ಬ್ರೇಕಿಂಗ್ ನ್ಯೂಸ್
15-09-20 12:58 pm Headline Karnataka News Network ದೇಶ - ವಿದೇಶ
ಅಮರಾವತಿ, ಸೆಪ್ಟಂಬರ್ 15: ಆಂಧ್ರಪ್ರದೇಶದಲ್ಲಿ ವಿಧಾನ ಪರಿಷತ್ ರದ್ದುಗೊಳಿಸಲು ಕೇಂದ್ರ ಸರಕಾರ ಆದಷ್ಟು ಬೇಗ ನಿರ್ಣಯ ತೆಗೆದುಕೊಳ್ಳಬೇಕೆಂದು ಆಂಧ್ರ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ ಮನವಿ ಮಾಡಿದ್ದಾರೆ.
ಈ ಬಗ್ಗೆ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಪ್ರಸ್ತಾಪಿಸುವಂತೆ ವೈಎಸ್ಆರ್ ಪಕ್ಷದ ಸಂಸದರಿಗೆ ಜಗನ್ ರೆಡ್ಡಿ ಸೂಚನೆ ನೀಡಿದ್ದಾರೆ. ಎಪಿ ದಿಶಾ ಕ್ರಿಮಿನಲ್ ಲಾ (ತಿದ್ದುಪಡಿ) ಕಾಯ್ದೆ ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತಿ ರಾಷ್ಟ್ರಪತಿ ಅಂಕಿತ ಬೀಳುವಂತೆ ಮಾಡಲು ಕೇಂದ್ರವನ್ನು ಮನವಿ ಮಾಡಿದ್ದಾರೆ.
ಆಂಧ್ರಪ್ರದೇಶ ವಿಧಾನಸಭೆ ಕಳೆದ ಜನವರಿ 27ರಂದು ವಿಧಾನ ಪರಿಷತ್ ರದ್ದುಗೊಳಿಸಲು ನಿರ್ಣಯ ತೆಗೆದುಕೊಂಡಿತ್ತು. ಆದರೆ ಸಂವಿಧಾನಾತ್ಮಕ ಅಂಗವೊಂದನ್ನು ರದ್ದುಪಡಿಸಲು ಕೇಂದ್ರ ಸರಕಾರದ ಅನುಮತಿ ಬೇಕಾಗುತ್ತದೆ. ಅದಕ್ಕಾಗಿ ಈಗ ಸಂಸತ್ತಿನ ಅಧಿವೇಶನದಲ್ಲಿ ಪ್ರಸ್ತಾಪ ಮಾಡುವಂತೆ ತನ್ನ ಸಂಸದರಿಗೆ ಜಗನ್ ರೆಡ್ಡಿ ಒತ್ತಾಯಿಸಿದ್ದಾರೆ. 58 ಸದಸ್ಯ ಬಲದ ವಿಧಾನ ಪರಿಷತ್ತಿನಲ್ಲಿ ತೆಲುಗು ದೇಶಂ ಪಕ್ಷದ ಸದಸ್ಯರು ಬಹುಮತ ಹೊಂದಿದ್ದು, ಶಾಸನ ಸಭೆಯಲ್ಲಿ ಪಾಸ್ ಮಾಡಿದ ಪ್ರಮುಖ ಮಸೂದೆಗಳು ಜಾರಿಯಾಗದೆ ಉಳಿದುಕೊಂಡಿವೆ. ಇದಕ್ಕಾಗಿ ವಿಧಾನ ಪರಿಷತ್ತನ್ನೇ ರದ್ದುಪಡಿಸುವ ಅಪಾಯಕಾರಿ ನಡೆಗೆ ಅಲ್ಲಿನ ಮುಖ್ಯಮಂತ್ರಿ ಮುಂದಾಗಿದ್ದಾರೆ.
ಕಳೆದ ವರ್ಷ ಯುವತಿ ಒಬ್ಬಳ ರೇಪ್ ಅಂಡ್ ಮರ್ಡರ್ ಪ್ರಕರಣ ಸಂಚಲನ ಮೂಡಿಸಿದ ಸಂದರ್ಭದಲ್ಲಿ ಶೀಘ್ರ ತನಿಖೆಗಾಗಿ ಆಂಧ್ರ ಪ್ರದೇಶ ಸರಕಾರ ದಿಶಾ ಹೆಸರಲ್ಲಿ ಎಪಿ ದಿಶಾ ಕ್ರಿಮಿನಲ್ ಬಿಲ್ ತಂದಿತ್ತು. ಆದರೆ ಈ ಮಸೂದೆ ರಾಷ್ಟ್ರಪತಿ ಅಂಕಿತ ಸಿಗದೆ ಇನ್ನೂ ಕಾಯ್ದೆ ರೂಪದಲ್ಲಿ ಜಾರಿಗೆ ಬಂದಿಲ್ಲ. ವಿಧಾನ ಪರಿಷತ್ ರದ್ದು ಮತ್ತು ರಾಷ್ಟ್ರಪತಿ ಅಂಕಿತ ಎರಡು ವಿಚಾರದಲ್ಲೂ ಸಂಸತ್ತಿನಲ್ಲಿ ಧ್ವನಿ ಎತ್ತಲು ಸಿಎಂ ಜಗನ್ ರೆಡ್ಡಿ ತಂತ್ರ ರೂಪಿಸಿದ್ದಾರೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm