ಬ್ರೇಕಿಂಗ್ ನ್ಯೂಸ್
13-09-20 02:24 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 13: ಬಿಹಾರದಲ್ಲಿ ಆರ್ ಜೆಡಿ ಪಕ್ಷ ತ್ಯಜಿಸುವುದಾಗಿ ಹೇಳಿದ್ದ ಲಾಲೂ ಪ್ರಸಾದ್ ಯಾದವ್ ಅವರ ಒಂದು ಕಾಲದ ಪರಮಾಪ್ತ ರಘುವಂಶ ಪ್ರಸಾದ್ ಸಿಂಗ್ ಎರಡೇ ದಿನಗಳ ಅಂತರದಲ್ಲಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಕೊರೊನಾ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ಸೇರಿಸಲಾಗಿತ್ತು. 74 ವರ್ಷವಾಗಿದ್ದ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ವಾರದ ಹಿಂದಷ್ಟೆ ರಘುವಂಶ ಪ್ರಸಾದ್, ತಮ್ಮ ಸುದೀರ್ಘ ಕಾಲದ ಒಡನಾಡಿ ಲಾಲೂ ಯಾದವರ ಆರ್ ಜೆಡಿ ಪಕ್ಷ ತೊರೆಯುವ ಬಗ್ಗೆ ಪ್ರಕಟಿಸಿದ್ದರು. ಈ ಬಗ್ಗೆ ಪಕ್ಷದ ವರಿಷ್ಠರಿಗೆ ಪತ್ರ ಬರೆದು ಆಘಾತ ಮೂಡಿಸಿದ್ದರು. ಆದರೆ, ಈಗ ಪಕ್ಷ ರಾಜಕಾರಣದ ಜೊತೆಗೆ ದಿಢೀರ್ ಆಗಿ ಲೋಕವನ್ನೇ ತೊರೆದು ಹೋಗಿದ್ದಾರೆ. ಕಳೆದ 32 ವರ್ಷಗಳಿಂದ ಲಾಲೂ ಪ್ರಸಾದ್ ಯಾದವರ ಆಪ್ತ ಬಳಗದಲ್ಲಿ ಗುರುತಿಸಿದ್ದ ರಘುವಂಶ ಪ್ರಸಾದ್, ಪಕ್ಷ ತೊರೆದಿದ್ದು ಬಿಹಾರ ರಾಜಕೀಯದಲ್ಲಿ ಸಂಚಲನ ಮೂಡಿಸಿತ್ತು. ರಘುವಂಶ್ ನಿಧನದಿಂದಾಗಿ ಬಿಹಾರ ರಾಜಕೀಯದಲ್ಲಿ ಹಿರಿಯ ಕೊಂಡಿಯೊಂದು ಕಳಚಿದಂತಾಗಿದೆ.
ಆರ್ ಜೆಡಿ ಪಕ್ಷದಲ್ಲಿ ಲಾಲೂ ಪುತ್ರ ತೇಜಸ್ವಿ ಯಾದವ್ ಹಿಡಿತ ಸಾಧಿಸಿದ್ದನ್ನು ಸಹಿಸದ ರಘುವಂಶ ಪ್ರಸಾದ್, ಪಕ್ಷ ತೊರೆಯಲು ನಿರ್ಧರಿಸಿದ್ದಲ್ಲದೆ, ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಜೆಡಿಯು ಸೇರಲು ಬಯಸಿದ್ದರು. ವಾರದ ಹಿಂದಷ್ಟೇ ಲಾಲೂಗೆ ಬರೆದ ಪತ್ರದಲ್ಲಿ ಪಕ್ಷದ ಬಗೆಗಿನ ಅತೃಪ್ತಿಯನ್ನು ಹೊರಹಾಕಿದ್ದರು.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm