ಬ್ರೇಕಿಂಗ್ ನ್ಯೂಸ್
15-09-20 12:58 pm Headline Karnataka News Network ದೇಶ - ವಿದೇಶ
ಅಮರಾವತಿ, ಸೆಪ್ಟಂಬರ್ 15: ಆಂಧ್ರಪ್ರದೇಶದಲ್ಲಿ ವಿಧಾನ ಪರಿಷತ್ ರದ್ದುಗೊಳಿಸಲು ಕೇಂದ್ರ ಸರಕಾರ ಆದಷ್ಟು ಬೇಗ ನಿರ್ಣಯ ತೆಗೆದುಕೊಳ್ಳಬೇಕೆಂದು ಆಂಧ್ರ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ ಮನವಿ ಮಾಡಿದ್ದಾರೆ.
ಈ ಬಗ್ಗೆ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಪ್ರಸ್ತಾಪಿಸುವಂತೆ ವೈಎಸ್ಆರ್ ಪಕ್ಷದ ಸಂಸದರಿಗೆ ಜಗನ್ ರೆಡ್ಡಿ ಸೂಚನೆ ನೀಡಿದ್ದಾರೆ. ಎಪಿ ದಿಶಾ ಕ್ರಿಮಿನಲ್ ಲಾ (ತಿದ್ದುಪಡಿ) ಕಾಯ್ದೆ ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತಿ ರಾಷ್ಟ್ರಪತಿ ಅಂಕಿತ ಬೀಳುವಂತೆ ಮಾಡಲು ಕೇಂದ್ರವನ್ನು ಮನವಿ ಮಾಡಿದ್ದಾರೆ.
ಆಂಧ್ರಪ್ರದೇಶ ವಿಧಾನಸಭೆ ಕಳೆದ ಜನವರಿ 27ರಂದು ವಿಧಾನ ಪರಿಷತ್ ರದ್ದುಗೊಳಿಸಲು ನಿರ್ಣಯ ತೆಗೆದುಕೊಂಡಿತ್ತು. ಆದರೆ ಸಂವಿಧಾನಾತ್ಮಕ ಅಂಗವೊಂದನ್ನು ರದ್ದುಪಡಿಸಲು ಕೇಂದ್ರ ಸರಕಾರದ ಅನುಮತಿ ಬೇಕಾಗುತ್ತದೆ. ಅದಕ್ಕಾಗಿ ಈಗ ಸಂಸತ್ತಿನ ಅಧಿವೇಶನದಲ್ಲಿ ಪ್ರಸ್ತಾಪ ಮಾಡುವಂತೆ ತನ್ನ ಸಂಸದರಿಗೆ ಜಗನ್ ರೆಡ್ಡಿ ಒತ್ತಾಯಿಸಿದ್ದಾರೆ. 58 ಸದಸ್ಯ ಬಲದ ವಿಧಾನ ಪರಿಷತ್ತಿನಲ್ಲಿ ತೆಲುಗು ದೇಶಂ ಪಕ್ಷದ ಸದಸ್ಯರು ಬಹುಮತ ಹೊಂದಿದ್ದು, ಶಾಸನ ಸಭೆಯಲ್ಲಿ ಪಾಸ್ ಮಾಡಿದ ಪ್ರಮುಖ ಮಸೂದೆಗಳು ಜಾರಿಯಾಗದೆ ಉಳಿದುಕೊಂಡಿವೆ. ಇದಕ್ಕಾಗಿ ವಿಧಾನ ಪರಿಷತ್ತನ್ನೇ ರದ್ದುಪಡಿಸುವ ಅಪಾಯಕಾರಿ ನಡೆಗೆ ಅಲ್ಲಿನ ಮುಖ್ಯಮಂತ್ರಿ ಮುಂದಾಗಿದ್ದಾರೆ.
ಕಳೆದ ವರ್ಷ ಯುವತಿ ಒಬ್ಬಳ ರೇಪ್ ಅಂಡ್ ಮರ್ಡರ್ ಪ್ರಕರಣ ಸಂಚಲನ ಮೂಡಿಸಿದ ಸಂದರ್ಭದಲ್ಲಿ ಶೀಘ್ರ ತನಿಖೆಗಾಗಿ ಆಂಧ್ರ ಪ್ರದೇಶ ಸರಕಾರ ದಿಶಾ ಹೆಸರಲ್ಲಿ ಎಪಿ ದಿಶಾ ಕ್ರಿಮಿನಲ್ ಬಿಲ್ ತಂದಿತ್ತು. ಆದರೆ ಈ ಮಸೂದೆ ರಾಷ್ಟ್ರಪತಿ ಅಂಕಿತ ಸಿಗದೆ ಇನ್ನೂ ಕಾಯ್ದೆ ರೂಪದಲ್ಲಿ ಜಾರಿಗೆ ಬಂದಿಲ್ಲ. ವಿಧಾನ ಪರಿಷತ್ ರದ್ದು ಮತ್ತು ರಾಷ್ಟ್ರಪತಿ ಅಂಕಿತ ಎರಡು ವಿಚಾರದಲ್ಲೂ ಸಂಸತ್ತಿನಲ್ಲಿ ಧ್ವನಿ ಎತ್ತಲು ಸಿಎಂ ಜಗನ್ ರೆಡ್ಡಿ ತಂತ್ರ ರೂಪಿಸಿದ್ದಾರೆ.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
05-03-26 05:02 pm
HK News Staffer
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
05-03-26 04:36 pm
HK News Staffer
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm