ಬ್ರೇಕಿಂಗ್ ನ್ಯೂಸ್
14-09-20 01:51 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 14: ಸುಪ್ರೀಂ ಕೋರ್ಟ್ ವಿಧಿಸಿದ್ದ 1 ರೂ. ದಂಡವನ್ನು ವಕೀಲ, ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಭೂಷಣ್ ಅವರು ಸೋಮವಾರ ಪಾವತಿಸಿದರು.
'ದಂಡ ಪಾವತಿಸಿದ ಮಾತ್ರಕ್ಕೆ ಕೋರ್ಟ್ ಆದೇಶವನ್ನು ಒಪ್ಪಿದ್ದೇನು ಎಂದು ಅರ್ಥವಲ್ಲ' ಎಂದು ಪ್ರತಿಕ್ರಿಯಿಸಿದ್ದಾರೆ. ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಮರುಪರಿಶೀಲನೆಗೆ ಒಳಪಡಿಸಲು ಅರ್ಜಿ ಸಲ್ಲಿಸುತ್ತಿದ್ದೇನೆ ಎಂದು ಪ್ರಶಾಂತ್ ಭೂಷಣ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತ ತಿಳಿಸಿದ್ದಾರೆ.
ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಭೂಷಣ್ ಅವರನ್ನು ತಪ್ಪಿತಸ್ಥ ಎಂದು ಘೋಷಿಸಿದ್ದ ಸುಪ್ರೀಂ ಕೋರ್ಟ್, ಒಂದು ರೂಪಾಯಿ ದಂಡ ವಿಧಿಸಿತ್ತು. ಸೆ.15ರ ಒಳಗಾಗಿ ದಂಡ ಪಾವತಿಸುವಂತೆ ಸೂಚಿಸಿತ್ತು. ಒಂದು ರೂಪಾಯಿ ದಂಡ ವಿಧಿಸಿದ ನ್ಯಾಯಾಂಗ ನಿಂದನೆ ಕ್ರಿಮಿನಲ್ ಪ್ರಕರಣವನ್ನು ಬೇರೊಂದು ವಿಸ್ತೃತ ಪೀಠದಲ್ಲಿ ಪ್ರಶ್ನಿಸುವ ಅಧಿಕಾರ ನೀಡುವಂತೆ ಕೋರಿ ಶನಿವಾರ ಸುಪ್ರೀಂ ಕೋರ್ಟ್ಗೆ ಮನವಿ ಮಾಡಿದ್ದಾರೆ.
ಸುಪ್ರೀಂಕೋರ್ಟ್ ಹಾಗೂ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಕಚೇರಿಯ ಘನತೆಗೆ ಚ್ಯುತಿ ತರುವಂತಹ ಟ್ವೀಟ್ ಮಾಡಿದ್ದ ಪ್ರಕರಣದಲ್ಲಿ ಪ್ರಶಾಂತ್ ತಪ್ಪಿತಸ್ಥರು ಎಂದು ಆಗಸ್ಟ್ 14ರಂದು ಸುಪ್ರೀಂಕೋರ್ಟ್ ಆದೇಶಿಸಿತ್ತು. ಅವರು ಮಾಡಿದ್ದ ಎರಡು ಟ್ವೀಟ್ಗಳು ಕ್ರಿಮಿನಲ್ ನ್ಯಾಯಾಂಗ ನಿಂದನೆಗೆ ಸಮ ಎಂದು ಸುಪ್ರೀಂ ಕೋರ್ಟ್ನ ತ್ರಿಸದಸ್ಯ ಪೀಠವು ಹೇಳಿತ್ತು. ನ್ಯಾಯಾಂಗ ನಿಂದನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕ್ಷಮೆಯಾಚಿಸಲು ಪ್ರಶಾಂತ್ ಭೂಷಣ್ ನಿರಾಕರಿಸಿದ್ದರು. ಜೂನ್ 27 ಹಾಗೂ 29ರಂದು ಅವರು ಟ್ವೀಟ್ ಮಾಡಿದ್ದರು.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm