ಬ್ರೇಕಿಂಗ್ ನ್ಯೂಸ್
30-07-20 12:13 pm Correspondent ದೇಶ - ವಿದೇಶ
ನವದೆಹಲಿ(ಜುಲೈ 30): ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಆರ್ಥಿಕ ಹೊರೆ ತಗ್ಗಿಸುವ ಉದ್ದೇಶದಿಂದ ಡೀಸೆಲ್ ಮೇಲೆ ಶೇ. 30ರಷ್ಟು ವ್ಯಾಟ್ ತೆರಿಗೆ ವಿಧಿಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈಗ ಅರ್ಧದಷ್ಟು ತಗ್ಗಿಸಿದ್ಧಾರೆ. ದೆಹಲಿಯಲ್ಲಿ ಈಗ ವ್ಯಾಟ್ ತೆರಿಗೆಯನ್ನು ಶೇ. 16.75ಕ್ಕೆ ಇಳಿಸಲಾಗಿದೆ. ಇದರಿಂದ ಡೀಸೆಲ್ ಬೆಲೆ ದೆಹಲಿಯಲ್ಲಿ ಲೀಟರ್ಗೆ 8.36 ರೂಪಾಯಿಯಷ್ಟು ಕಡಿಮೆ ಆಗಲಿದೆ.
ಲೀಟರ್ಗೆ 82 ರೂ ಇರುವ ಡೀಸೆಲ್ ಬೆಲೆ ಈಗ 73.64ಕ್ಕೆ ಇಳಿಕೆಯಾಗಲಿದೆ. ರಾಜಧಾನಿ ನಗರದ ಉದ್ಯಮಿಗಳು ಮತ್ತು ವರ್ತಕರ ಬೇಡಿಕೆ ಮೇರೆಗೆ ವ್ಯಾಟ್ ಇಳಿಕೆಯ ಈ ಕ್ರಮ ಕೈಗೊಳ್ಳಲಾಗಿದೆ. ಡೀಸೆಲ್ ಬೆಲೆ ಇಳಿಕೆಯಿಂದ ದೆಹಲಿಯ ಆರ್ಥಿಕತೆಗೆ ಪುಷ್ಟಿ ಸಿಗುತ್ತದೆ ಎಂದು ಕೇಜ್ರಿವಾಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಡೀಸೆಲ್ಗೆ ನಮ್ಮ ದೇಶದಲ್ಲಿ ಮೊದಲಿಂದಲೂ ಕಡಿಮೆ ಸುಂಕ ವಿಧಿಸಲಾಗುತ್ತಿದೆ. ಇದರಿಂದಾಗಿ ಪೆಟ್ರೋಲ್ಗಿಂತ ಡೀಸೆಲ್ ಯಾವಾಗಲೂ ಬೆಲೆ ಕಡಿಮೆಯೇ. ಆದರೆ, ಕೊರೋನಾ ಸಂಕಷ್ಟದ ಪರಿಸ್ಥಿತಿಯಲ್ಲಿ ಆರ್ಥಿಕತೆ ಸುಧಾರಿಸಲು ಮತ್ತು ಮಾಲಿನ್ಯಕಾರಕ ಡಿಸೆಲ್ಗೆ ಕಡಿವಾಣ ಹಾಕುವ ಉದ್ದೇಶದಿಂದ ದೆಹಲಿ ಸರ್ಕಾರ ಡೀಸೆಲ್ ಮೇಲೆ ವ್ಯಾಟ್ ತೆರಿಗೆಯನ್ನು ಶೇ. 30ರಷ್ಟು ಹೇರಲು ನಿರ್ಧರಿಸಿತ್ತು. ಇದರಿಂದ ಪೆಟ್ರೋಲ್ಗಿಂತ ಇಲ್ಲಿ ಡೀಸೆಲ್ ದುಬಾರಿಯಾಗಿತ್ತು. ಕಳೆದ ತಿಂಗಳು 18 ದಿನಗಳಲ್ಲಿ ಪೆಟ್ರೋಲ್ ಬೆಲೆ 8.50 ರೂ ಏರಿಕೆಯಾದರೆ, ಡೀಸೆಲ್ 10.48 ರೂ ಬೆಲೆ ಹೆಚ್ಚಳ ಕಂಡಿತ್ತು. ಇದರಿಂದ ಹಲವು ಕಡೆಗಳಿಂದ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಸೇರಲಾಗಿದ್ದ ಸಂಪುಟ ಸಭೆಯಲ್ಲಿ ಡೀಸೆಲ್ ಮೇಲಿನ ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಯನ್ನು ಇಳಿಕೆ ಮಾಡುವ ನಿರ್ಧಾರಕ್ಕೆ ಬರಲಾಗಿದೆ.
ಡೀಸೆಲ್ ಮತ್ತು ಪೆಟ್ರೋಲ್ಗೆ ಕೇಂದ್ರ ಸರ್ಕಾರ ಈಗ ಸರಿಸುಮಾರು ಒಂದೇ ಮೊತ್ತದ ತೆರಿಗೆ ವಿಧಿಸುತ್ತದೆ. ಪೆಟ್ರೋಲ್ ಮೇಲೆ ಕೇಂದ್ರ ಸುಂಕ 32.98 ರೂ ಇದೆ. ಡೀಸೆಲ್ ಮೇಲೆ 31.83 ಇದೆ. ರಾಜ್ಯ ಸರ್ಕಾರಗಳೂ ಕೂಡ ವ್ಯಾಟ್ನಂಥ ತೆರಿಗೆಯನ್ನು ಹೆಚ್ಚುವರಿಯಾಗಿ ವಿಧಿಸುತ್ತವೆ. ಹೀಗಾಗಿ, ರಾಜ್ಯದಿಂದ ರಾಜ್ಯಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ವ್ಯತ್ಯಾಸ ಇರುತ್ತದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
ಕೆಎಫ್ ಸಿ ಬಳಿಕ ಮಂಗಳೂರಿನಲ್ಲಿ ಎಂಎಫ್ ಸಿ ರೆಸ್ಟೋರೆಂ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm