ಬ್ರೇಕಿಂಗ್ ನ್ಯೂಸ್
29-11-21 02:12 pm HK Desk news ದೇಶ - ವಿದೇಶ
ನವದೆಹಲಿ, ನ.29: ವಿಪಕ್ಷ ಕಾಂಗ್ರೆಸ್ ಮತ್ತಿತರ ಪಕ್ಷಗಳ ಸಂಸದರ ಗದ್ದಲದ ನಡುವೆಯೇ ಲೋಕಸಭೆಯಲ್ಲಿ ಮೂರು ವಿವಾದಿತ ಕೃಷಿ ಮಸೂದೆಗಳನ್ನು ಬಿಜೆಪಿ ಸರಕಾರ ಅಧಿಕೃತವಾಗಿ ಹಿಂಪಡೆದುಕೊಂಡಿದೆ. ಕಾಂಗ್ರೆಸ್ ನಾಯಕರು ಕೃಷಿ ಮಸೂದೆ ಹಿಂತೆಗೆತದ ಬಗ್ಗೆ ಚರ್ಚೆಗೆ ಅವಕಾಶ ಕೊಡಬೇಕೆಂದು ಆಗ್ರಹಿಸಿ, ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.


ಆದರೆ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಕೃಷಿ ಮಸೂದೆಗಳನ್ನು ಹಿಂಪಡೆಯುವ ಬಗ್ಗೆ ಸದನಕ್ಕೆ ಓದಿ ಹೇಳಿದ್ದಾರೆ. ಈ ವೇಳೆಯಲ್ಲಿ ಕಾಂಗ್ರೆಸ್ ನಾಯಕರು ಸದನದ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಬಗ್ಗೆ ಚರ್ಚೆಗೆ ಅವಕಾಶ ಕೊಡಬೇಕೆಂದು ಕೇಳಿ ಗದ್ದಲ ಎಬ್ಬಿಸಿದ್ದಾರೆ. ಅಲ್ಲದೆ, ಧಿಕ್ಕಾರ, ಬೊಬ್ಬೆ ಹಾಕುತ್ತಲೇ ಸ್ಪೀಕರ್ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ಇದರ ನಡುವೆಯೇ, ಬಿಜೆಪಿ ಸಂಸದರು ಧ್ವನಿಮತದ ಮೂಲಕ ಮಸೂದೆಯನ್ನು ಹಿಂಪಡೆಯುವ ಬಗ್ಗೆ ಒಪ್ಪಿಗೆ ಸೂಚಿಸಿದ್ದು, ಸದನದ ಒಪ್ಪಿಗೆ ಪಡೆದಿದ್ದಾರೆ. ಸ್ಪೀಕರ್ ಓಂ ಬಿರ್ಲಾ ಅವರು, ಕಾಂಗ್ರೆಸ್ ನಾಯಕರು ಶಾಂತಿಯಿಂದ ವರ್ತಿಸಿದರೆ ಚರ್ಚೆಗೆ ಅವಕಾಶ ನೀಡುವುದಾಗಿ ಹೇಳಿದ್ದಾರೆ. ಕೇಂದ್ರ ಸರಕಾರ ಜಾರಿಗೆ ತಂದಿದ್ದ ಮೂರು ಕೃಷಿ ಮಸೂದೆಗಳ ವಿರುದ್ಧ ಒಂದು ವರ್ಷದ ಪರ್ಯಂತ ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆದಿತ್ತು.
ನವೆಂಬರ್ ಆರಂಭದಲ್ಲಿ ಪ್ರಧಾನಿ ಮೋದಿ ದಿಢೀರ್ ಆಗಿ ಕೃಷಿ ಮಸೂದೆಗಳನ್ನು ವಾಪಸ್ ಪಡೆಯುವುದಾಗಿ ಹೇಳಿದ್ದರು. ಇದೇ ಚಳಿಗಾಲದ ಅಧಿವೇಶನದಲ್ಲಿ ಅಧಿಕೃತವಾಗಿ ಮಸೂದೆ ಹಿಂಪಡೆಯುವುದಾಗಿ ಘೋಷಣೆ ಮಾಡಿದ್ದು ಭಾರೀ ಚರ್ಚೆಗೂ ಕಾರಣವಾಗಿತ್ತು. ಇದೀಗ ಚಳಿಗಾಲ ಅಧಿವೇಶನದ ಮೊದಲ ದಿನವೇ ಕೃಷಿ ಮಸೂದೆಗಳನ್ನು ಹಿಂಪಡೆದಿದ್ದು, ವಿಪಕ್ಷಗಳು ಮತ್ತು ಕೃಷಿಕರ ಪರ ಸಂಘಟನೆಗಳ ವಿರೋಧಕ್ಕೆ ಮಣೆ ಹಾಕಲಾಗಿದೆ.
The 25-day Winter Session of parliament, during which over 30 bills are expected to be passed, began today. A crucial bill to cancel farm laws was passed in Lok Sabha in the fastest repeal in recent years amid protests by the opposition.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am