ಬ್ರೇಕಿಂಗ್ ನ್ಯೂಸ್
03-11-21 10:28 pm Headline Karnataka News Desk ದೇಶ - ವಿದೇಶ
ನವದೆಹಲಿ, ನ.3: ದೇಶಾದ್ಯಂತ ನಡೆದ ಉಪ ಚುನಾವಣೆಗಳಲ್ಲಿ ಆಡಳಿತಾರೂಢ ಬಿಜೆಪಿಗೆ ಹಿನ್ನಡೆ ಆದ ಬೆನ್ನಲ್ಲೇ ಕೇಂದ್ರ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಇಳಿಸಿದ್ದು ದೀಪಾವಳಿ ಕೊಡುಗೆ ನೆಪದಲ್ಲಿ ಜನರ ಮೇಲಿನ ಹೊರೆಯನ್ನು ತಗ್ಗಿಸಿದೆ.
ಪೆಟ್ರೋಲ್ ಮೇಲಿನ ಸುಂಕದಲ್ಲಿ ಐದು ರೂ. ಇಳಿಸಿದ್ದರೆ, ಡೀಸೆಲ್ ತೆರಿಗೆಯಲ್ಲಿ ಹತ್ತು ರೂ. ಇಳಿಕೆ ಮಾಡಿದೆ. ಕೇಂದ್ರ ಸರಕಾರದ ಸುಂಕದಲ್ಲಿ ಇಳಿಕೆಯಾಗಿದ್ದರಿಂದ ಅದಕ್ಕೆ ಅನುಸರಿಸಿ ಪೆಟ್ರೋಲ್ ಮತ್ತು ಡೀಸೆಲ್ ಲೀಟರ್ ದರದಲ್ಲಿಯೂ ಅಷ್ಟೇ ಇಳಿಕೆಯಾಗಲಿದೆ. ಕಡಿಮೆಯಾದ ದರ ನ.4 ರಿಂದ ದೇಶಾದ್ಯಂತ ಜಾರಿಗೆ ಬರಲಿದೆ.
ಕಳೆದ ಎರಡು ತಿಂಗಳಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಏರಿಕೆಯಾದ ನೆಪದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಭಾರೀ ಏರಿಕೆಯಾಗಿತ್ತು. ಕರ್ನಾಟಕದಲ್ಲಿ ಪೆಟ್ರೋಲಿಗೆ 112 ರೂ. ಆಗಿದ್ದರೆ, ಡೀಸೆಲಿಗೆ 105 ರೂ. ಆಗಿತ್ತು. ಈ ಪೈಕಿ 60 ಶೇ. ಭಾಗ ಕೇಂದ್ರ ಮತ್ತು ರಾಜ್ಯ ಸರಕಾರದ ತೆರಿಗೆಯೇ ಇದ್ದರೂ, ಅದನ್ನು ಇಳಿಸಬೇಕೆಂದು ದೇಶಾದ್ಯಂತ ಒತ್ತಾಯ ಕೇಳಿಬಂದಿದ್ದರೂ ಸರಕಾರ ಕಿವಿಕೊಟ್ಟಿರಲಿಲ್ಲ. ಇದೀಗ ದೇಶದ ವಿವಿಧ ರಾಜ್ಯಗಳಲ್ಲಿ ಉಪ ಚುನಾವಣೆ ನಡೆದಿದ್ದು ಬಿಜೆಪಿಗೆ ಬಹುತೇಕ ಕಡೆ ಹಿನ್ನಡೆಯಾಗಿದೆ. ಬಿಜೆಪಿ ಹೊಂದಿದ್ದ ಸಂಸದ ಕ್ಷೇತ್ರವೂ ಕಾಂಗ್ರೆಸ್ ಪಾಲಾಗಿತ್ತು. ಹಿಮಾಚಲ ಪ್ರದೇಶದಲ್ಲಿ ನಾಲ್ಕು ಸ್ಥಾನಗಳಲ್ಲಿ ಕಾಂಗ್ರೆಸ್ ಗೆದ್ದಿತ್ತು. ಈ ಫಲಿತಾಂಶದ ಬೆನ್ನಲ್ಲೇ ಕೇಂದ್ರ ಸರಕಾರ ಜನರ ಮೇಲಿನ ತೆರಿಗೆ ಹೊರೆಯನ್ನು ತಗ್ಗಿಸಿದೆ.
ಇದೇ ವೇಳೆ, ಆಯಾ ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ತೆರಿಗೆಯನ್ನು ಇಳಿಸುವಂತೆ ಕೇಂದ್ರ ಸರಕಾರ ರಾಜ್ಯಗಳಿಗೆ ಸೂಚನೆ ನೀಡಿದೆ. ಇದರಿಂದ ಆರ್ಥಿಕ ಸಂಕಷ್ಟಕ್ಕೊಳಗಾದ ಜನರಿಗೆ ಸ್ವಲ್ಪ ಮಟ್ಟಿಗೆ ಆಸರೆ ಆಗಲಿದೆ ಎಂದು ಕೇಂದ್ರ ಸರಕಾರ ಉಚಿತ ಸಲಹೆಯನ್ನೂ ನೀಡಿದೆ.
In a move to provide a fillip to the economy, the Central government has taken a decision to make significant cuts in excise duty on petrol and diesel starting tomorrow. On the eve of Diwali, the government decided to reduce the central excise duty of ₹5 on petrol and ₹10 on diesel, according to people familiar with the matter. The prices of fuel and diesel will come down accordingly across the country.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm