ಬ್ರೇಕಿಂಗ್ ನ್ಯೂಸ್
02-12-21 04:17 pm HK Desk news ದೇಶ - ವಿದೇಶ
ಭೋಪಾಲ್, ಡಿ.2 : ಮಗಳ ಶಿಕ್ಷಣಕ್ಕೆಂದು ಕೈಸಾಲ ಪಡೆದು ಅದನ್ನು ತೀರಿಸಲು ಸಾಧ್ಯವಾಗದೇ ಕಿರುಕುಳ ಅನುಭವಿಸಿದ್ದರಿಂದ ಇಡೀ ಕುಟುಂಬವೇ ವಿಷ ಸೇವಿಸಿ ಸಾವಿಗೆ ಶರಣಾಗಿರುವ ದಾರುಣ ಘಟನೆ ಮಧ್ಯಪ್ರದೇಶದ ಭೋಪಾಲ್ನಲ್ಲಿ ನಡೆದಿದೆ.
ಮೃತಪಟ್ಟವರನ್ನು ಸಂಜೀವ್ ಜೋಷಿ (45), ಪತ್ನಿ ಅರ್ಚನಾ (44), ಸಂಜೀವ್ ಅವರ ತಾಯಿ ನಂದಿನಿ (67), ಮಕ್ಕಳಾದ ಗ್ರೀಷ್ಮಾ (19), ಪೂರ್ವಿ (16) ಎಂದು ಗುರುತಿಸಲಾಗಿದೆ.
ಸಂಜೀವ್ ಜೋಷಿ ಆಟೋಮೊಬೈಲ್ ಬಿಡಿ ಭಾಗಗಳ ಶಾಪ್ ಇಟ್ಟುಕೊಂಡಿದ್ದರು. ಇವರ ಪತ್ನಿ ಅರ್ಚನಾ ದಿನಸಿ ಅಂಗಡಿ ನಡೆಸುತ್ತಿದ್ದರು. ಅರ್ಚನಾ ಅವರು ಮಗಳ ಶಿಕ್ಷಣಕ್ಕಾಗಿ ಬಬ್ಲಿ ಎಂಬಾಕೆಯಿಂದ 3.70 ಲಕ್ಷ ರೂಪಾಯಿ ಕೈಸಾಲ ಪಡೆದಿದ್ದರು. ಅದನ್ನು ಮರು ಪಾವತಿಸಲು ಸಾಧ್ಯವಾಗದ್ದರಿಂದ ಬಬ್ಲಿ, ಆಕೆಯ ಮಗಳಾದ ರಾಣಿ, ಪರಿಮಳಾ ಹಾಗೂ ಆಕೆಯ ಸಹೋದರಿ ಉರ್ಮಿಳಾ ಮನೆಗೆ ಬಂದು ಕಿರುಕುಳ ನೀಡುತ್ತಿದ್ದರು ಎಂಬುದಾಗಿ ಸಾಯುವ ಮುನ್ನ ಸಂಜೀವ್ ಹೇಳಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ದಿನವೂ ಸಾರ್ವಜನಿಕವಾಗಿ ಅವಮಾನ ಎದುರಿಸುವ ಬದಲು ಸಾಯುವುದೇ ಮೇಲೆಂದು ನಿರ್ಧರಿಸಿ ವಿಷ ಸೇವಿಸಿದುದಾಗಿ ಅವರು ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿತ ಮಹಿಳೆಯರನ್ನು ಬಂಧಿಸಲಾಗಿದೆ.
ಹಾಗೂ ಹೀಗೂ ಮಾಡಿ 80 ಸಾವಿರ ರೂಪಾಯಿಗಳನ್ನು ಕಳೆದ ವಾರ ದಂಪತಿ ಬಬ್ಲಿಗೆ ನೀಡಿದ್ದರು. ಆದರೆ ಇದು ತಾನು ಕೊಟ್ಟಿರುವ ಹಣದ ಬಡ್ಡಿಯಷ್ಟೇ. ಅಸಲು ಸಂಪೂರ್ಣವಾಗಿ ನೀಡಬೇಕು ಎನ್ನುತ್ತಿದ್ದ ಬಬ್ಲಿ ಹಾಗೂ ಇತರರು, ಸಂಜೀವ್ ಅವರ ಮನೆಗೆ ಪದೇ ಪದೇ ಬಂದು ಹಿಂಸೆ ಕೊಡುತ್ತಿದ್ದರು. ಇದರಿಂದ ಬೇಸತ್ತ ಇಡೀ ಕುಟುಂಬ ಆತ್ಮಹತ್ಯೆಗೆ ನಿರ್ಧರಿಸಿ ವಿಷ ಸೇವಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.
In the 13-page suicide note left by the family, several people have been named. On 24 November, a family of five in Bhopal, Madhya Pradesh, made a suicide pact. Less than a week later, all five of them, and their three pets, were dead.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm