ಬ್ರೇಕಿಂಗ್ ನ್ಯೂಸ್
13-09-20 02:24 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 13: ಬಿಹಾರದಲ್ಲಿ ಆರ್ ಜೆಡಿ ಪಕ್ಷ ತ್ಯಜಿಸುವುದಾಗಿ ಹೇಳಿದ್ದ ಲಾಲೂ ಪ್ರಸಾದ್ ಯಾದವ್ ಅವರ ಒಂದು ಕಾಲದ ಪರಮಾಪ್ತ ರಘುವಂಶ ಪ್ರಸಾದ್ ಸಿಂಗ್ ಎರಡೇ ದಿನಗಳ ಅಂತರದಲ್ಲಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಕೊರೊನಾ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ಸೇರಿಸಲಾಗಿತ್ತು. 74 ವರ್ಷವಾಗಿದ್ದ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ವಾರದ ಹಿಂದಷ್ಟೆ ರಘುವಂಶ ಪ್ರಸಾದ್, ತಮ್ಮ ಸುದೀರ್ಘ ಕಾಲದ ಒಡನಾಡಿ ಲಾಲೂ ಯಾದವರ ಆರ್ ಜೆಡಿ ಪಕ್ಷ ತೊರೆಯುವ ಬಗ್ಗೆ ಪ್ರಕಟಿಸಿದ್ದರು. ಈ ಬಗ್ಗೆ ಪಕ್ಷದ ವರಿಷ್ಠರಿಗೆ ಪತ್ರ ಬರೆದು ಆಘಾತ ಮೂಡಿಸಿದ್ದರು. ಆದರೆ, ಈಗ ಪಕ್ಷ ರಾಜಕಾರಣದ ಜೊತೆಗೆ ದಿಢೀರ್ ಆಗಿ ಲೋಕವನ್ನೇ ತೊರೆದು ಹೋಗಿದ್ದಾರೆ. ಕಳೆದ 32 ವರ್ಷಗಳಿಂದ ಲಾಲೂ ಪ್ರಸಾದ್ ಯಾದವರ ಆಪ್ತ ಬಳಗದಲ್ಲಿ ಗುರುತಿಸಿದ್ದ ರಘುವಂಶ ಪ್ರಸಾದ್, ಪಕ್ಷ ತೊರೆದಿದ್ದು ಬಿಹಾರ ರಾಜಕೀಯದಲ್ಲಿ ಸಂಚಲನ ಮೂಡಿಸಿತ್ತು. ರಘುವಂಶ್ ನಿಧನದಿಂದಾಗಿ ಬಿಹಾರ ರಾಜಕೀಯದಲ್ಲಿ ಹಿರಿಯ ಕೊಂಡಿಯೊಂದು ಕಳಚಿದಂತಾಗಿದೆ.
ಆರ್ ಜೆಡಿ ಪಕ್ಷದಲ್ಲಿ ಲಾಲೂ ಪುತ್ರ ತೇಜಸ್ವಿ ಯಾದವ್ ಹಿಡಿತ ಸಾಧಿಸಿದ್ದನ್ನು ಸಹಿಸದ ರಘುವಂಶ ಪ್ರಸಾದ್, ಪಕ್ಷ ತೊರೆಯಲು ನಿರ್ಧರಿಸಿದ್ದಲ್ಲದೆ, ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಜೆಡಿಯು ಸೇರಲು ಬಯಸಿದ್ದರು. ವಾರದ ಹಿಂದಷ್ಟೇ ಲಾಲೂಗೆ ಬರೆದ ಪತ್ರದಲ್ಲಿ ಪಕ್ಷದ ಬಗೆಗಿನ ಅತೃಪ್ತಿಯನ್ನು ಹೊರಹಾಕಿದ್ದರು.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm