ಬ್ರೇಕಿಂಗ್ ನ್ಯೂಸ್
09-12-21 12:07 pm HK Desk news ದೇಶ - ವಿದೇಶ
ಕಾರ್ಕಳ, ಡಿ.9 : ತಮಿಳುನಾಡಿನ ಊಟಿಯ ಬಳಿ ದುರಂತಕ್ಕೀಡಾದ ಹೆಲಿಕಾಪ್ಟರ್ ನಲ್ಲಿ ಮಡಿದ ಯೋಧರ ಪೈಕಿ ಕಾರ್ಕಳದ ಅಳಿಯನೊಬ್ಬ ಇದ್ದಾರೆ ಎನ್ನುವ ಮಾಹಿತಿಯೂ ಲಭ್ಯವಾಗಿದೆ. ದುರಂತದಲ್ಲಿ ಮರಣವನ್ನಪ್ಪಿದ ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್, ಕಾರ್ಕಳ ಮೂಲದ ಸೇನೆಯಲ್ಲಿ ಕರ್ತವ್ಯದಲ್ಲಿರುವ ಯುವತಿಯನ್ನು ಮದುವೆಯಾಗಿದ್ದರು.
ಕಾರ್ಕಳ ತಾಲೂಕಿನ ಸಾಲ್ಮರದ ನಿವಾಸಿಗಳಾದ ದಿವಂಗತ ಫೆಲಿಕ್ಸ್ ಮಿನೇಜಸ್ ಮತ್ತು ಮೇರಿ ಮಿನೇಜಸ್ ದಂಪತಿಯ ಮಗಳು ಆಗ್ನೆಸ್ ಪ್ರಫುಲ್ಲ ಮಿನೇಜಸ್ ಸೇನೆಯಲ್ಲಿ ಕರ್ತವದಲ್ಲಿದ್ದಾರೆ. ಹಲವು ವರ್ಷಗಳಿಂದ ಇಂಡಿಯನ್ ಆರ್ಮಿಯಲ್ಲಿ ಕರ್ತವದಲ್ಲಿರುವ ಆಗ್ನೆಸ್ ಪ್ರಫುಲ್ಲ ಸದ್ಯ ಲೆಫ್ಟಿನೆಂಟ್ ಹುದ್ದೆಯಲ್ಲಿದ್ದಾರೆ.

ಕರ್ತವ್ಯದ ಮಧ್ಯೆ ಹರ್ಜಿಂದರ್ ಸಿಂಗ್ ಮತ್ತು ಆಗ್ನೆಸ್ ಪ್ರಫುಲ್ಲ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಮದುವೆಯಾದ ಬಳಿಕ ತಂದೆ- ತಾಯಿ ನೆಲೆಸಿದ್ದ ಸಾಲ್ಮರಕ್ಕೆ ದಂಪತಿ ಹಲವು ಬಾರಿ ಭೇಟಿ ನೀಡಿದ್ದರು. ರಜೆ ಸಂದರ್ಭಗಳಲ್ಲಿ ಹರ್ಜಿಂದರ್ ಸಿಂಗ್ ಮತ್ತು ಆಗ್ನೆಸ್ ಊರಿಗೆ ಬಂದು ಹೋಗುತ್ತಿದ್ದರು ಎಂದು ಅಲ್ಲಿನ ಸಂಬಂಧಿಕರು ನೆನೆಯುತ್ತಾರೆ.
ಆಗ್ನೆಸ್ ಪ್ರಫುಲ್ಲ ಅವರ ತಾಯಿ ಮೇರಿ ಮಿನೇಜಸ್ ಈಗಲೂ ಸಾಲ್ಮರದ ಮೂಲ ಮನೆಯಲ್ಲೇ ಇದ್ದಾರೆ. ಡಿ.8ರ ಹೆಲಿಕಾಪ್ಟರ್ ದುರಂತದಲ್ಲಿ ಹರ್ಜಿಂದರ್ ಸಿಂಗ್ ಹೆಸರೂ ಇರುವುದು ತಿಳಿಯುತ್ತಿದ್ದಂತೆ, ಸಂಬಂಧಿಕರು ಮತ್ತು ಮನೆಮಂದಿ ಶೋಕಕ್ಕೆ ಒಳಗಾಗಿದ್ದಾರೆ.
Karkala has lost its son-in-law in the helicopter crash which happened in Coonoor on Wednesday December 8. Lt Col Harjinder Singh happened to be the son-in-law of Karkala origin Late Felix Menezes and Mary Menezes. Harjinder Singh had married Lt Agnes Prafulla Menezes, daughter of the late Felix and Mary Menezes of Salmara here in Karkala.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm