ಬ್ರೇಕಿಂಗ್ ನ್ಯೂಸ್
30-07-20 12:13 pm Correspondent ದೇಶ - ವಿದೇಶ
ನವದೆಹಲಿ(ಜುಲೈ 30): ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಆರ್ಥಿಕ ಹೊರೆ ತಗ್ಗಿಸುವ ಉದ್ದೇಶದಿಂದ ಡೀಸೆಲ್ ಮೇಲೆ ಶೇ. 30ರಷ್ಟು ವ್ಯಾಟ್ ತೆರಿಗೆ ವಿಧಿಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈಗ ಅರ್ಧದಷ್ಟು ತಗ್ಗಿಸಿದ್ಧಾರೆ. ದೆಹಲಿಯಲ್ಲಿ ಈಗ ವ್ಯಾಟ್ ತೆರಿಗೆಯನ್ನು ಶೇ. 16.75ಕ್ಕೆ ಇಳಿಸಲಾಗಿದೆ. ಇದರಿಂದ ಡೀಸೆಲ್ ಬೆಲೆ ದೆಹಲಿಯಲ್ಲಿ ಲೀಟರ್ಗೆ 8.36 ರೂಪಾಯಿಯಷ್ಟು ಕಡಿಮೆ ಆಗಲಿದೆ.
ಲೀಟರ್ಗೆ 82 ರೂ ಇರುವ ಡೀಸೆಲ್ ಬೆಲೆ ಈಗ 73.64ಕ್ಕೆ ಇಳಿಕೆಯಾಗಲಿದೆ. ರಾಜಧಾನಿ ನಗರದ ಉದ್ಯಮಿಗಳು ಮತ್ತು ವರ್ತಕರ ಬೇಡಿಕೆ ಮೇರೆಗೆ ವ್ಯಾಟ್ ಇಳಿಕೆಯ ಈ ಕ್ರಮ ಕೈಗೊಳ್ಳಲಾಗಿದೆ. ಡೀಸೆಲ್ ಬೆಲೆ ಇಳಿಕೆಯಿಂದ ದೆಹಲಿಯ ಆರ್ಥಿಕತೆಗೆ ಪುಷ್ಟಿ ಸಿಗುತ್ತದೆ ಎಂದು ಕೇಜ್ರಿವಾಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಡೀಸೆಲ್ಗೆ ನಮ್ಮ ದೇಶದಲ್ಲಿ ಮೊದಲಿಂದಲೂ ಕಡಿಮೆ ಸುಂಕ ವಿಧಿಸಲಾಗುತ್ತಿದೆ. ಇದರಿಂದಾಗಿ ಪೆಟ್ರೋಲ್ಗಿಂತ ಡೀಸೆಲ್ ಯಾವಾಗಲೂ ಬೆಲೆ ಕಡಿಮೆಯೇ. ಆದರೆ, ಕೊರೋನಾ ಸಂಕಷ್ಟದ ಪರಿಸ್ಥಿತಿಯಲ್ಲಿ ಆರ್ಥಿಕತೆ ಸುಧಾರಿಸಲು ಮತ್ತು ಮಾಲಿನ್ಯಕಾರಕ ಡಿಸೆಲ್ಗೆ ಕಡಿವಾಣ ಹಾಕುವ ಉದ್ದೇಶದಿಂದ ದೆಹಲಿ ಸರ್ಕಾರ ಡೀಸೆಲ್ ಮೇಲೆ ವ್ಯಾಟ್ ತೆರಿಗೆಯನ್ನು ಶೇ. 30ರಷ್ಟು ಹೇರಲು ನಿರ್ಧರಿಸಿತ್ತು. ಇದರಿಂದ ಪೆಟ್ರೋಲ್ಗಿಂತ ಇಲ್ಲಿ ಡೀಸೆಲ್ ದುಬಾರಿಯಾಗಿತ್ತು. ಕಳೆದ ತಿಂಗಳು 18 ದಿನಗಳಲ್ಲಿ ಪೆಟ್ರೋಲ್ ಬೆಲೆ 8.50 ರೂ ಏರಿಕೆಯಾದರೆ, ಡೀಸೆಲ್ 10.48 ರೂ ಬೆಲೆ ಹೆಚ್ಚಳ ಕಂಡಿತ್ತು. ಇದರಿಂದ ಹಲವು ಕಡೆಗಳಿಂದ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಸೇರಲಾಗಿದ್ದ ಸಂಪುಟ ಸಭೆಯಲ್ಲಿ ಡೀಸೆಲ್ ಮೇಲಿನ ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಯನ್ನು ಇಳಿಕೆ ಮಾಡುವ ನಿರ್ಧಾರಕ್ಕೆ ಬರಲಾಗಿದೆ.
ಡೀಸೆಲ್ ಮತ್ತು ಪೆಟ್ರೋಲ್ಗೆ ಕೇಂದ್ರ ಸರ್ಕಾರ ಈಗ ಸರಿಸುಮಾರು ಒಂದೇ ಮೊತ್ತದ ತೆರಿಗೆ ವಿಧಿಸುತ್ತದೆ. ಪೆಟ್ರೋಲ್ ಮೇಲೆ ಕೇಂದ್ರ ಸುಂಕ 32.98 ರೂ ಇದೆ. ಡೀಸೆಲ್ ಮೇಲೆ 31.83 ಇದೆ. ರಾಜ್ಯ ಸರ್ಕಾರಗಳೂ ಕೂಡ ವ್ಯಾಟ್ನಂಥ ತೆರಿಗೆಯನ್ನು ಹೆಚ್ಚುವರಿಯಾಗಿ ವಿಧಿಸುತ್ತವೆ. ಹೀಗಾಗಿ, ರಾಜ್ಯದಿಂದ ರಾಜ್ಯಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ವ್ಯತ್ಯಾಸ ಇರುತ್ತದೆ.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am