ಬ್ರೇಕಿಂಗ್ ನ್ಯೂಸ್
17-11-21 01:04 pm Mangaluru Correspondent ದೇಶ - ವಿದೇಶ
ನವದೆಹಲಿ, ನ.17: ಇಸ್ಲಾಮಿಕ್ ರೀಸರ್ಚ್ ಫೌಂಡೇಶನ್ ಸ್ಥಾಪಕ ಮತ್ತು ವಿವಾದಾತ್ಮಕ ಭಾಷಣಕಾರ ಝಾಕಿರ್ ನಾಯ್ಕ್ ಮೇಲಿನ ನಿಷೇಧವನ್ನು ಕೇಂದ್ರ ಗೃಹ ಸಚಿವಾಲಯ ಮತ್ತೆ 5 ವರ್ಷಗಳಿಗೆ ವಿಸ್ತರಿಸಿದೆ.
ಈ ಬಗ್ಗೆ ಗೃಹ ಸಚಿವಾಲಯದಿಂದ ಆದೇಶ ಹೊರಡಿಸಲಾಗಿದ್ದು, ಇಸ್ಲಾಮಿಕ್ ರಿಸರ್ಚ್ ಫೌಂಡೇಶನ್ ಹೆಸರಲ್ಲಿ ದೇಶದ ಆಂತರಿಕ ಭದ್ರತೆಗೆ ಸವಾಲಾಗಬಲ್ಲ ಚಟುವಟಿಕೆಗಳನ್ನು ನಡೆಸುತ್ತಿರುವುದು ಕಂಡುಬಂದಿದೆ. ಅಲ್ಲದೆ, ದೇಶದ ಶಾಂತಿ, ಸಾಮಾಜಿಕ ಸೌಹಾರ್ದಕ್ಕೆ ಧಕ್ಕೆ ತರುವ ಮತ್ತು ಜಾತ್ಯತೀತ ನೆಲೆಗಳಿಗೆ ಅಪಾಯ ಸಾಧ್ಯತೆ ಇದೆ ಅನ್ನುವ ನಿಟ್ಟಿನಲ್ಲಿ ನಿಷೇಧ ಮುಂದುವರಿಸಿದ್ದಾಗಿ ಹೇಳಿದೆ. ಇಸ್ಲಾಮಿಕ್ ರಿಸರ್ಚ್ ಫೌಂಡೇಶನ್ ಕಾನೂನು ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವುದನ್ನು ಉಲ್ಲೇಖಿಸಿ 2016ರಲ್ಲಿ ಹೊರಡಿಸಿದ್ದ ಆದೇಶವನ್ನು ಗೃಹ ಇಲಾಖೆ ಮತ್ತೆ ಉಲ್ಲೇಖಿಸಿದೆ.
ದೇಶದ್ರೋಹದ ಚಟುವಟಿಕೆಯಡಿ ಇಸ್ಲಾಮಿಕ್ ರೀಸರ್ಚ್ ಫೌಂಡೇಶನನ್ನು ಮೊದಲ ಬಾರಿಗೆ 2016ರ ನವೆಂಬರ್ 17 ರಂದು ಕೇಂದ್ರ ಸರಕಾರ ಐದು ವರ್ಷಗಳ ಅವಧಿಗೆ ನಿಷೇಧ ವಿಧಿಸಿತ್ತು. ಇದೇ ನವೆಂಬರ್ 17ಕ್ಕೆ ನಿಷೇಧ ಅವಧಿ ಮುಗಿಯುವುದರಿಂದ ಅದಕ್ಕೂ ಮೊದಲೇ ನ.15ರಂದು ಮತ್ತೆ ಐದು ವರ್ಷಕ್ಕೆ ಸಂಘಟನೆಯನ್ನು ನಿಷೇಧಿಸಿ ಆದೇಶ ಮಾಡಿದೆ.
ಭಾರತೀಯ ಮೂಲದ ಡಾ.ಝಾಕೀರ್ ನಾಯ್ಕ್ ವಿರುದ್ಧ ಪ್ರಚೋದನಾತ್ಮಕ ಭಾಷಣಗಳಿಂದಾಗಿ 2016ರಲ್ಲಿ ವಿವಿಧ ಕಡೆ ಪ್ರಕರಣ ದಾಖಲಾಗಿತ್ತು. ಸಮುದಾಯಳ ನಡುವೆ ಕಿಚ್ಚು ಹಚ್ಚುವ ಭಾಷಣ ಮತ್ತು ದೇಶವಿರೋಧಿ ಕೃತ್ಯದ ಚಟುವಟಿಕೆ ಹಿನ್ನೆಲೆಯಲ್ಲಿ ಕೇಸು ದಾಖಲಾದ ಬೆನ್ನಲ್ಲೇ ಝಾಕಿರ್ ನಾಯ್ಕ್ ದೇಶ ಬಿಟ್ಟು ಹೋಗಿದ್ದು ಮಲೇಶ್ಯಾದಲ್ಲಿ ನೆಲೆಸಿದ್ದಾನೆ ಎನ್ನಲಾಗುತ್ತಿದೆ.
The Centre on Monday extended for five years the ban imposed on the Islamic Research Foundation (IRF), headed by India-born preacher Zakir Naik, currently based in Malaysia. The Islamic Research Foundation was first declared an unlawful organisation under the Unlawful Activities (Prevention) Act, 1967 (37 of 1967) by the central government on November 17, 2016.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm