ಬ್ರೇಕಿಂಗ್ ನ್ಯೂಸ್
11-11-21 04:58 pm HK News Desk ದೇಶ - ವಿದೇಶ
ಮುಂಬೈ, ನ.11: ಮುಂಬೈ, ಪುಣೆ ಸೇರಿ ಮಹಾರಾಷ್ಟ್ರದಲ್ಲಿ ನೆಲೆಸಿರುವ ಕರ್ನಾಟಕದ ಕರಾವಳಿಯ ತುಳುವರು ಮತ್ತು ಕನ್ನಡಿಗರಿಗೆ ತಾಯ್ನಾಡಿಗೆ ಬರಲು ಆರ್ ಟಿಪಿಸಿಆರ್ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯ ನೀತಿಯನ್ನು ಕರ್ನಾಟಕ ಸರಕಾರ ಹಿಂಪಡೆಯಬೇಕೆಂದು ಮುಂಬೈ ಕನ್ನಡಿಗರು ಆಗ್ರಹಿಸಿದ್ದಾರೆ.
ಈ ಬಗ್ಗೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಪತ್ರ ಬರೆದಿರುವ ಮುಂಬೈ ಬಿಜೆಪಿ ಕಾನೂನು ಪ್ರಕೋಷ್ಠದ ಅಧ್ಯಕ್ಷ ಮೋರ್ಲ ರತ್ನಾಕರ ಶೆಟ್ಟಿ , ರಸ್ತೆ ಪ್ರಯಾಣ, ವಿಮಾನ, ರೈಲು ಮೂಲಕ ತಾಯ್ನಾಡಿಗೆ ಆಗಮಿಸುವ ಕನ್ನಡಿಗರಿಗೆ ಕೋವಿಡ್ ನೆಗೆಟಿವ್ ಪ್ರಮಾಣಪತ್ರದಿಂದ ವಿನಾಯ್ತಿ ನೀಡಬೇಕು. ಹಲವು ತಿಂಗಳಿಂದ 72 ಗಂಟೆಗಳ ಒಳಗೆ ಟೆಸ್ಟ್ ಮಾಡಿರುವ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ನೀತಿ ಜಾರಿಯಲ್ಲಿದೆ. ಆದರೆ ಈಗ ಮಹಾರಾಷ್ಟ್ರದಲ್ಲಿ ಕೋವಿಡ್ ಪರಿಸ್ಥಿತಿ ಬದಲಾಗಿದ್ದು 90 ಶೇ. ಸೋಂಕು ಇಳಿಕೆಯಾಗಿದೆ.
ಕೇಂದ್ರ ಸರಕಾರವೂ ಕೋವಿಡ್ ಲಸಿಕೆ ಪಡೆದಿರುವ ಮಂದಿಗೆ ದೇಶೀಯ ವಿಮಾನ ಪ್ರಯಾಣಕ್ಕೆ ಹೊಸ ಮಾರ್ಗಸೂಚಿಯಲ್ಲಿ ವಿನಾಯ್ತಿ ನೀಡಿದ್ದಾರೆ. ಆದರೆ ಕರ್ನಾಟಕ ಸರಕಾರ ಮಾತ್ರ ರೈಲು ಮತ್ತು ವಿಮಾನದಲ್ಲಿ ಹೊರ ರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಕೇಳುತ್ತಿದೆ. ಇದರಿಂದ ಕನ್ನಡಿಗರು ತಮ್ಮ ಊರಿಗೆ ತೆರಳುವ ಸಂದರ್ಭದಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ ಕರ್ನಾಟಕ ಸರಕಾರ ಕೋವಿಡ್ ನೆಗೆಟಿವ್ ಕಡ್ಡಾಯ ನೀತಿಯಿಂದ ವಿನಾಯ್ತಿ ನೀಡಬೇಕು. ಎರಡು ಡೋಸ್ ಕೋವಿಡ್ ಲಸಿಕೆ ಪಡೆದಿರುವ ಮತ್ತು ಯಾವುದೇ ಸೋಂಕಿನ ಲಕ್ಷಣ ಇಲ್ಲದಿರುವ ಜನರಿಗೆ ಕರ್ನಾಟಕ ಪ್ರವೇಶಕ್ಕೆ ಅನುಮತಿ ನೀಡಬೇಕು ಎಂದು ಮುಂಬೈ ಬಿಜೆಪಿ ಘಟಕದ ಮುಖಂಡ ಮೋರ್ಲ ರತ್ನಾಕರ ಶೆಟ್ಟಿ ಕರ್ನಾಟಕದ ಮುಖ್ಯಮಂತ್ರಿಯನ್ನು ಒತ್ತಾಯಿಸಿದ್ದಾರೆ.
Mumbai BJP leader writes a letter to govt of Karnataka to stop asking for a Negative Covid certificate to people travelling via train, bus and flight.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm