ಬ್ರೇಕಿಂಗ್ ನ್ಯೂಸ್
01-11-21 07:34 pm Headline Karnataka News Desk ದೇಶ - ವಿದೇಶ
ಲಕ್ನೋ, ನ.1: ಸಮಾಜವಾದಿ ಪಾರ್ಟಿ ಮುಖ್ಯಸ್ಥ ಅಖಿಲೇಶ್ ಯಾದವ್ ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ಅಸೆಂಬ್ಲಿ ಚುನಾವಣೆಯಲ್ಲಿ ಸ್ಪರ್ಧೆ ಮಾಡದಿರಲು ನಿರ್ಧರಿಸಿದ್ದಾರೆ.
ಸದ್ಯ ಆಜಂಪುರ ಲೋಕಸಭಾ ಕ್ಷೇತ್ರದ ಸದಸ್ಯರಾಗಿರುವ ಅಖಿಲೇಶ್ ಯಾದವ್, ಈ ಹಿಂದೆ ಉತ್ತರ ಪ್ರದೇಶ ಮುಖ್ಯಮಂತ್ರಿಯೂ ಆಗಿದ್ದರು. ಮುಂದಿನ ಚುನಾವಣೆಯಲ್ಲಿ ಸಮಾಜವಾದಿ ಪಾರ್ಟಿಯಿಂದ ಅಖಿಲೇಶ್ ಅವರನ್ನೇ ಸಿಎಂ ಅಭ್ಯರ್ಥಿ ಎಂದು ಬಿಂಬಿಸಲಾಗುತ್ತಿದ್ದರೂ, ಅವರು ಅಸೆಂಬ್ಲಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎನ್ನಲಾಗುತ್ತಿದೆ. ಹೀಗಾಗಿ ಸಿಎಂ ಅಭ್ಯರ್ಥಿಯಾಗಿ ಬೇರೆ ಯಾರನ್ನಾದರೂ ಬಿಂಬಿಸುತ್ತಾರೆಯೇ ಎಂಬ ಬಗ್ಗೆ ಕುತೂಹಲ ಎದ್ದಿದೆ.
ಬಿಜೆಪಿ ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಾ ಚುನಾವಣಾ ಪ್ರಚಾರದಲ್ಲಿರುವ ಅಖಿಲೇಶ್ ಯಾದವ್ ಚುನಾವಣೆಗೆ ಮೊದಲೇ ಸ್ಥಳೀಯ ಪಕ್ಷಗಳ ಜೊತೆ ಮೈತ್ರಿ ಸಾಧಿಸುವ ಯತ್ನದಲ್ಲಿದ್ದಾರೆ. ಆರ್ ಎಲ್ ಡಿ ಜೊತೆಗೆ ಈಗಾಗಲೇ ಮಾತುಕತೆ ನಡೆದಿದ್ದು, ಸೀಟು ಹಂಚಿಕೆ ವಿಚಾರದಲ್ಲಿ ಚರ್ಚೆ ನಡೆಸುತ್ತಿದ್ದಾರೆ. ಇದಲ್ಲದೆ, ಸಚ್ ದೇವ್ ಭಾರತೀಯ ಸಮಾಜಪಾರ್ಟಿ ಮತ್ತು ಶಿವಪಾಲ್ ಸಿಂಗ್ ಯಾದವ್ ಅವರ ಪ್ರಗತಿಶೀಲ್ ಸಮಾಜವಾದಿ ಪಾರ್ಟಿ ಲೋಹಿಯಾ ಜೊತೆಗೂ ಮೈತ್ರಿಗೆ ಸಿದ್ಧತೆ ನಡೆದಿದೆ.
ವಾರದ ಹಿಂದಷ್ಟೇ ಬಿಜೆಪಿಯ ಒಬ್ಬ ಶಾಸಕ ಮತ್ತು ಆರು ಮಂದಿ ಬಿಎಸ್ಪಿ ಶಾಸಕರು ಸಮಾಜವಾದಿ ಪಾರ್ಟಿಗೆ ಸೇರ್ಪೆಡೆಯಾಗಿದ್ದರು. ಈ ವೇಳೆ ಪ್ರತಿಕ್ರಿಯಿಸಿದ್ದ ಅಖಿಲೇಶ್ ಯಾದವ್, ಭಾಜಪಾ ಪರಿವಾರ್ ಮುಂದಿನ ದಿನಗಳಲ್ಲಿ ಭಾಗ್ ತಾ ಪರಿವಾರ್ (ಕುಟುಂಬ ಬಿಟ್ಟು ಓಡುವ) ಆಗಲಿದೆ ಎಂದು ಟೀಕಿಸಿದ್ದರು.
2022ರಲ್ಲಿ ಉತ್ತರ ಪ್ರದೇಶ ಚುನಾವಣೆ ಎದುರಿಸಲಿದ್ದು ಬಿಜೆಪಿಯಿಂದ ಈಗಾಗಲೇ ಸಿದ್ಧತೆ ನಡೆದಿದೆ. ಎರಡು ದಿನಗಳ ಹಿಂದೆ ಲಕ್ನೋಗೆ ಬಂದಿದ್ದ ಅಮಿತ್ ಷಾ, ಮುಂದಿನ ಚುನಾವಣೆಯನ್ನು ಯೋಗಿ ಆದಿತ್ಯನಾಥ್ ನೇತೃತ್ವದಲ್ಲೇ ಎದುರಿಸಲಿದ್ದೇವೆ ಎಂದು ಹೇಳಿದ್ದರು.
Samajwadi Party chief Akhilesh Yadav has said he will not contest the Uttar Pradesh election next year, but his party insists a decision will be taken collectively and there is none yet. Akhilesh Yadav was quoted by Press Trust of India as saying: "I will not be contesting the assembly election myself".
08-10-25 11:04 pm
Bangalore Correspondent
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
08-10-25 08:57 pm
HK News Desk
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
08-10-25 10:09 pm
Mangalore Correspondent
ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹಕ್ಕಿದೆ, ಸಹಕಾ...
08-10-25 06:07 pm
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
08-10-25 08:47 pm
HK News Desk
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am