ಬ್ರೇಕಿಂಗ್ ನ್ಯೂಸ್
07-12-21 09:58 pm HK Desk news ದೇಶ - ವಿದೇಶ
ಲಖ್ನೋ, ಡಿ.7 : ಖುರಾನ್ ಬಗ್ಗೆ ಪ್ರಶ್ನೆ ಮಾಡಿ ಸುಪ್ರೀಂ ಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ದೂರು ದಾಖಲಿಸಿ ದೇಶದ ಗಮನ ಸೆಳೆದಿದ್ದ ಉತ್ತರ ಪ್ರದೇಶದ ಶಿಯಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಾಸಿಂ ರಿಜ್ವಿ ದಿಢೀರ್ ಬೆಳವಣಿಗೆಯಲ್ಲಿ ಇಸ್ಲಾಮನ್ನೇ ತೊರೆದು ಹಿಂದು ಧರ್ಮವನ್ನು ಸೇರಿದ್ದಾರೆ. ವಾಸಿಂ ರಿಜ್ವಿ ನಡೆ ಉತ್ತರ ಪ್ರದೇಶ ರಾಜಕೀಯ ವಲಯದಲ್ಲಿ ಭಾರಿ ಕೋಲಾಹಲವನ್ನೇ ಸೃಷ್ಟಿಸಿದೆ.
ಘಾಜಿಯಾಬಾದ್ನಲ್ಲಿರುವ ದಾಸ್ನಾ ದೇವಿ ದೇವಸ್ಥಾನದ ಮುಖ್ಯ ಅರ್ಚಕ ಸ್ವಾಮಿ ಯರಿ ನರ್ಸಿಂಗಾನಂದ ಅವರ ನೇತೃತ್ವದಲ್ಲಿ ರಿಜ್ವಿ ಅವರು ಹಿಂದೂ ಧರ್ಮವನ್ನು ಸ್ವೀಕರಿಸಿದ್ದಾರೆ. ಹಿಂದುವಾಗಿ ಮತಾಂತರಗೊಂಡ ನಂತರ ರಿಜ್ವಿ ಅವರ ಹೆಸರನ್ನು ಜಿತೇಂದ್ರ ನಾರಾಯಣ ಸಿಂಗ್ ತ್ಯಾಗಿ ಎಂದು ಮರು ನಾಮಕರಣ ಮಾಡಲಾಗಿದೆ.
ಮುಸ್ಲಿಂ ವ್ಯಕ್ತಿಯೊಬ್ಬರು ಹೀಗೆ ದಿಢೀರ್ ಆಗಿ ಹಿಂದುವಾಗಲು ಕಾರಣವಾಗಿದ್ದು ಖುರಾನ್ ಕೃತಿಯಲ್ಲಿರುವ ಕೆಲವು ಅಂಶಗಳ ವಿರುದ್ಧ ಸುಪ್ರೀಂಕೋರ್ಟ್ ಮೊರೆ ಹೋಗಿದ್ದು. ಖುರಾನಿನ ಕೆಲವು ಭಾಗಗಳು ಹಿಂಸಾಚಾರವನ್ನು ಬೋಧಿಸುತ್ತವೆ. ಹಾಗಾಗಿ ಅವುಗಳನ್ನು ಪುಸ್ತಕದಿಂದ ತೆಗೆದು ಹಾಕಬೇಕು ಎಂದು ಸುಪ್ರೀಂಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಆದರೆ ಅವರ ಅರ್ಜಿಯನ್ನು ಸುಪ್ರೀಂ ಕೋರ್ಟ್, ಆ ಬಗ್ಗೆ ನಾವು ನಿರ್ಧಾರಕ್ಕೆ ಬರಲು ಸಾಧ್ಯವಾಗಲ್ಲ ಎಂದು ಅರ್ಜಿಯನ್ನು ವಜಾ ಮಾಡಿತ್ತು.
ಇದಾದ ಮೇಲೆ ರಿಜ್ವಿ ಅವರಿಗೆ ಮುಸ್ಲಿಂ ಸಮುದಾಯದ ಕೆಲವು ಮೂಲಭೂತವಾದಿಗಳು ಬಹಿರಂಗ ಬೆದರಿಕೆ ಹಾಕಿದ್ದರು. ಇವರನ್ನು ಹತ್ಯೆ ಮಾಡಿದವರಿಗೆ 5 ಲಕ್ಷ ಬಹುಮಾನ ಘೋಷಿಸಿದ್ದು ವಿವಾದಕ್ಕೆ ಕಾರಣವಾಗಿತ್ತು. ನಂತರ ಈ ಮೊತ್ತವನ್ನು 10 ಲಕ್ಷ, 20 ಲಕ್ಷಕ್ಕೆ ಏರಿಸಿ ಕೊನೆಗೆ ಒಂದು ಕೋಟಿಗೆ ಏರಿಸಲಾಗಿತ್ತು. ಈ ರೀತಿಯ ಬೆಳವಣಿಗೆಯಿಂದ ನೊಂದ ರಿಜ್ವಿ, ಇಸ್ಲಾಂ ಧರ್ಮವೇ ಬೇಡ ಎಂದು ಹಿಂದು ಧರ್ಮವನ್ನು ಸೇರಿದ್ದಾರೆ.

ಉತ್ತರ ಪ್ರದೇಶದ ಚುನಾವಣೆ ಸನ್ನಿಹಿತವಾಗುತ್ತಿರುವ ಬೆನ್ನಲ್ಲೇ ವಕ್ಫ್ ಬೋರ್ಡ್ನ ಅಧ್ಯಕ್ಷರಾಗಿದ್ದ ವ್ಯಕ್ತಿ ಹಿಂದು ಧರ್ಮಕ್ಕೆ ಮತಾಂತರವಾಗಿರುವುದು ರಾಜಕೀಯ ವಲಯದಲ್ಲಿ ಭಾರಿ ಕೋಲಾಹಲವನ್ನೇ ಸೃಷ್ಟಿಸಿದೆ. ಈ ನಡುವೆ ರಿಜ್ವಿಯವರು ಸನಾತನ ಧರ್ಮಕ್ಕೆ ಮತಾಂತರಗೊಂಡಿರುವುದನ್ನು ಬಿಜೆಪಿ ಸ್ವಾಗತಿಸಿದೆ.
The former chairman of Uttar Pradesh Shia Waqf Board, Wasim Rizvi, converted to Hinduism (also known as Sanatan Dharma) on Monday. He offered milk on the Shiva Linga installed at Dasna Devi temple as part of the ritual.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm