ಬ್ರೇಕಿಂಗ್ ನ್ಯೂಸ್
07-12-21 09:58 pm HK Desk news ದೇಶ - ವಿದೇಶ
ಲಖ್ನೋ, ಡಿ.7 : ಖುರಾನ್ ಬಗ್ಗೆ ಪ್ರಶ್ನೆ ಮಾಡಿ ಸುಪ್ರೀಂ ಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ದೂರು ದಾಖಲಿಸಿ ದೇಶದ ಗಮನ ಸೆಳೆದಿದ್ದ ಉತ್ತರ ಪ್ರದೇಶದ ಶಿಯಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಾಸಿಂ ರಿಜ್ವಿ ದಿಢೀರ್ ಬೆಳವಣಿಗೆಯಲ್ಲಿ ಇಸ್ಲಾಮನ್ನೇ ತೊರೆದು ಹಿಂದು ಧರ್ಮವನ್ನು ಸೇರಿದ್ದಾರೆ. ವಾಸಿಂ ರಿಜ್ವಿ ನಡೆ ಉತ್ತರ ಪ್ರದೇಶ ರಾಜಕೀಯ ವಲಯದಲ್ಲಿ ಭಾರಿ ಕೋಲಾಹಲವನ್ನೇ ಸೃಷ್ಟಿಸಿದೆ.
ಘಾಜಿಯಾಬಾದ್ನಲ್ಲಿರುವ ದಾಸ್ನಾ ದೇವಿ ದೇವಸ್ಥಾನದ ಮುಖ್ಯ ಅರ್ಚಕ ಸ್ವಾಮಿ ಯರಿ ನರ್ಸಿಂಗಾನಂದ ಅವರ ನೇತೃತ್ವದಲ್ಲಿ ರಿಜ್ವಿ ಅವರು ಹಿಂದೂ ಧರ್ಮವನ್ನು ಸ್ವೀಕರಿಸಿದ್ದಾರೆ. ಹಿಂದುವಾಗಿ ಮತಾಂತರಗೊಂಡ ನಂತರ ರಿಜ್ವಿ ಅವರ ಹೆಸರನ್ನು ಜಿತೇಂದ್ರ ನಾರಾಯಣ ಸಿಂಗ್ ತ್ಯಾಗಿ ಎಂದು ಮರು ನಾಮಕರಣ ಮಾಡಲಾಗಿದೆ.
ಮುಸ್ಲಿಂ ವ್ಯಕ್ತಿಯೊಬ್ಬರು ಹೀಗೆ ದಿಢೀರ್ ಆಗಿ ಹಿಂದುವಾಗಲು ಕಾರಣವಾಗಿದ್ದು ಖುರಾನ್ ಕೃತಿಯಲ್ಲಿರುವ ಕೆಲವು ಅಂಶಗಳ ವಿರುದ್ಧ ಸುಪ್ರೀಂಕೋರ್ಟ್ ಮೊರೆ ಹೋಗಿದ್ದು. ಖುರಾನಿನ ಕೆಲವು ಭಾಗಗಳು ಹಿಂಸಾಚಾರವನ್ನು ಬೋಧಿಸುತ್ತವೆ. ಹಾಗಾಗಿ ಅವುಗಳನ್ನು ಪುಸ್ತಕದಿಂದ ತೆಗೆದು ಹಾಕಬೇಕು ಎಂದು ಸುಪ್ರೀಂಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಆದರೆ ಅವರ ಅರ್ಜಿಯನ್ನು ಸುಪ್ರೀಂ ಕೋರ್ಟ್, ಆ ಬಗ್ಗೆ ನಾವು ನಿರ್ಧಾರಕ್ಕೆ ಬರಲು ಸಾಧ್ಯವಾಗಲ್ಲ ಎಂದು ಅರ್ಜಿಯನ್ನು ವಜಾ ಮಾಡಿತ್ತು.
ಇದಾದ ಮೇಲೆ ರಿಜ್ವಿ ಅವರಿಗೆ ಮುಸ್ಲಿಂ ಸಮುದಾಯದ ಕೆಲವು ಮೂಲಭೂತವಾದಿಗಳು ಬಹಿರಂಗ ಬೆದರಿಕೆ ಹಾಕಿದ್ದರು. ಇವರನ್ನು ಹತ್ಯೆ ಮಾಡಿದವರಿಗೆ 5 ಲಕ್ಷ ಬಹುಮಾನ ಘೋಷಿಸಿದ್ದು ವಿವಾದಕ್ಕೆ ಕಾರಣವಾಗಿತ್ತು. ನಂತರ ಈ ಮೊತ್ತವನ್ನು 10 ಲಕ್ಷ, 20 ಲಕ್ಷಕ್ಕೆ ಏರಿಸಿ ಕೊನೆಗೆ ಒಂದು ಕೋಟಿಗೆ ಏರಿಸಲಾಗಿತ್ತು. ಈ ರೀತಿಯ ಬೆಳವಣಿಗೆಯಿಂದ ನೊಂದ ರಿಜ್ವಿ, ಇಸ್ಲಾಂ ಧರ್ಮವೇ ಬೇಡ ಎಂದು ಹಿಂದು ಧರ್ಮವನ್ನು ಸೇರಿದ್ದಾರೆ.
ಉತ್ತರ ಪ್ರದೇಶದ ಚುನಾವಣೆ ಸನ್ನಿಹಿತವಾಗುತ್ತಿರುವ ಬೆನ್ನಲ್ಲೇ ವಕ್ಫ್ ಬೋರ್ಡ್ನ ಅಧ್ಯಕ್ಷರಾಗಿದ್ದ ವ್ಯಕ್ತಿ ಹಿಂದು ಧರ್ಮಕ್ಕೆ ಮತಾಂತರವಾಗಿರುವುದು ರಾಜಕೀಯ ವಲಯದಲ್ಲಿ ಭಾರಿ ಕೋಲಾಹಲವನ್ನೇ ಸೃಷ್ಟಿಸಿದೆ. ಈ ನಡುವೆ ರಿಜ್ವಿಯವರು ಸನಾತನ ಧರ್ಮಕ್ಕೆ ಮತಾಂತರಗೊಂಡಿರುವುದನ್ನು ಬಿಜೆಪಿ ಸ್ವಾಗತಿಸಿದೆ.
The former chairman of Uttar Pradesh Shia Waqf Board, Wasim Rizvi, converted to Hinduism (also known as Sanatan Dharma) on Monday. He offered milk on the Shiva Linga installed at Dasna Devi temple as part of the ritual.
18-08-25 10:47 pm
Bangalore Correspondent
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
SIT, Dharmasthala Case, Pralhad Joshi: ಯಾರೋ ಅ...
18-08-25 01:25 pm
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
18-08-25 09:19 pm
HK News Desk
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am