ಬ್ರೇಕಿಂಗ್ ನ್ಯೂಸ್
16-12-21 03:34 pm HK Desk news ದೇಶ - ವಿದೇಶ
ತಿರುವನಂತಪುರ, ಡಿ.16 : ವರ್ಷದ ಹಿಂದಷ್ಟೇ ಬಿಜೆಪಿ ಸೇರ್ಪಡೆಗೊಂಡು ಪಾಲಕ್ಕಾಡ್ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಗಮನ ಸೆಳೆದಿದ್ದ ದಿಲ್ಲಿಯ ಮೆಟ್ರೋ ಮ್ಯಾನ್ ಎಂದೇ ಹೆಸರಾಗಿದ್ದ ಇ.ಶ್ರೀಧರನ್ ರಾಜಕೀಯದಿಂದ ದೂರ ಸರಿಯುವುದಾಗಿ ಹೇಳಿದ್ದಾರೆ.
ನಾನಿನ್ನು ರಾಜಕಾರಣಿಯಾಗಿ ಮುಂದುವರಿಯುವುದಿಲ್ಲ. ನಾನು ಸಕ್ರಿಯ ರಾಜಕಾರಣದಿಂದ ಹಿಂದೆ ಸರಿಯುತ್ತೇನೆ. ನನಗೀಗ 90 ವರ್ಷ. ಈ ಪ್ರಾಯದಲ್ಲಿ ರಾಜಕೀಯ ನಡೆಸುವುದು ಅಪಾಯಕಾರಿ. ನನಗೆ ರಾಜಕೀಯದಲ್ಲಿ ಯಾವುದೇ ಸಾಧನೆ ಮಾಡುವ ಕನಸು ಕೂಡ ಉಳಿದಿಲ್ಲ. ನನಗೆ ಸಮಾಜ ಸೇವೆ ಮಾಡಲು ರಾಜಕೀಯ ಬೇಕಾಗಿಲ್ಲ. ಈಗಾಗಲೇ ಮೂರು ಟ್ರಸ್ಟ್ ನಡೆಸುತ್ತಿದ್ದು, ಅದರಲ್ಲಿಯೇ ಸಮಾಜಸೇವೆ ಮುಂದುವರಿಸುತ್ತೇವೆ ಎಂದು ಇ.ಶ್ರೀಧರನ್ ಹೇಳಿದ್ದಾರೆ.
ಕಳೆದ ಬಾರಿ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಮೆಟ್ರೋ ಮ್ಯಾನ್ ಶ್ರೀಧರನ್ ಅವರನ್ನು ಬಿಜೆಪಿ ಪಕ್ಷಕ್ಕೆ ಸೇರಿಸಿಕೊಂಡಿತ್ತು. ಪಾಲಕ್ಕಾಡ್ ವಿಧಾನಸಭೆ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಶ್ರೀಧರನ್, ಹಾಲಿ ಶಾಸಕರಾಗಿದ್ದ ಶಾಫಿ ಪರಂಬಿಲ್ ವಿರುದ್ಧ ತೀವ್ರ ಸ್ಪರ್ಧೆ ಒಡ್ಡಿ 3859 ಮತಗಳಿಂದ ಸೋಲು ಕಂಡಿದ್ದರು. ಬಿಜೆಪಿ ರಾಜ್ಯದಲ್ಲಿ 35 ಸೀಟುಗಳನ್ನು ಗೆಲ್ಲಲು ಪ್ಲಾನ್ ಹಾಕಿತ್ತು. ಫಲಿತಾಂಶ ಬಂದಾಗ ಒಂದು ಸ್ಥಾನ ಇದ್ದ ನೆಮ್ಮಮ್ ಕ್ಷೇತ್ರವೂ ಬಿಜೆಪಿ ಕಳಕೊಂಡಿತ್ತು. ಎಲ್ಲ ಕಡೆಯೂ ತುರುಸಿನ ಸ್ಪರ್ಧೆ ಒಡ್ಡಿದ್ದ ಬಿಜೆಪಿ ಅಲ್ಪ ಅಂತರದಿಂದ ಸೋಲು ಕಂಡಿತ್ತು.
ದೆಹಲಿ ಮೆಟ್ರೋ ಕಾಮಗಾರಿಯ ಪ್ಲಾನ್ ಮಾಡಿ, ಜನಮೆಚ್ಚುಗೆ ಪಡೆದಿದ್ದ ಕೇರಳ ಪಾಲಕ್ಕಾಡ್ ಮೂಲದ ಶ್ರೀಧರನ್ ಮೂಲತಃ ಸಿವಿಲ್ ಇಂಜಿನಿಯರ್ ಆಗಿದ್ದು ರಾಷ್ಟ್ರ ಮಟ್ಟದಲ್ಲಿ ಖ್ಯಾತಿ ಹೊಂದಿದ್ದಾರೆ.
Metroman E Sreedharan has quit active politics, less than a year after he joined the Bharatiya Janata Party.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm