ಬ್ರೇಕಿಂಗ್ ನ್ಯೂಸ್
16-12-21 03:34 pm HK Desk news ದೇಶ - ವಿದೇಶ
ತಿರುವನಂತಪುರ, ಡಿ.16 : ವರ್ಷದ ಹಿಂದಷ್ಟೇ ಬಿಜೆಪಿ ಸೇರ್ಪಡೆಗೊಂಡು ಪಾಲಕ್ಕಾಡ್ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಗಮನ ಸೆಳೆದಿದ್ದ ದಿಲ್ಲಿಯ ಮೆಟ್ರೋ ಮ್ಯಾನ್ ಎಂದೇ ಹೆಸರಾಗಿದ್ದ ಇ.ಶ್ರೀಧರನ್ ರಾಜಕೀಯದಿಂದ ದೂರ ಸರಿಯುವುದಾಗಿ ಹೇಳಿದ್ದಾರೆ.
ನಾನಿನ್ನು ರಾಜಕಾರಣಿಯಾಗಿ ಮುಂದುವರಿಯುವುದಿಲ್ಲ. ನಾನು ಸಕ್ರಿಯ ರಾಜಕಾರಣದಿಂದ ಹಿಂದೆ ಸರಿಯುತ್ತೇನೆ. ನನಗೀಗ 90 ವರ್ಷ. ಈ ಪ್ರಾಯದಲ್ಲಿ ರಾಜಕೀಯ ನಡೆಸುವುದು ಅಪಾಯಕಾರಿ. ನನಗೆ ರಾಜಕೀಯದಲ್ಲಿ ಯಾವುದೇ ಸಾಧನೆ ಮಾಡುವ ಕನಸು ಕೂಡ ಉಳಿದಿಲ್ಲ. ನನಗೆ ಸಮಾಜ ಸೇವೆ ಮಾಡಲು ರಾಜಕೀಯ ಬೇಕಾಗಿಲ್ಲ. ಈಗಾಗಲೇ ಮೂರು ಟ್ರಸ್ಟ್ ನಡೆಸುತ್ತಿದ್ದು, ಅದರಲ್ಲಿಯೇ ಸಮಾಜಸೇವೆ ಮುಂದುವರಿಸುತ್ತೇವೆ ಎಂದು ಇ.ಶ್ರೀಧರನ್ ಹೇಳಿದ್ದಾರೆ.
ಕಳೆದ ಬಾರಿ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಮೆಟ್ರೋ ಮ್ಯಾನ್ ಶ್ರೀಧರನ್ ಅವರನ್ನು ಬಿಜೆಪಿ ಪಕ್ಷಕ್ಕೆ ಸೇರಿಸಿಕೊಂಡಿತ್ತು. ಪಾಲಕ್ಕಾಡ್ ವಿಧಾನಸಭೆ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಶ್ರೀಧರನ್, ಹಾಲಿ ಶಾಸಕರಾಗಿದ್ದ ಶಾಫಿ ಪರಂಬಿಲ್ ವಿರುದ್ಧ ತೀವ್ರ ಸ್ಪರ್ಧೆ ಒಡ್ಡಿ 3859 ಮತಗಳಿಂದ ಸೋಲು ಕಂಡಿದ್ದರು. ಬಿಜೆಪಿ ರಾಜ್ಯದಲ್ಲಿ 35 ಸೀಟುಗಳನ್ನು ಗೆಲ್ಲಲು ಪ್ಲಾನ್ ಹಾಕಿತ್ತು. ಫಲಿತಾಂಶ ಬಂದಾಗ ಒಂದು ಸ್ಥಾನ ಇದ್ದ ನೆಮ್ಮಮ್ ಕ್ಷೇತ್ರವೂ ಬಿಜೆಪಿ ಕಳಕೊಂಡಿತ್ತು. ಎಲ್ಲ ಕಡೆಯೂ ತುರುಸಿನ ಸ್ಪರ್ಧೆ ಒಡ್ಡಿದ್ದ ಬಿಜೆಪಿ ಅಲ್ಪ ಅಂತರದಿಂದ ಸೋಲು ಕಂಡಿತ್ತು.
ದೆಹಲಿ ಮೆಟ್ರೋ ಕಾಮಗಾರಿಯ ಪ್ಲಾನ್ ಮಾಡಿ, ಜನಮೆಚ್ಚುಗೆ ಪಡೆದಿದ್ದ ಕೇರಳ ಪಾಲಕ್ಕಾಡ್ ಮೂಲದ ಶ್ರೀಧರನ್ ಮೂಲತಃ ಸಿವಿಲ್ ಇಂಜಿನಿಯರ್ ಆಗಿದ್ದು ರಾಷ್ಟ್ರ ಮಟ್ಟದಲ್ಲಿ ಖ್ಯಾತಿ ಹೊಂದಿದ್ದಾರೆ.
Metroman E Sreedharan has quit active politics, less than a year after he joined the Bharatiya Janata Party.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am