ಬ್ರೇಕಿಂಗ್ ನ್ಯೂಸ್
13-09-20 09:28 am Headline Karnataka News Network ದೇಶ - ವಿದೇಶ
ಮಂಗಳೂರು, ಸೆಪ್ಟೆಂಬರ್.13: ಲಾಕ್ ಡೌನ್ ನಿಂದಾಗಿ ಸ್ಥಗಿತಗೊಂಡಿದ್ದ ದಕ್ಷಿಣ ಕನ್ನಡ ಹಾಗು ಕಾಸರಗೋಡು ಬಸ್ ಸಂಚಾರಕ್ಕೆ ಈಗ ಮತ್ತೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಕಳೆದ ಸುಮಾರು ಆರು ತಿಂಗಳ ಬಳಿಕ ಕಾಸರಗೋಡು - ಮಂಗಳೂರು ನಡುವೆ ಅಂತಾರಾಜ್ಯ ಬಸ್ ಸಂಚಾರವನ್ನು ಸೆ.21ರಿಂದ ಆರಂಭಿಸಲು ಕಾಸರಗೋಡು ಜಿಲ್ಲಾಡಳಿತ ನಿರ್ಧರಿಸಿದೆ.
ಅಂತಾರಾಜ್ಯ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದ್ದು, ಎರಡೂ ಜಿಲ್ಲೆಯ ಜನತೆ ನಿಟ್ಟುಸಿರು ಬಿಡುವಂತಾಗಿದೆ.
ಕೇರಳದಿಂದ ಮಂಗಳೂರಿಗೆ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದು ಕಾಸರಗೋಡು ಜಿಲ್ಲಾಡಳಿತ. ಆದರೆ ಇತ್ತ ಕರ್ನಾಟಕ ಕೆ ಎಸ್ ಆರ್ ಟಿ ಸಿ ಈ ಬಗ್ಗೆ ಇನ್ನೂ ನಿರ್ಧಾರ ಪ್ರಕಟಿಸಿಲ್ಲ. ಇನ್ನೂ ಹತ್ತು ದಿನಗಳ ಕಾಲಾವಕಾಶ ಇರುವುದರಿಂದ ಸಂಚಾರಕ್ಕೆ ಅನುಮತಿ ಸಿಗುವ ಸಾಧ್ಯತೆಯೂ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಮಂಗಳೂರಿನಿಂದ ಕಾಸರಗೋಡಿಗೆ ಬಸ್ ಸಂಚಾರ ಆರಂಭಿಸಲು ಇನ್ನೂ ಅನುಮತಿ ಸಿಕ್ಕಿಲ್ಲ. ಈ ಬಗ್ಗೆ ಸೋಮವಾರ ಮೇಲಧಿಕಾರಿಗಳ ಬಳಿ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಕೆ ಎಸ್ ಆರ್ ಟಿ ಸಿ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.
ಸೆ.21ರಂದು ಸಂಚಾರ ಆರಂಭಿಸಲಿರುವ ಕೇರಳ ಬಸ್ನಲ್ಲಿ ತಲಾ 40 ಪ್ರಯಾಣಿಕರಿಗೆ ಮಾತ್ರ ಸಂಚಾರಕ್ಕೆ ಅವಕಾಶ ಸಿಗಲಿದೆ. ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಈ ಬಸ್ಗಳು ಸಂಚರಿಸಲಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಮೊದಲ ಹಂತದಲ್ಲಿ ಕಾಸರಗೋಡು - ಮಂಗಳೂರು, ಕಾಸರಗೋಡು - ಪಂಜಿಕಲ್ಲು ರೂಟ್ನಲ್ಲಿ ಮಾತ್ರವೇ ಬಸ್ ಸಂಚಾರ ನಡೆಸಲಿವೆ. ಬಸ್ ಸಂಚಾರದ ಆದೇಶ ಮತ್ತು ಮಾರ್ಗಸೂಚಿಯನ್ನು ಇನ್ನಷ್ಟೇ ಕೇರಳ ಸರಕಾರ ಬಿಡುಗಡೆಗೊಳಿಸಬೇಕಿದೆ.
ಲಾಕ್ಡೌನ್ ಅವಧಿಯಲ್ಲಿ ಉಭಯ ಜಿಲ್ಲೆಗಳು ತಮ್ಮ ಗಡಿಗಳನ್ನು ಬಂದ್ಗೊಳಿಸಿದ್ದವು. ಈ ನಡುವೆ ಎರಡೂ ಜಿಲ್ಲಾಡಳಿತಗಳ ನಡುವೆ ಸಂವಹನ ಕೊರತೆಯಿಂದ ಅನೇಕ ನಿರ್ಧಾರಗಳಲ್ಲಿ ವ್ಯತಿರಿಕ್ತತೆ ಕಂಡುಬಂದಿತ್ತು. ಇತ್ತೀಚೆಗೆ ನಾಲ್ಕು ಗಡಿ ರಸ್ತೆಗಳನ್ನು ತೆರವುಗೊಳಿಸುವಂತೆ ಕೇರಳ ಹೈಕೋರ್ಟ್ ನಿರ್ದೇಶನ ನೀಡಿದ ಬಳಿಕ ಸಂಚಾರ ಸ್ವಲ್ಪ ಮಟ್ಟಿಗೆ ಮುಕ್ತವಾಗಿದೆ. ಆದರೆ ಕೆ ಎಸ್ ಆರ್ ಟಿ ಸಿ ಮಾತ್ರ ಸಂಚಾರ ಆರಂಭಿಸಿರಲಿಲ್ಲ
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm