ಬ್ರೇಕಿಂಗ್ ನ್ಯೂಸ್
13-09-20 02:24 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 13: ಬಿಹಾರದಲ್ಲಿ ಆರ್ ಜೆಡಿ ಪಕ್ಷ ತ್ಯಜಿಸುವುದಾಗಿ ಹೇಳಿದ್ದ ಲಾಲೂ ಪ್ರಸಾದ್ ಯಾದವ್ ಅವರ ಒಂದು ಕಾಲದ ಪರಮಾಪ್ತ ರಘುವಂಶ ಪ್ರಸಾದ್ ಸಿಂಗ್ ಎರಡೇ ದಿನಗಳ ಅಂತರದಲ್ಲಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಕೊರೊನಾ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ಸೇರಿಸಲಾಗಿತ್ತು. 74 ವರ್ಷವಾಗಿದ್ದ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ವಾರದ ಹಿಂದಷ್ಟೆ ರಘುವಂಶ ಪ್ರಸಾದ್, ತಮ್ಮ ಸುದೀರ್ಘ ಕಾಲದ ಒಡನಾಡಿ ಲಾಲೂ ಯಾದವರ ಆರ್ ಜೆಡಿ ಪಕ್ಷ ತೊರೆಯುವ ಬಗ್ಗೆ ಪ್ರಕಟಿಸಿದ್ದರು. ಈ ಬಗ್ಗೆ ಪಕ್ಷದ ವರಿಷ್ಠರಿಗೆ ಪತ್ರ ಬರೆದು ಆಘಾತ ಮೂಡಿಸಿದ್ದರು. ಆದರೆ, ಈಗ ಪಕ್ಷ ರಾಜಕಾರಣದ ಜೊತೆಗೆ ದಿಢೀರ್ ಆಗಿ ಲೋಕವನ್ನೇ ತೊರೆದು ಹೋಗಿದ್ದಾರೆ. ಕಳೆದ 32 ವರ್ಷಗಳಿಂದ ಲಾಲೂ ಪ್ರಸಾದ್ ಯಾದವರ ಆಪ್ತ ಬಳಗದಲ್ಲಿ ಗುರುತಿಸಿದ್ದ ರಘುವಂಶ ಪ್ರಸಾದ್, ಪಕ್ಷ ತೊರೆದಿದ್ದು ಬಿಹಾರ ರಾಜಕೀಯದಲ್ಲಿ ಸಂಚಲನ ಮೂಡಿಸಿತ್ತು. ರಘುವಂಶ್ ನಿಧನದಿಂದಾಗಿ ಬಿಹಾರ ರಾಜಕೀಯದಲ್ಲಿ ಹಿರಿಯ ಕೊಂಡಿಯೊಂದು ಕಳಚಿದಂತಾಗಿದೆ.
ಆರ್ ಜೆಡಿ ಪಕ್ಷದಲ್ಲಿ ಲಾಲೂ ಪುತ್ರ ತೇಜಸ್ವಿ ಯಾದವ್ ಹಿಡಿತ ಸಾಧಿಸಿದ್ದನ್ನು ಸಹಿಸದ ರಘುವಂಶ ಪ್ರಸಾದ್, ಪಕ್ಷ ತೊರೆಯಲು ನಿರ್ಧರಿಸಿದ್ದಲ್ಲದೆ, ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಜೆಡಿಯು ಸೇರಲು ಬಯಸಿದ್ದರು. ವಾರದ ಹಿಂದಷ್ಟೇ ಲಾಲೂಗೆ ಬರೆದ ಪತ್ರದಲ್ಲಿ ಪಕ್ಷದ ಬಗೆಗಿನ ಅತೃಪ್ತಿಯನ್ನು ಹೊರಹಾಕಿದ್ದರು.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
02-08-25 10:04 pm
Giridhar Shettt, Mangaluru
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm