ಬ್ರೇಕಿಂಗ್ ನ್ಯೂಸ್
13-09-20 09:28 am Headline Karnataka News Network ದೇಶ - ವಿದೇಶ
ಮಂಗಳೂರು, ಸೆಪ್ಟೆಂಬರ್.13: ಲಾಕ್ ಡೌನ್ ನಿಂದಾಗಿ ಸ್ಥಗಿತಗೊಂಡಿದ್ದ ದಕ್ಷಿಣ ಕನ್ನಡ ಹಾಗು ಕಾಸರಗೋಡು ಬಸ್ ಸಂಚಾರಕ್ಕೆ ಈಗ ಮತ್ತೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಕಳೆದ ಸುಮಾರು ಆರು ತಿಂಗಳ ಬಳಿಕ ಕಾಸರಗೋಡು - ಮಂಗಳೂರು ನಡುವೆ ಅಂತಾರಾಜ್ಯ ಬಸ್ ಸಂಚಾರವನ್ನು ಸೆ.21ರಿಂದ ಆರಂಭಿಸಲು ಕಾಸರಗೋಡು ಜಿಲ್ಲಾಡಳಿತ ನಿರ್ಧರಿಸಿದೆ.
ಅಂತಾರಾಜ್ಯ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದ್ದು, ಎರಡೂ ಜಿಲ್ಲೆಯ ಜನತೆ ನಿಟ್ಟುಸಿರು ಬಿಡುವಂತಾಗಿದೆ.
ಕೇರಳದಿಂದ ಮಂಗಳೂರಿಗೆ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದು ಕಾಸರಗೋಡು ಜಿಲ್ಲಾಡಳಿತ. ಆದರೆ ಇತ್ತ ಕರ್ನಾಟಕ ಕೆ ಎಸ್ ಆರ್ ಟಿ ಸಿ ಈ ಬಗ್ಗೆ ಇನ್ನೂ ನಿರ್ಧಾರ ಪ್ರಕಟಿಸಿಲ್ಲ. ಇನ್ನೂ ಹತ್ತು ದಿನಗಳ ಕಾಲಾವಕಾಶ ಇರುವುದರಿಂದ ಸಂಚಾರಕ್ಕೆ ಅನುಮತಿ ಸಿಗುವ ಸಾಧ್ಯತೆಯೂ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಮಂಗಳೂರಿನಿಂದ ಕಾಸರಗೋಡಿಗೆ ಬಸ್ ಸಂಚಾರ ಆರಂಭಿಸಲು ಇನ್ನೂ ಅನುಮತಿ ಸಿಕ್ಕಿಲ್ಲ. ಈ ಬಗ್ಗೆ ಸೋಮವಾರ ಮೇಲಧಿಕಾರಿಗಳ ಬಳಿ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಕೆ ಎಸ್ ಆರ್ ಟಿ ಸಿ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.
ಸೆ.21ರಂದು ಸಂಚಾರ ಆರಂಭಿಸಲಿರುವ ಕೇರಳ ಬಸ್ನಲ್ಲಿ ತಲಾ 40 ಪ್ರಯಾಣಿಕರಿಗೆ ಮಾತ್ರ ಸಂಚಾರಕ್ಕೆ ಅವಕಾಶ ಸಿಗಲಿದೆ. ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಈ ಬಸ್ಗಳು ಸಂಚರಿಸಲಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಮೊದಲ ಹಂತದಲ್ಲಿ ಕಾಸರಗೋಡು - ಮಂಗಳೂರು, ಕಾಸರಗೋಡು - ಪಂಜಿಕಲ್ಲು ರೂಟ್ನಲ್ಲಿ ಮಾತ್ರವೇ ಬಸ್ ಸಂಚಾರ ನಡೆಸಲಿವೆ. ಬಸ್ ಸಂಚಾರದ ಆದೇಶ ಮತ್ತು ಮಾರ್ಗಸೂಚಿಯನ್ನು ಇನ್ನಷ್ಟೇ ಕೇರಳ ಸರಕಾರ ಬಿಡುಗಡೆಗೊಳಿಸಬೇಕಿದೆ.
ಲಾಕ್ಡೌನ್ ಅವಧಿಯಲ್ಲಿ ಉಭಯ ಜಿಲ್ಲೆಗಳು ತಮ್ಮ ಗಡಿಗಳನ್ನು ಬಂದ್ಗೊಳಿಸಿದ್ದವು. ಈ ನಡುವೆ ಎರಡೂ ಜಿಲ್ಲಾಡಳಿತಗಳ ನಡುವೆ ಸಂವಹನ ಕೊರತೆಯಿಂದ ಅನೇಕ ನಿರ್ಧಾರಗಳಲ್ಲಿ ವ್ಯತಿರಿಕ್ತತೆ ಕಂಡುಬಂದಿತ್ತು. ಇತ್ತೀಚೆಗೆ ನಾಲ್ಕು ಗಡಿ ರಸ್ತೆಗಳನ್ನು ತೆರವುಗೊಳಿಸುವಂತೆ ಕೇರಳ ಹೈಕೋರ್ಟ್ ನಿರ್ದೇಶನ ನೀಡಿದ ಬಳಿಕ ಸಂಚಾರ ಸ್ವಲ್ಪ ಮಟ್ಟಿಗೆ ಮುಕ್ತವಾಗಿದೆ. ಆದರೆ ಕೆ ಎಸ್ ಆರ್ ಟಿ ಸಿ ಮಾತ್ರ ಸಂಚಾರ ಆರಂಭಿಸಿರಲಿಲ್ಲ
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am