದಿದೆ.
ವಾರದ ಹಿಂದಷ್ಟೇ ಬಿಜೆಪಿಯ ಒಬ್ಬ ಶಾಸಕ ಮತ್ತು ಆರು ಮಂದಿ ಬಿಎಸ್ಪಿ ಶಾಸಕರು ಸಮಾಜವಾದಿ ಪಾರ್ಟಿಗೆ ಸೇರ್ಪೆಡೆಯಾಗಿದ್ದರು. ಈ ವೇಳೆ ಪ್ರತಿಕ್ರಿಯಿಸಿದ್ದ ಅಖಿಲೇಶ್ ಯಾದವ್, ಭಾಜಪಾ ಪರಿವಾರ್ ಮುಂದಿನ ದಿನಗಳಲ್ಲಿ ಭಾಗ್ ತಾ ಪರಿವಾರ್ (ಕುಟುಂಬ ಬಿಟ್ಟು ಓಡುವ) ಆಗಲಿದೆ ಎಂದು ಟೀಕಿಸಿದ್ದರು.
2022ರಲ್ಲಿ ಉತ್ತರ ಪ್ರದೇಶ ಚುನಾವಣೆ ಎದುರಿಸಲಿದ್ದು ಬಿಜೆಪಿಯಿಂದ ಈಗಾಗಲೇ ಸಿದ್ಧತೆ ನಡೆದಿದೆ. ಎರಡು ದಿನಗಳ ಹಿಂದೆ ಲಕ್ನೋಗೆ ಬಂದಿದ್ದ ಅಮಿತ್ ಷಾ, ಮುಂದಿನ ಚುನಾವಣೆಯನ್ನು ಯೋಗಿ ಆದಿತ್ಯನಾಥ್ ನೇತೃತ್ವದಲ್ಲೇ ಎದುರಿಸಲಿದ್ದೇವೆ ಎಂದು ಹೇಳಿದ್ದರು.
Samajwadi Party chief Akhilesh Yadav has said he will not contest the Uttar Pradesh election next year, but his party insists a decision will be taken collectively and there is none yet. Akhilesh Yadav was quoted by Press Trust of India as saying: "I will not be contesting the assembly election myself".
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm