ಬ್ರೇಕಿಂಗ್ ನ್ಯೂಸ್
13-09-20 09:28 am Headline Karnataka News Network ದೇಶ - ವಿದೇಶ
ಮಂಗಳೂರು, ಸೆಪ್ಟೆಂಬರ್.13: ಲಾಕ್ ಡೌನ್ ನಿಂದಾಗಿ ಸ್ಥಗಿತಗೊಂಡಿದ್ದ ದಕ್ಷಿಣ ಕನ್ನಡ ಹಾಗು ಕಾಸರಗೋಡು ಬಸ್ ಸಂಚಾರಕ್ಕೆ ಈಗ ಮತ್ತೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಕಳೆದ ಸುಮಾರು ಆರು ತಿಂಗಳ ಬಳಿಕ ಕಾಸರಗೋಡು - ಮಂಗಳೂರು ನಡುವೆ ಅಂತಾರಾಜ್ಯ ಬಸ್ ಸಂಚಾರವನ್ನು ಸೆ.21ರಿಂದ ಆರಂಭಿಸಲು ಕಾಸರಗೋಡು ಜಿಲ್ಲಾಡಳಿತ ನಿರ್ಧರಿಸಿದೆ.
ಅಂತಾರಾಜ್ಯ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದ್ದು, ಎರಡೂ ಜಿಲ್ಲೆಯ ಜನತೆ ನಿಟ್ಟುಸಿರು ಬಿಡುವಂತಾಗಿದೆ.
ಕೇರಳದಿಂದ ಮಂಗಳೂರಿಗೆ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದು ಕಾಸರಗೋಡು ಜಿಲ್ಲಾಡಳಿತ. ಆದರೆ ಇತ್ತ ಕರ್ನಾಟಕ ಕೆ ಎಸ್ ಆರ್ ಟಿ ಸಿ ಈ ಬಗ್ಗೆ ಇನ್ನೂ ನಿರ್ಧಾರ ಪ್ರಕಟಿಸಿಲ್ಲ. ಇನ್ನೂ ಹತ್ತು ದಿನಗಳ ಕಾಲಾವಕಾಶ ಇರುವುದರಿಂದ ಸಂಚಾರಕ್ಕೆ ಅನುಮತಿ ಸಿಗುವ ಸಾಧ್ಯತೆಯೂ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಮಂಗಳೂರಿನಿಂದ ಕಾಸರಗೋಡಿಗೆ ಬಸ್ ಸಂಚಾರ ಆರಂಭಿಸಲು ಇನ್ನೂ ಅನುಮತಿ ಸಿಕ್ಕಿಲ್ಲ. ಈ ಬಗ್ಗೆ ಸೋಮವಾರ ಮೇಲಧಿಕಾರಿಗಳ ಬಳಿ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಕೆ ಎಸ್ ಆರ್ ಟಿ ಸಿ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.
ಸೆ.21ರಂದು ಸಂಚಾರ ಆರಂಭಿಸಲಿರುವ ಕೇರಳ ಬಸ್ನಲ್ಲಿ ತಲಾ 40 ಪ್ರಯಾಣಿಕರಿಗೆ ಮಾತ್ರ ಸಂಚಾರಕ್ಕೆ ಅವಕಾಶ ಸಿಗಲಿದೆ. ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಈ ಬಸ್ಗಳು ಸಂಚರಿಸಲಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಮೊದಲ ಹಂತದಲ್ಲಿ ಕಾಸರಗೋಡು - ಮಂಗಳೂರು, ಕಾಸರಗೋಡು - ಪಂಜಿಕಲ್ಲು ರೂಟ್ನಲ್ಲಿ ಮಾತ್ರವೇ ಬಸ್ ಸಂಚಾರ ನಡೆಸಲಿವೆ. ಬಸ್ ಸಂಚಾರದ ಆದೇಶ ಮತ್ತು ಮಾರ್ಗಸೂಚಿಯನ್ನು ಇನ್ನಷ್ಟೇ ಕೇರಳ ಸರಕಾರ ಬಿಡುಗಡೆಗೊಳಿಸಬೇಕಿದೆ.
ಲಾಕ್ಡೌನ್ ಅವಧಿಯಲ್ಲಿ ಉಭಯ ಜಿಲ್ಲೆಗಳು ತಮ್ಮ ಗಡಿಗಳನ್ನು ಬಂದ್ಗೊಳಿಸಿದ್ದವು. ಈ ನಡುವೆ ಎರಡೂ ಜಿಲ್ಲಾಡಳಿತಗಳ ನಡುವೆ ಸಂವಹನ ಕೊರತೆಯಿಂದ ಅನೇಕ ನಿರ್ಧಾರಗಳಲ್ಲಿ ವ್ಯತಿರಿಕ್ತತೆ ಕಂಡುಬಂದಿತ್ತು. ಇತ್ತೀಚೆಗೆ ನಾಲ್ಕು ಗಡಿ ರಸ್ತೆಗಳನ್ನು ತೆರವುಗೊಳಿಸುವಂತೆ ಕೇರಳ ಹೈಕೋರ್ಟ್ ನಿರ್ದೇಶನ ನೀಡಿದ ಬಳಿಕ ಸಂಚಾರ ಸ್ವಲ್ಪ ಮಟ್ಟಿಗೆ ಮುಕ್ತವಾಗಿದೆ. ಆದರೆ ಕೆ ಎಸ್ ಆರ್ ಟಿ ಸಿ ಮಾತ್ರ ಸಂಚಾರ ಆರಂಭಿಸಿರಲಿಲ್ಲ
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm