ಬ್ರೇಕಿಂಗ್ ನ್ಯೂಸ್
22-11-21 06:04 pm Headline Karnataka News Network ದೇಶ - ವಿದೇಶ
ಚೆನ್ನೈ, ನ.22: ಇತ್ತೀಚೆಗೆ ಅಮೆರಿಕದ ಚಿಕಾಗೋದಲ್ಲಿ ಭಾರತೀಯ ಮೂಲದ ಖಾದಿ ವಸ್ತ್ರ ಭಂಡಾರವನ್ನು ಆರಂಭಿಸಿ ಎರಡು ದಿನಗಳ ಹಿಂದಷ್ಟೇ ಚೆನ್ನೈಗೆ ಮರಳಿದ್ದ ಬಹುಭಾಷಾ ನಟ ಕಮಲ್ ಹಾಸನ್ ಕೋವಿಡ್ ಸೋಂಕಿಗೆ ಒಳಗಾಗಿದ್ದಾರೆ. ಕೋವಿಡ್ ಪಾಸಿಟಿವ್ ಆಗಿರುವುದನ್ನು ಕಮಲಹಾಸನ್ ಟ್ವೀಟ್ ಮೂಲಕ ಹೇಳಿಕೊಂಡಿದ್ದಾರೆ.
ಕೆಮ್ಮು ಇನ್ನಿತರ ಕೋವಿಡ್ ಲಕ್ಷಣಗಳನ್ನು ಹೊಂದಿರುವ ನಟ ಕಮಲಹಾಸನ್ ಚೆನ್ನೈನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಮಲಹಾಸನ್, ವಿಕ್ರಮ್ ಕನಗರಾಜನ್ ನಿರ್ದೇಶನದ ತಮಿಳು ಚಿತ್ರ ಮತ್ತು ವಿಜಯ್ ಟಿವಿಯಲ್ಲಿ ಪ್ರಸಾರವಾಗುತ್ತಿರುವ ತಮಿಳು ಬಿಗ್ ಬಾಸ್ ಸೀಸನ್ –5 ಅನ್ನು ನಡೆಸಿಕೊಡುತ್ತಿದ್ದಾರೆ. ಅಮೆರಿಕದಿಂದ ಹಿಂತಿರುಗಿದ ಬಳಿಕ ಮಾತನಾಡಿದ್ದ ಕಮಲ್, ಕೆಲವರು ನಾನು ಅಮೆರಿಕದಲ್ಲಿದ್ದರಿಂದ ಈ ವಾರದ ಬಿಗ್ ಬಾಸ್ ಸೀಸನಿಂದ ಮಿಸ್ ಆಗಲಿದ್ದಾರೆ ಅಂದ್ಕೊಂಡಿದ್ದರು. ಆದರೆ ನಾನು ಯಾವತ್ತೂ ಮಿಸ್ ಮಾಡಿಕೊಳ್ಳುವ ಪ್ರವೃತ್ತಿಯನ್ನು ಹೊಂದಿಲ್ಲ ಎಂದಿದ್ದರು.
ಆದರೆ, ಅದರ ಮರುದಿನ ಅಂದರೆ ನ.22ರಂದು ತನ್ನ ಟ್ವಿಟರ್ ನಲ್ಲಿ ಕೋವಿಡ್ ಪಾಸಿಟಿವ್ ಎಂದು ಹೇಳಿಕೊಂಡಿದ್ದು ಆಸ್ಪತ್ರೆಯಲ್ಲಿ ಕ್ವಾರಂಟೈನ್ ಆಗಿರುವುದಾಗಿ ಹೇಳಿದ್ದಾರೆ. ಅಮೆರಿಕದಿಂದ ಹಿಂತಿರುಗಿದ ಬಳಿಕ ಸ್ವಲ್ಪ ಕೆಮ್ಮು ಆಗಿತ್ತು. ಹಾಗಾಗಿ ಟೆಸ್ಟ್ ಮಾಡಿದ್ದೆ. ಟೆಸ್ಟ್ ನಲ್ಲಿ ಕೋವಿಡ್ ಪಾಸಿಟಿವ್ ಕಂಡುಬಂದಿದೆ. ನಾನು ಚೆನ್ನೈನ ಆಸ್ಪತ್ರೆಯಲ್ಲಿ ಕ್ವಾರಂಟೈನ್ ಆಗಿದ್ದೇನೆ. ಜನರು ಕೋವಿಡ್ ನಮ್ಮಿಂದ ದೂರವಾಗಿದೆ ಎಂದು ಅಂದ್ಕೊಳ್ಳುವುದು ಬೇಡ. ಕೋವಿಡ್ ಬಗ್ಗೆ ಮುಂಜಾಗ್ರತೆ ವಹಿಸಿಕೊಳ್ಳಬೇಕು ಎಂದು ತಮಿಳಿನಲ್ಲಿ ಟ್ವೀಟ್ ಮಾಡಿದ್ದಾರೆ.
ವಾರದ ಹಿಂದೆ ಅಮೆರಿಕದ ಚಿಕಾಗೋ ನಗರದಲ್ಲಿ ಕಾಸ್ಟ್ಯೂಮ್ ಡಿಸೈನರ್ ಅಮೃತಾ ರಾಮ್ ಜೊತೆಗೂಡಿ ಕೆಎಚ್ ಹೌಸ್ ಖದ್ದರ್ ಎನ್ನುವ ಹೆಸರಲ್ಲಿ ಖಾದಿ ವಸ್ತ್ರಗಳ ಮಳಿಗೆಯನ್ನು ತೆರೆದಿದ್ದಾರೆ. ಖಾದಿ ವಸ್ತ್ರಗಳನ್ನು ಅಮೆರಿಕದಲ್ಲಿ ಪರಿಚಯಿಸಲು ಖಾದಿ ಬ್ರಾಂಡಿನ ಮಳಿಗೆಯನ್ನು ಆರಂಭಿಸಿದ್ದಾರೆ. ಈ ಬಗ್ಗೆ ಮಾತನಾಡಿದ್ದ ಕಮಲ್ ಹಾಸನ್, ಚಿಕಾಗೋ ಸಮೃದ್ಧ ಸಂಸ್ಕೃತಿ ಮತ್ತು ಇತಿಹಾಸವನ್ನು ಹೊಂದಿರುವ ಸ್ಪೆಷಲ್ ಆಗಿರುವ ಸಿಟಿ. ದೇಸಿ ಸಂಸ್ಕೃತಿ ಇಲ್ಲಿಯೂ ಜನರಲ್ಲಿ ಬೆಳೆಯಬೇಕು. ನಮ್ಮ ಬ್ರಾಂಡ್ ಜನರಿಗೆ ತಲುಪಲು ಸೂಕ್ತ ನಗರವನ್ನು ನಾವು ಆಯ್ದುಕೊಂಡಿದ್ದೇವೆ ಎನ್ನುವ ಭರವಸೆ ಇದೆ. ಉತ್ತರ ಅಮೆರಿಕಾದಲ್ಲೇ ಇಲ್ಲಿನ ಜನ ಅತಿ ಹೆಚ್ಚು ವಸ್ತ್ರ, ಉಡುಪುಗಳ ಬಗ್ಗೆ ಹೆಚ್ಚು ಗಮನ ಹೊಂದಿದ್ದಾರೆ ಎಂದು ಹೇಳಿದ್ದರು.
Makkal Needhi Maiam president and actor Kamal Haasan on Monday said he has tested positive for COVID-19 and has been admitted to a hospital.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am