ಬ್ರೇಕಿಂಗ್ ನ್ಯೂಸ್
15-12-21 01:47 pm HK Desk news ದೇಶ - ವಿದೇಶ
ನವದೆಹಲಿ, ಡಿ. 15 : ಹೆಲಿಕಾಪ್ಟರ್ ದುರಂತದಲ್ಲಿ ತೀವ್ರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಕೊನೆಯುಸಿರೆಳೆದಿದ್ದಾರೆ.
ತಮಿಳುನಾಡಿನ ಊಟಿ ಬಳಿಯ ಕುನ್ನೂರಿನಲ್ಲಿ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದಿದ್ದ ಏಕೈಕ ವ್ಯಕ್ತಿ, ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಮ್ಮನ್ನು ಅಗಲಿದ್ದಾರೆ. ಈ ಬಗ್ಗೆ ಭಾರತೀಯ ವಾಯುಪಡೆ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪ್ರಕಟಿಸಿದೆ.
ಕಳೆದ ಗುರುವಾರ ತಮಿಳುನಾಡಿನ ವೆಲ್ಲಿಂಗ್ಟನ್ ಮಿಲಿಟರಿ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ವರುಣ್ ಅವರನ್ನು ಬೆಂಗಳೂರಿನ ಕಮಾಂಡೋ ಆಸ್ಪತ್ರೆಗೆ ಕರೆತರಲಾಗಿತ್ತು. ಹೆಲಿಕಾಪ್ಟರ್ ಅವಘಡದಲ್ಲಿ ಸಿಡಿಎಸ್ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ಸೇರಿ 13 ಮಂದಿ ಮೃತಪಟ್ಟಿದ್ದರು.
‘ವರುಣ್ ಸಿಂಗ್ ಅವರ ದೇಹದಲ್ಲಿ 70 ಶೇಕಡಾ ಪ್ರಮಾಣ ಸುಟ್ಟ ಗಾಯಗಳಾಗಿದ್ದವು. ಅವರಿಗೆ ಸಾಕಷ್ಟು ಚರ್ಮದ ಅಗತ್ಯವಿದೆ. ಕಮಾಂಡೋ ಆಸ್ಪತ್ರೆಯವರ ಮನವಿ ಮೇರೆಗೆ 1 ಸಾವಿರ ಚದರ ಸೆಂ.ಮೀ. ಚರ್ಮವನ್ನು ನೀಡಲಾಗಿದೆ. ಇನ್ನಷ್ಟು ಚರ್ಮ ಬೇಕಾದರೆ ಮುಂಬೈ ಮತ್ತು ಚೆನ್ನೈನಲ್ಲಿರುವ ಚರ್ಮ ಬ್ಯಾಂಕ್ಗಳಿಂದ ತರಿಸಿ ಕೊಡಲಾಗುತ್ತದೆ’ ಎಂದು ವಿಕ್ಟೋರಿಯಾ ಆಸ್ಪತ್ರೆಯ ಮೂಲಗಳು ತಿಳಿಸಿದ್ದವು. ಕಳೆದ ವರ್ಷ ತೇಜಸ್ ಯುದ್ಧ ವಿಮಾನವನ್ನು ಅಪಘಾತದಿಂದ ತಪ್ಪಿಸಿದ್ದಕ್ಕಾಗಿ ಆಗಸ್ಟ್ನಲ್ಲಿ ವರುಣ್ ಅವರಿಗೆ ಶೌರ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.
Group Captain Varun Singh- the lone survivor in the IAF helicopter crash that claimed lives of 13 people including CDS General Rawat passed away on Wednesday.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am