ಬ್ರೇಕಿಂಗ್ ನ್ಯೂಸ್
15-12-21 01:47 pm HK Desk news ದೇಶ - ವಿದೇಶ
ನವದೆಹಲಿ, ಡಿ. 15 : ಹೆಲಿಕಾಪ್ಟರ್ ದುರಂತದಲ್ಲಿ ತೀವ್ರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಕೊನೆಯುಸಿರೆಳೆದಿದ್ದಾರೆ.
ತಮಿಳುನಾಡಿನ ಊಟಿ ಬಳಿಯ ಕುನ್ನೂರಿನಲ್ಲಿ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದಿದ್ದ ಏಕೈಕ ವ್ಯಕ್ತಿ, ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಮ್ಮನ್ನು ಅಗಲಿದ್ದಾರೆ. ಈ ಬಗ್ಗೆ ಭಾರತೀಯ ವಾಯುಪಡೆ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪ್ರಕಟಿಸಿದೆ.
ಕಳೆದ ಗುರುವಾರ ತಮಿಳುನಾಡಿನ ವೆಲ್ಲಿಂಗ್ಟನ್ ಮಿಲಿಟರಿ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ವರುಣ್ ಅವರನ್ನು ಬೆಂಗಳೂರಿನ ಕಮಾಂಡೋ ಆಸ್ಪತ್ರೆಗೆ ಕರೆತರಲಾಗಿತ್ತು. ಹೆಲಿಕಾಪ್ಟರ್ ಅವಘಡದಲ್ಲಿ ಸಿಡಿಎಸ್ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ಸೇರಿ 13 ಮಂದಿ ಮೃತಪಟ್ಟಿದ್ದರು.
‘ವರುಣ್ ಸಿಂಗ್ ಅವರ ದೇಹದಲ್ಲಿ 70 ಶೇಕಡಾ ಪ್ರಮಾಣ ಸುಟ್ಟ ಗಾಯಗಳಾಗಿದ್ದವು. ಅವರಿಗೆ ಸಾಕಷ್ಟು ಚರ್ಮದ ಅಗತ್ಯವಿದೆ. ಕಮಾಂಡೋ ಆಸ್ಪತ್ರೆಯವರ ಮನವಿ ಮೇರೆಗೆ 1 ಸಾವಿರ ಚದರ ಸೆಂ.ಮೀ. ಚರ್ಮವನ್ನು ನೀಡಲಾಗಿದೆ. ಇನ್ನಷ್ಟು ಚರ್ಮ ಬೇಕಾದರೆ ಮುಂಬೈ ಮತ್ತು ಚೆನ್ನೈನಲ್ಲಿರುವ ಚರ್ಮ ಬ್ಯಾಂಕ್ಗಳಿಂದ ತರಿಸಿ ಕೊಡಲಾಗುತ್ತದೆ’ ಎಂದು ವಿಕ್ಟೋರಿಯಾ ಆಸ್ಪತ್ರೆಯ ಮೂಲಗಳು ತಿಳಿಸಿದ್ದವು. ಕಳೆದ ವರ್ಷ ತೇಜಸ್ ಯುದ್ಧ ವಿಮಾನವನ್ನು ಅಪಘಾತದಿಂದ ತಪ್ಪಿಸಿದ್ದಕ್ಕಾಗಿ ಆಗಸ್ಟ್ನಲ್ಲಿ ವರುಣ್ ಅವರಿಗೆ ಶೌರ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.
Group Captain Varun Singh- the lone survivor in the IAF helicopter crash that claimed lives of 13 people including CDS General Rawat passed away on Wednesday.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm