ಬ್ರೇಕಿಂಗ್ ನ್ಯೂಸ್
13-09-20 02:24 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 13: ಬಿಹಾರದಲ್ಲಿ ಆರ್ ಜೆಡಿ ಪಕ್ಷ ತ್ಯಜಿಸುವುದಾಗಿ ಹೇಳಿದ್ದ ಲಾಲೂ ಪ್ರಸಾದ್ ಯಾದವ್ ಅವರ ಒಂದು ಕಾಲದ ಪರಮಾಪ್ತ ರಘುವಂಶ ಪ್ರಸಾದ್ ಸಿಂಗ್ ಎರಡೇ ದಿನಗಳ ಅಂತರದಲ್ಲಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಕೊರೊನಾ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ಸೇರಿಸಲಾಗಿತ್ತು. 74 ವರ್ಷವಾಗಿದ್ದ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ವಾರದ ಹಿಂದಷ್ಟೆ ರಘುವಂಶ ಪ್ರಸಾದ್, ತಮ್ಮ ಸುದೀರ್ಘ ಕಾಲದ ಒಡನಾಡಿ ಲಾಲೂ ಯಾದವರ ಆರ್ ಜೆಡಿ ಪಕ್ಷ ತೊರೆಯುವ ಬಗ್ಗೆ ಪ್ರಕಟಿಸಿದ್ದರು. ಈ ಬಗ್ಗೆ ಪಕ್ಷದ ವರಿಷ್ಠರಿಗೆ ಪತ್ರ ಬರೆದು ಆಘಾತ ಮೂಡಿಸಿದ್ದರು. ಆದರೆ, ಈಗ ಪಕ್ಷ ರಾಜಕಾರಣದ ಜೊತೆಗೆ ದಿಢೀರ್ ಆಗಿ ಲೋಕವನ್ನೇ ತೊರೆದು ಹೋಗಿದ್ದಾರೆ. ಕಳೆದ 32 ವರ್ಷಗಳಿಂದ ಲಾಲೂ ಪ್ರಸಾದ್ ಯಾದವರ ಆಪ್ತ ಬಳಗದಲ್ಲಿ ಗುರುತಿಸಿದ್ದ ರಘುವಂಶ ಪ್ರಸಾದ್, ಪಕ್ಷ ತೊರೆದಿದ್ದು ಬಿಹಾರ ರಾಜಕೀಯದಲ್ಲಿ ಸಂಚಲನ ಮೂಡಿಸಿತ್ತು. ರಘುವಂಶ್ ನಿಧನದಿಂದಾಗಿ ಬಿಹಾರ ರಾಜಕೀಯದಲ್ಲಿ ಹಿರಿಯ ಕೊಂಡಿಯೊಂದು ಕಳಚಿದಂತಾಗಿದೆ.
ಆರ್ ಜೆಡಿ ಪಕ್ಷದಲ್ಲಿ ಲಾಲೂ ಪುತ್ರ ತೇಜಸ್ವಿ ಯಾದವ್ ಹಿಡಿತ ಸಾಧಿಸಿದ್ದನ್ನು ಸಹಿಸದ ರಘುವಂಶ ಪ್ರಸಾದ್, ಪಕ್ಷ ತೊರೆಯಲು ನಿರ್ಧರಿಸಿದ್ದಲ್ಲದೆ, ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಜೆಡಿಯು ಸೇರಲು ಬಯಸಿದ್ದರು. ವಾರದ ಹಿಂದಷ್ಟೇ ಲಾಲೂಗೆ ಬರೆದ ಪತ್ರದಲ್ಲಿ ಪಕ್ಷದ ಬಗೆಗಿನ ಅತೃಪ್ತಿಯನ್ನು ಹೊರಹಾಕಿದ್ದರು.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm