ಬ್ರೇಕಿಂಗ್ ನ್ಯೂಸ್
14-09-20 01:51 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 14: ಸುಪ್ರೀಂ ಕೋರ್ಟ್ ವಿಧಿಸಿದ್ದ 1 ರೂ. ದಂಡವನ್ನು ವಕೀಲ, ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಭೂಷಣ್ ಅವರು ಸೋಮವಾರ ಪಾವತಿಸಿದರು.
'ದಂಡ ಪಾವತಿಸಿದ ಮಾತ್ರಕ್ಕೆ ಕೋರ್ಟ್ ಆದೇಶವನ್ನು ಒಪ್ಪಿದ್ದೇನು ಎಂದು ಅರ್ಥವಲ್ಲ' ಎಂದು ಪ್ರತಿಕ್ರಿಯಿಸಿದ್ದಾರೆ. ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಮರುಪರಿಶೀಲನೆಗೆ ಒಳಪಡಿಸಲು ಅರ್ಜಿ ಸಲ್ಲಿಸುತ್ತಿದ್ದೇನೆ ಎಂದು ಪ್ರಶಾಂತ್ ಭೂಷಣ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತ ತಿಳಿಸಿದ್ದಾರೆ.
ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಭೂಷಣ್ ಅವರನ್ನು ತಪ್ಪಿತಸ್ಥ ಎಂದು ಘೋಷಿಸಿದ್ದ ಸುಪ್ರೀಂ ಕೋರ್ಟ್, ಒಂದು ರೂಪಾಯಿ ದಂಡ ವಿಧಿಸಿತ್ತು. ಸೆ.15ರ ಒಳಗಾಗಿ ದಂಡ ಪಾವತಿಸುವಂತೆ ಸೂಚಿಸಿತ್ತು. ಒಂದು ರೂಪಾಯಿ ದಂಡ ವಿಧಿಸಿದ ನ್ಯಾಯಾಂಗ ನಿಂದನೆ ಕ್ರಿಮಿನಲ್ ಪ್ರಕರಣವನ್ನು ಬೇರೊಂದು ವಿಸ್ತೃತ ಪೀಠದಲ್ಲಿ ಪ್ರಶ್ನಿಸುವ ಅಧಿಕಾರ ನೀಡುವಂತೆ ಕೋರಿ ಶನಿವಾರ ಸುಪ್ರೀಂ ಕೋರ್ಟ್ಗೆ ಮನವಿ ಮಾಡಿದ್ದಾರೆ.
ಸುಪ್ರೀಂಕೋರ್ಟ್ ಹಾಗೂ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಕಚೇರಿಯ ಘನತೆಗೆ ಚ್ಯುತಿ ತರುವಂತಹ ಟ್ವೀಟ್ ಮಾಡಿದ್ದ ಪ್ರಕರಣದಲ್ಲಿ ಪ್ರಶಾಂತ್ ತಪ್ಪಿತಸ್ಥರು ಎಂದು ಆಗಸ್ಟ್ 14ರಂದು ಸುಪ್ರೀಂಕೋರ್ಟ್ ಆದೇಶಿಸಿತ್ತು. ಅವರು ಮಾಡಿದ್ದ ಎರಡು ಟ್ವೀಟ್ಗಳು ಕ್ರಿಮಿನಲ್ ನ್ಯಾಯಾಂಗ ನಿಂದನೆಗೆ ಸಮ ಎಂದು ಸುಪ್ರೀಂ ಕೋರ್ಟ್ನ ತ್ರಿಸದಸ್ಯ ಪೀಠವು ಹೇಳಿತ್ತು. ನ್ಯಾಯಾಂಗ ನಿಂದನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕ್ಷಮೆಯಾಚಿಸಲು ಪ್ರಶಾಂತ್ ಭೂಷಣ್ ನಿರಾಕರಿಸಿದ್ದರು. ಜೂನ್ 27 ಹಾಗೂ 29ರಂದು ಅವರು ಟ್ವೀಟ್ ಮಾಡಿದ್ದರು.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm