ಬ್ರೇಕಿಂಗ್ ನ್ಯೂಸ್
15-12-21 01:47 pm HK Desk news ದೇಶ - ವಿದೇಶ
ನವದೆಹಲಿ, ಡಿ. 15 : ಹೆಲಿಕಾಪ್ಟರ್ ದುರಂತದಲ್ಲಿ ತೀವ್ರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಕೊನೆಯುಸಿರೆಳೆದಿದ್ದಾರೆ.
ತಮಿಳುನಾಡಿನ ಊಟಿ ಬಳಿಯ ಕುನ್ನೂರಿನಲ್ಲಿ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದಿದ್ದ ಏಕೈಕ ವ್ಯಕ್ತಿ, ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಮ್ಮನ್ನು ಅಗಲಿದ್ದಾರೆ. ಈ ಬಗ್ಗೆ ಭಾರತೀಯ ವಾಯುಪಡೆ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪ್ರಕಟಿಸಿದೆ.
ಕಳೆದ ಗುರುವಾರ ತಮಿಳುನಾಡಿನ ವೆಲ್ಲಿಂಗ್ಟನ್ ಮಿಲಿಟರಿ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ವರುಣ್ ಅವರನ್ನು ಬೆಂಗಳೂರಿನ ಕಮಾಂಡೋ ಆಸ್ಪತ್ರೆಗೆ ಕರೆತರಲಾಗಿತ್ತು. ಹೆಲಿಕಾಪ್ಟರ್ ಅವಘಡದಲ್ಲಿ ಸಿಡಿಎಸ್ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ಸೇರಿ 13 ಮಂದಿ ಮೃತಪಟ್ಟಿದ್ದರು.
‘ವರುಣ್ ಸಿಂಗ್ ಅವರ ದೇಹದಲ್ಲಿ 70 ಶೇಕಡಾ ಪ್ರಮಾಣ ಸುಟ್ಟ ಗಾಯಗಳಾಗಿದ್ದವು. ಅವರಿಗೆ ಸಾಕಷ್ಟು ಚರ್ಮದ ಅಗತ್ಯವಿದೆ. ಕಮಾಂಡೋ ಆಸ್ಪತ್ರೆಯವರ ಮನವಿ ಮೇರೆಗೆ 1 ಸಾವಿರ ಚದರ ಸೆಂ.ಮೀ. ಚರ್ಮವನ್ನು ನೀಡಲಾಗಿದೆ. ಇನ್ನಷ್ಟು ಚರ್ಮ ಬೇಕಾದರೆ ಮುಂಬೈ ಮತ್ತು ಚೆನ್ನೈನಲ್ಲಿರುವ ಚರ್ಮ ಬ್ಯಾಂಕ್ಗಳಿಂದ ತರಿಸಿ ಕೊಡಲಾಗುತ್ತದೆ’ ಎಂದು ವಿಕ್ಟೋರಿಯಾ ಆಸ್ಪತ್ರೆಯ ಮೂಲಗಳು ತಿಳಿಸಿದ್ದವು. ಕಳೆದ ವರ್ಷ ತೇಜಸ್ ಯುದ್ಧ ವಿಮಾನವನ್ನು ಅಪಘಾತದಿಂದ ತಪ್ಪಿಸಿದ್ದಕ್ಕಾಗಿ ಆಗಸ್ಟ್ನಲ್ಲಿ ವರುಣ್ ಅವರಿಗೆ ಶೌರ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.
Group Captain Varun Singh- the lone survivor in the IAF helicopter crash that claimed lives of 13 people including CDS General Rawat passed away on Wednesday.
18-08-25 10:47 pm
Bangalore Correspondent
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
SIT, Dharmasthala Case, Pralhad Joshi: ಯಾರೋ ಅ...
18-08-25 01:25 pm
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
18-08-25 09:19 pm
HK News Desk
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am