ಬ್ರೇಕಿಂಗ್ ನ್ಯೂಸ್
06-11-21 06:48 pm HK News Desk ದೇಶ - ವಿದೇಶ
ಮುಂಬೈ, ನ.6: ಮಹಾರಾಷ್ಟ್ರದ ಅಹ್ಮದ್ ನಗರ ಜಿಲ್ಲೆಯ ಸರಕಾರಿ ಕೋವಿಡ್ ಆಸ್ಪತ್ರೆಯ ಐಸಿಯು ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡು 11 ಮಂದಿ ರೋಗಿಗಳು ದುರಂತ ಸಾವು ಕಂಡಿದ್ದಾರೆ.
ಸದ್ರಿ ಐಸಿಯು ವಾರ್ಡ್ ನಲ್ಲಿ 17 ಮಂದಿ ಇದ್ದರು. ಈ ಪೈಕಿ ಕೆಲವರನ್ನು ಬೇರೆ ವಿಭಾಗಕ್ಕೆ ಸ್ಥಳಾಂತರ ಮಾಡಲಾಗಿದೆ. ಮೂರ್ನಾಲ್ಕು ಮಂದಿ ಗಾಯಗೊಂಡಿದ್ದು, ಹನ್ನೊಂದು ಮಂದಿ ಸಾವಿಗೀಡಾಗಿದ್ದಾರೆ ಎಂದು ಅಹ್ಮದ್ ನಗರ ಜಿಲ್ಲಾಧಿಕಾರಿ ರಾಜೇಂದ್ರ ಭೋಂಸ್ಲೆ ತಿಳಿಸಿದ್ದಾರೆ.

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಘಟನೆ ಬಗ್ಗೆ ತನಿಖೆಗೆ ಆದೇಶ ಮಾಡಿದ್ದು, ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಜಿಲ್ಲಾಧಿಕಾರಿ ಹೇಳಿಕೆ ಪ್ರಕಾರ, ಶಾರ್ಟ್ ಸರ್ಕಿಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗುತ್ತಿದೆ. ಬೆಂಕಿಯಿಂದಾಗಿ ಹೊಗೆ ಆವರಿಸಿದ್ದು, ರೋಗಿಗಳನ್ನು ಬಚಾವ್ ಮಾಡಲು ವೈದ್ಯರು ಮತ್ತು ಇತರ ಸಿಬಂದಿ ಹರಸಾಹಸ ಪಟ್ಟಿದ್ದಾರೆ. ಇದರ ವಿಡಿಯೋಗಳು ವೈರಲ್ ಆಗಿದ್ದು, ಹೃದಯ ವಿದ್ರಾವಕ ದೃಶ್ಯಗಳು ಸೆರೆಯಾಗಿವೆ.
ಘಟನೆ ಬಗ್ಗೆ ಭಾರೀ ಆತಂಕ ವ್ಯಕ್ತಪಡಿಸಿರುವ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್, ಯಾರು ಹೊಣೆಯಾಗಿದ್ದಾರೋ ಅವರಿಗೆ ಸೂಕ್ತ ಶಿಕ್ಷೆಯಾಗಬೇಕು. ಆಸ್ಪತ್ರೆಗಳಲ್ಲಿ ಬೆಂಕಿ ನಿರೋಧಕ ಯಂತ್ರಗಳನ್ನು ಹೊಂದಿರಬೇಕು ಎಂಬ ನಿಯಮ ಇದ್ದರೂ, ಇಲ್ಲಿ ಇಷ್ಟು ಗಂಭೀರ ಸ್ಥಿತಿ ಎದುರಾಗಲು ಏನು ಕಾರಣ ಅನ್ನುವುದರ ಬಗ್ಗೆ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ. ಪ್ರಧಾನಿ ಮೋದಿ ಕೂಡ, ಘಟನೆ ಬಗ್ಗೆ ಆತಂಕ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.
Eleven patients died after a fire broke out in the ICU (intensive care unit) of the Civil Hospital in Maharashtra's Ahmednagar on Saturday morning. Three to four others have been injured and are being treated. The fire was in the hospital's COVID-19 ward, in which 17 patients had been admitted. The remaining patients have been shifted to a Covid ward in another hospital, District Collector Rajendra Bhosle told reporters, adding that a 'fire audit' of the structure had been conducted.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am